ಉತ್ತರಪ್ರಭ

ಬೆಳಗಾವಿ: ಸೈನಿಕರಿಗೆ ನೀಡುವ ಪ್ರಶಸ್ತಿ ಮೊತ್ತವನ್ನು 5 ಪಟ್ಟು ಹೆಚ್ಚಿಸಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಣೆ.ನಗದು ಅನುದಾನದ ಮೊತ್ತದ ಬಗ್ಗೆ ಪರಿಷ್ಕರಣೆ ನಡೆಸಿದ ಸರ್ಕಾರ ಶೌರ್ಯ ಪ್ರಶಸ್ತಿ ವಿಜೇತರಿಗೆ ನೀಡುವ ನಗದು ಅನುದಾನವನ್ನು ಇದೀಗ ಐದು ಪಟ್ಟು ಹೆಚ್ಚಿಸಿದೆ.

ಪರಮವೀರ ಚಕ್ರ 25 ಲಕ್ಷದಿಂದ 1.5 ಕೋಟಿ ರೂ. ಗೆ ಹೆಚ್ಚಳ ಮಾಡಲಾಗಿದೆ. ಮಹಾವೀರ ಚಕ್ರ 12 ಲಕ್ಷದಿಂದ 1 ಕೋಟಿ‌ ರೂಪಾಯಿ, ಅಶೋಕ ಚಕ್ರ 25 ಲಕ್ಷದಿಂದ 1.5 ಕೋಟಿ ರೂಪಾಯಿ, ಕೀರ್ತಿ ಚಕ್ರ 12 ಲಕ್ಷದಿಂದ 1 ಕೋಟಿ ರೂಪಾಯಿ, ವೀರ ಚಕ್ರ 8 ಲಕ್ಷದಿಂದ 50 ಲಕ್ಷ ರೂಪಾಯಿ, ಶೌರ್ಯ ಚಕ್ರ 8 ಲಕ್ಷದಿಂದ 50 ಲಕ್ಷ ರೂಪಾಯಿ, ಸೇನಾ ಮೆಡಲ್‌ 2 ಲಕ್ಷದಿಂದ 15 ಲಕ್ಷ ರೂಪಾಯಿಗೆ ಹೆಚ್ಚಳ ಮಾಡಿ ಸಿಎಂ ಆದೇಶಿದ್ದಾರೆ.

ಪ್ರಶಸ್ತಿ ವಿಜೇತರಿಗೆ ಸುಮಾರು ಐದು ಪಟ್ಟು ಅನುದಾನವನ್ನು ಹೆಚ್ವಿಸಲಾಗಿದೆ. ಅವರ ಬಹಳ ವರ್ಷಗಳ ಬೇಡಿಕೆಯನ್ನು ಈಡೇರಿಸಿ ಆದೇಶವನ್ನು ಹೊರಡಿಸಿದೆ. ಇದು ಸೇನೆಗೆ ನಾವು ಸಲ್ಲಿಸುವ ಗೌರವ. ನಿವೃತ್ತರಾದ ಮೇಲೆ ಉತ್ತಮ ಜೀವನ ನಡೆಸಲು ಹಾಗೂ ಸಾವನ್ನಪ್ಪಿದಾಗ ಸಹಾಯ ಮಾಡುತ್ತಾ ಬಂದಿದ್ದೇವೆ. ಅವರನ್ನು ಗೌರವಿಸುವ ನಿಟ್ಟಿನಲ್ಲಿ ಅನುದಾನವನ್ನು ಹೆಚ್ವಿಸಲಾಗಿದೆ ಎಂದರು.

