ಬೆಳಗಾವಿ: ಬೆಳಗಾವಿಯ ಚಳಿಗಾಲದ ವಿಧಾನಸಭೆ ಅಧಿವೇಶನದಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ಧಾರ್ಮಿಕ ಸ್ವಾತಂತ್ರ್ಯ ಸಂರಕ್ಷಣೆ ಹಕ್ಕು ಕಾಯ್ದೆ-2021 ಅನ್ನು ಮಂಗಳವಾರ ಮಂಡಿಸಿದರು. ಮಂಗಳವಾರ ಮಧ್ಯಾಹ್ನ ಊಟದ ನಂತರ ಕಲಾಪ ಆರಂಭವಾದ ತಕ್ಷಣ ವಿಧಾನಸಭೆಯಲ್ಲಿ ಮತಾಂತರ ನಿಷೇಧ ವಿಧೇಯಕ ಮಂಡನೆಗೆ ಸ್ಪೀಕರ್ ವಿಶ್ವೇಶ್ವರ್ ಹೆಗಡೆ ಕಾಗೇರಿ ಅವಕಾಶ ನೀಡಿದರು. ವಿರೋಧ ಪಕ್ಷದ ಸದಸ್ಯರು ತೀವ್ರ ವಿರೋಧ ವ್ಯಕ್ತಪಡಿಸಿದರು. ವಿಧೇಯಕದ ಪ್ರತಿ ಕೊಟ್ಟಿಲ್ಲ, ಚರ್ಚೆ ಮಾಡಿಲ್ಲ ಎಂದು ವಿರೋಧ ಪಕ್ಷಗಳ ಸದಸ್ಯರು ಆಕ್ಷೇಪಿಸಿದರು. ಇಂತಹ ವಿಧೇಯಕಗಳನ್ನು ಕದ್ದುಮುಚ್ಚಿ ಏಕೆ ತರುತ್ತೀರಿ. ರಾಜ್ಯ ಸರ್ಕಾರ ಕಳ್ಳತನದಿಂದ ವಿಧೇಯಕ ಮಂಡಿಸಿದೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಆಕ್ಷೇಪಿಸಿದರು. ಇದರ ಮಧ್ಯೆಯೇ ವಿಧಾನಸಭೆಯಲ್ಲಿ ಮತಾಂತರ ನಿಷೇಧ ವಿಧೇಯಕವನ್ನು ಗೃಹ ಸಚಿವ ಆರಗ ಜ್ಞಾನೇಂದ್ರ ಮಂಡಿಸಿದರು.

ಮತಾಂತರ ನಿಷೇಧ ಕಾಯ್ದೆ ವಿಧೆಯಕ ಮಂಡನೆ


ವಿಧಾನಸಭೆ ಸ್ಪೀಕರ್ ವಿಶ್ವೇಶ್ವರ್ ಹೆಗಡೆ ಕಾಗೇರಿ ವಿಧಾನದ ಪ್ರಕಾರ ಮತಾಂತರ ವಿರೋಧಿ ಮಸೂದೆಯನ್ನು ಮಂಡಿಸಲು ಸರ್ಕಾರಕ್ಕೆ ಅನುಮತಿ ನೀಡಿದರು ಮತ್ತು ಅದನ್ನು ನಾಳೆ (ಡಿಸೆಂಬರ್ 22) ಚರ್ಚೆಗೆ ತೆಗೆದುಕೊಳ್ಳಲಾಗುವುದು ಎಂದು ಘೋಷಿಸಿದರು.

Leave a Reply

Your email address will not be published. Required fields are marked *

You May Also Like

ಅಗಸ್ತ್ಯ ತೀರ್ಥ ಬಾವಿಯಲ್ಲಿ ನೀರುಪಾಲಾದ ಯುವಕ

ದೀಪಾವಳಿ ಹಬ್ಬಕ್ಕೆಂದು ಸಂಬಂಧಿಕರ ಊರಿಗೆ ಬಂದಿದ್ದ ಯುವಕ ನೀರುಪಾಲಾದ ಘಟನೆ ಗದಗ ಜಿಲ್ಲೆ ಲಕ್ಷ್ಮೇಶ್ವರ ಪಟ್ಟಣದಲ್ಲಿ ನಡೆದಿದೆ.

ಅಪ್ಪಾ.. ಅಪ್ಪಾ ಬೇಗ ಬಾ ಅಪ್ಪಾ ಎಂದ ಕಂದನನ್ನು ಮೊಬೈಲ್ ನಲ್ಲಿಯೇ ನೋಡಿ ಖುಷಿಪಟ್ಟ ವೈದ್ಯ

ಮಕ್ಕಳು ಅಪ್ಪನನ್ನು ನೋಡುತ್ತಲೇ ಅಪ್ಪಾ ಬೇಗ ಬಾ ಅಪ್ಪಾ ಎಂದು ಮಗು ಕೇಳಿಕೊಂಡಿದೆ. ನಿಜಕ್ಕೂ ವೈದ್ಯಕೀಯ ಸಿಬ್ಬಂಧಿಗಳ ಕಾರ್ಯ ಹಾಗೂ ತ್ಯಾಗ ಮಾತ್ರ ಪ್ರಶಂಸನೀಯ.

ಆನ್ ಲೈನ್ ತರಗತಿ ಹಾಜರಿಗೆ ವೈಫಲ್ಯ: ಆತ್ಮಹತ್ಯೆ ದಾರಿ ಹಿಡಿದ ವಿದ್ಯಾರ್ಥಿನಿ

9ನೇ ತರಗತಿ ವಿದ್ಯಾರ್ಥಿನಿ ಮಲಪ್ಪುರಂ ಜಿಲ್ಲೆಯಲ್ಲಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಈ ಕುರಿತು ಪ್ರತಿಕ್ರಿಯಿಸಿರುವ ಕುಟುಂಬಸ್ಥರು, ಆನ್ ಲೈನ್ ತರಗತಿಗೆ ಹಾಜರಾಗಲು ಸಾಧ್ಯವಾಗದೇ ಇರುವ ಕಾರಣಕ್ಕೆ ತೀವ್ರವಾಗಿ ತಳಮಳಕ್ಕೀಡಾಗಿ ಇಂತಹ ಕೃತ್ಯಕ್ಕೆ ಶರಣಾಗಿದ್ದಾಳೆ ಎಂದಿದ್ದಾರೆ. ಇವರು ಪರಿಶಿಷ್ಟ ಜಾತಿಗೆ ಸೇರಿದ್ದಾರೆ ಎಂದು ವರದಿಯಾಗಿದೆ.

ಶಿಕ್ಷಕರ ವರ್ಗಾವಣೆ : ಗಣಕೀಕೃತ ಕೌನ್ಸಿಲಿಂಗ್

2021-21ನೇ ಸಾಲಿನ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರ ವರ್ಗಾವಣೆಯನ್ನು ಗಣಕೀಕೃತ ಕೌನ್ಸಲಿಂಗ್ ಮೂಲಕ ನಡೆಸಲಾಗುತ್ತಿದೆ.