ಬೆಳಗಾವಿ: ಬೆಳಗಾವಿಯ ಚಳಿಗಾಲದ ವಿಧಾನಸಭೆ ಅಧಿವೇಶನದಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ಧಾರ್ಮಿಕ ಸ್ವಾತಂತ್ರ್ಯ ಸಂರಕ್ಷಣೆ ಹಕ್ಕು ಕಾಯ್ದೆ-2021 ಅನ್ನು ಮಂಗಳವಾರ ಮಂಡಿಸಿದರು. ಮಂಗಳವಾರ ಮಧ್ಯಾಹ್ನ ಊಟದ ನಂತರ ಕಲಾಪ ಆರಂಭವಾದ ತಕ್ಷಣ ವಿಧಾನಸಭೆಯಲ್ಲಿ ಮತಾಂತರ ನಿಷೇಧ ವಿಧೇಯಕ ಮಂಡನೆಗೆ ಸ್ಪೀಕರ್ ವಿಶ್ವೇಶ್ವರ್ ಹೆಗಡೆ ಕಾಗೇರಿ ಅವಕಾಶ ನೀಡಿದರು. ವಿರೋಧ ಪಕ್ಷದ ಸದಸ್ಯರು ತೀವ್ರ ವಿರೋಧ ವ್ಯಕ್ತಪಡಿಸಿದರು. ವಿಧೇಯಕದ ಪ್ರತಿ ಕೊಟ್ಟಿಲ್ಲ, ಚರ್ಚೆ ಮಾಡಿಲ್ಲ ಎಂದು ವಿರೋಧ ಪಕ್ಷಗಳ ಸದಸ್ಯರು ಆಕ್ಷೇಪಿಸಿದರು. ಇಂತಹ ವಿಧೇಯಕಗಳನ್ನು ಕದ್ದುಮುಚ್ಚಿ ಏಕೆ ತರುತ್ತೀರಿ. ರಾಜ್ಯ ಸರ್ಕಾರ ಕಳ್ಳತನದಿಂದ ವಿಧೇಯಕ ಮಂಡಿಸಿದೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಆಕ್ಷೇಪಿಸಿದರು. ಇದರ ಮಧ್ಯೆಯೇ ವಿಧಾನಸಭೆಯಲ್ಲಿ ಮತಾಂತರ ನಿಷೇಧ ವಿಧೇಯಕವನ್ನು ಗೃಹ ಸಚಿವ ಆರಗ ಜ್ಞಾನೇಂದ್ರ ಮಂಡಿಸಿದರು.

ಮತಾಂತರ ನಿಷೇಧ ಕಾಯ್ದೆ ವಿಧೆಯಕ ಮಂಡನೆ


ವಿಧಾನಸಭೆ ಸ್ಪೀಕರ್ ವಿಶ್ವೇಶ್ವರ್ ಹೆಗಡೆ ಕಾಗೇರಿ ವಿಧಾನದ ಪ್ರಕಾರ ಮತಾಂತರ ವಿರೋಧಿ ಮಸೂದೆಯನ್ನು ಮಂಡಿಸಲು ಸರ್ಕಾರಕ್ಕೆ ಅನುಮತಿ ನೀಡಿದರು ಮತ್ತು ಅದನ್ನು ನಾಳೆ (ಡಿಸೆಂಬರ್ 22) ಚರ್ಚೆಗೆ ತೆಗೆದುಕೊಳ್ಳಲಾಗುವುದು ಎಂದು ಘೋಷಿಸಿದರು.

Leave a Reply

Your email address will not be published. Required fields are marked *

You May Also Like

ಗ್ರಾಮೀಣ ಜನರಿಗಾಗಿ ಅಂಚೆ ಇಲಾಖೆ ವಿವಿಧ ಯೋಜನೆ ಜಾರಿಗೆ ತಂದಿದೆ:ಚಿದಾನಂದ

ಅಂಚೆ ಸೇವೆಯಲ್ಲಿ ಅಮೂಲಾಗ್ರ ಬದಲಾವಣೆಯಾಗಿದ್ದು ಗ್ರಾಮೀಣ ಜನರ ಬದಕು ಸುಧಾರಿಸಲು ಇಲಾಖೆಯು ಅಂಚೆ ಜೀವ ವಿಮಾ, ಸುಕನ್ಯಾ ಸಮೃದ್ಧಿ ಯೋಜನೆ ಸೇರಿದಂತೆ ವಿವಿಧ ಯೋಜನೆಗಳನ್ನ ಅಂಚೆ ಸಿಬ್ಬಂದಿ ಜನರ ಮನೆಬಾಗಿಲಿಗೆ ತಲುಪಿಸುವಂತಹ ಕೆಲಸ ಮಾಡಬೇಕು ಎಂದು ಗದಗ ಅಂಚೆ ವರಿಷ್ಠಾಧಿಕಾರಿ ಚಿದಾನಂದ ಪದ್ಮಸಾಲಿ ಹೇಳಿದರು.

ಲಕ್ಷ್ಮೇಶ್ವರ: ಅಪರಾಧ ತಡೆ ಮಾಸಾಚರಣೆ

ತಾಲೂಕಿನ ಲಕ್ಷ್ಮೇಶ್ವರ ಪೊಲೀಸ್ ಠಾಣೆಯ ವ್ಯಾಪ್ತಿಯ ಹರದಗಟ್ಟಿ ಗ್ರಾಮದಲ್ಲಿ ಅಪರಾಧ ತಡೆ ಮಾಸಾಚರಣೆ ಕಾರ್ಯಕ್ರಮ ನಡೆಯಿತು.

ಕೋರಿಯಾದಿಂದ ಕೋಲಾರಕ್ಕೂ ಬಂದಿವೆ ಸೋಂಕು ಟೆಸ್ಟ್ ಕಿಟ್ ಗಳು

ಕೊರೋನಾ ಸೋಂಕು ತುರ್ತಾಗಿ ಪತ್ತೆ ಹಚ್ಚಲು ಕೋರಿಯಾದಿಂದ ಕೋಲಾರ ಜಿಲ್ಲೆಯ ಆರೋಗ್ಯ ಇಲಾಖೆಗೆ ರ್ಯಾಪಿಡ್ ಆಂಟಿ ಬಾಡಿ ಟೆಸ್ಟಿಂಗ್ ಕಿಟ್ ಗಳು ಬಂದಿವೆ. ಈ ಮೂಲಕ ಇಪ್ಪತ್ತು ನಿಮಿಷದೊಳಗಾಗಿ ಕೊರೋನಾ ಸೇರಿ ಯಾವುದೇ ಸೋಂಕಿದ್ದರೂ ಪತ್ತೆ ಹಚ್ಚಬಹುದಾಗಿದೆ. ಇದು ದೇಶದಲ್ಲಿ ಮೊದಲ ಪ್ರಯತ್ನ ಎಂದು ಹೇಳಲಾಗುತ್ತಿದೆ.

ಶಾಮನೂರು ಒಡೆತನದ ಮೆಡಿಕಲ್ ಕಾಲೇಜುಗಳ ಮೇಲೆ ಐಟಿ ರೈಡ್

ಮಾಜಿ ಸಚಿವ ಹಾಗೂ ಕಾಂಗ್ರೆಸ್ ನ ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ಒಡೆತನದ ಮೆಡಿಕಲ್ ಕಾಲೇಜುಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ಮಾಡಿದ್ದಾರೆ.