Leave a Reply

Your email address will not be published. Required fields are marked *

You May Also Like

ಕೊರೊನಾ ಕಾರಣದಿಂದ ಅಭಿವೃದ್ಧಿ ಕಾರ್ಯಗಳಿಗೆ ಹಿನ್ನಡೆ- ಸಿ.ಸಿ.ಪಾಟೀಲ್

ಕೊರೋನಾದ ಪರಿಣಾಮದಿಂದ ಕಂಗಾಲಾದ ನಾವು ನೀವೆಲ್ಲರೂ ಇದೀಗ ಹೊರಗಡೆ ಬಂದಂತಾಗಿದೆ, ಸುಮಾರು ದಿನಗಳಿಂದ ಯಾವುದೇ ಅಭಿವೃದ್ಧಿ ಕಾಮಗಾರಿಗಳ ಪೂಜೆ ಮಾಡದೇ ಇರುವುದಕ್ಕೆ ಕಾರಣ ಈ ಮಹಾಮಾರಿ ಕರೋನ. ಇದರಿಂದ ದೇಶದ ಬೊಕ್ಕಸ, ರಾಜ್ಯದ ಬೊಕ್ಕಸ, ವ್ಯಾಪಾರಸ್ಥರಿಗೆ ಹಿನ್ನೆಡೆ ಮತ್ತು ಉದ್ಯಮಿಗಳಿಗೆ ಭಾರೀ ತೊಂದರೆ ಉಂಟಾಗಿದೆ ಎಂದು ಸಚಿವ ಸಿ.ಸಿ.ಪಾಟೀಲ್ ಹೇಳಿದರು.

ಅವೈಜ್ಞಾನಿಕ ಚರಂಡಿ ನಿರ್ಮಾಣ 50ಕ್ಕೂ ಮನೆಗಳಿಗೆ ನುಗ್ಗಿದ ಮಳೆ ನೀರು ಗ್ರಾಮಸ್ಥರ ಆರೋಪ

ಉತ್ತರಪ್ರಭ ಸುದ್ದಿ ನರೇಗಲ್: ಸಮೀಪದ ಕಳಕಾಪುರ ಗ್ರಾಮದಲ್ಲಿ ಶನಿವಾರ ರಾತ್ರಿ ಸುರಿದ ಮಳೆಯ ನೀರು 50ಕ್ಕೂ…

ರಾಜ್ಯ ಸರ್ಕಾರದಿಂದ ವಾಹನ ಸವಾರರಿಗೆ ಬಿಗ್ ಶಾಕ್ : ಉಚಿತ ಪಾರ್ಕಿಂಗ್ ರದ್ದು

ವಾಹನ ಸವಾರರಿಗೆ ರಾಜ್ಯ ಸರ್ಕಾರವು ಬಿಗ್ ಶಾಕ್ ನೀಡಿದ್ದು, ಬೆಂಗಳೂರಿನಲ್ಲಿ ಪ್ರಸ್ತುತ ಇರುವ ಉಚಿತ ಪಾರ್ಕಿಂಗ್ ವ್ಯವಸ್ಥೆಯನ್ನು ರದ್ದು ಮಾಡಲು ಗ್ರೀನ್ ಸಿಗ್ನಲ್ ನೀಡಿದೆ.ಪ್ರಸ್ತುತ ಬೆಂಗಳೂರಿನಲ್ಲಿ ಇರುವ ಬಹುತೇಕ ಉಚಿತ ಪಾರ್ಕಿಂಗ್ ವ್ಯವಸ್ಥೆಯನ್ನು ಪಾವತಿ ಪಾರ್ಕಿಂಗ್ ವ್ಯವಸ್ಥೆಗೆ ಬದಲಾಯಿಸುವುದು ಸೇರಿದಂತೆ ನಗರ ಭೂಸಾರಿಗೆ ನಿರ್ದೇಶನಾಲಯ ಸಿದ್ಧಪಡಿಸಿರುವ ಪರಿಷ್ಕೃತ ಪಾರ್ಕಿಂಗ್ ನೀತಿ 2.0 ಅನುಷ್ಠಾನಕ್ಕೆ ರಾಜ್ಯ ಸರ್ಕಾರ ಅನುಮೋದನೆ ನೀಡಿದೆ.

ನ್ಯಾಯಾಧೀಶರ ವಿರುದ್ಧ ಕ್ರಮಕ್ಕೆ ಆಗ್ರಹ: ದಲಿತ ಪರ ನಾನಾ ಸಂಘಟನೆಗಳಿಂದ ನಿಡಗುಂದಿಯಲ್ಲಿ ಭಾರೀ ಪ್ರತಿಭಟನೆ

ನಿಡಗುಂದಿ: ಸಂವಿಧಾನ ಕರ್ತೃ ಡಾ ಅಂಬೇಡ್ಕರ್ ಅವರ ಭಾವಚಿತ್ರ ತೆಗೆಸಿ ಅಪಮಾನ ಮಾಡಿರುವ ರಾಯಚೂರ ಜಿಲ್ಲಾ…