ಉತ್ತರಪ್ರಭ ಸುದ್ದಿ
ಗದಗ:
110/33/11 ಕೆವ್ಹಿ ರೋಣ, ವಿದ್ಯುತ್ ವಿತರಣಾ ಉಪ-ಕೇಂದ್ರದ 10 MVA ಪರಿವರ್ತಕದ ನಿರ್ವಹಣಾ ಕೆಲಸವನ್ನು ಕೈಗೊಳ್ಳುವುದರಿಂದ ದಿನಾಂಕ: 24.12.2021 ರಂದು (ಬೆಳಿಗ್ಗೆ 11 ಘಂಟೆಯಿಂದ ಸಂಜೆ 5  ಘಂಟೆಯವರೆಗೆ) ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗುತ್ತದೆ. ಮೇಲ್ಕಂಡ ವಿದ್ಯುತ್ ವಿತರಣಾ ಉಪ-ಕೇಂದ್ರದ   10MVA  ಪರಿವರ್ತಕದಿಂದ ವಿದ್ಯುತ್ ಪೂರೈಕೆಯಾಗುತ್ತಿರುವ ಮಾರ್ಗಗಳಾದ ಎಫ್-6 ರೋಣ ವಾಟರ್‌ಸಪ್ಲೈ, ಎಫ್-7 ಬೇವಿನಕಟ್ಟಿ, ಎಫ್-8 ಜಿಗಳೂರ, ಎಫ್-9 ಸೋಮನಕಟ್ಟಿ, ಎಫ್-10 ಕೃಷ್ಣಾಪೂರ ಮತ್ತು ಎಫ್-11 ಐ.ಬಿ.ಪಿ.ಎಸ್ ವಿದ್ಯುತ್ ಮಾರ್ಗಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗುತ್ತದೆ ಹಾಗೂ ಸದರಿ ವಿದ್ಯುತ್ ಮಾರ್ಗಗಳಿಂದ ವಿದ್ಯುತ್ ಪೂರೈಕೆಯಾಗುತ್ತಿರುವ ರೋಣ ಪಟ್ಟಣ ಹಾಗೂ ಗ್ರಾಮಗಳಾದ ಇಟಗಿ, ಸೂಡಿ, ಬೇವಿನಕಟ್ಟಿ, ಜಿಗಳೂರ, ಹೊಸಳ್ಳಿ, ಹುಲ್ಲೂರು, ಕುರಹಟ್ಟಿ, ಮುದೇನಗುಡಿ, ಸೋಮನಕಟ್ಟಿ, ಕೃಷ್ಣಾಪೂರ, ಮತ್ತು ಎಫ್-11 ಐ.ಬಿ.ಪಿ.ಎಸ್ ಮಾರ್ಗದಿಂದ ವಿದ್ಯುತ್ ಪೂರೈಕೆಯಾಗುತ್ತಿರುವ ಮಲ್ಟಿ ವಿಲೇಜ್ ವಾಟರ್‌ಸಪ್ಲೈ ಸ್ಥಾವರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಸಾರ್ವಜನಿಕರು ಕಂಪನಿಯೊಂದಿಗೆ ಸಹಕರಿಸಬೇಕೆಂದು ಪ್ರಕಟಣೆ ತಿಳಿಸಿದೆ. 

Leave a Reply

Your email address will not be published. Required fields are marked *

You May Also Like

ಅಗಡಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ವಾರ್ಷಿಕ ಕ್ರೀಡಾಕೂಟ ಚಟುವಟಿಕೆ ಉದ್ಘಾಟನೆ

ಉತ್ತರಪ್ರಭ ಸುದ್ದಿ ಲಕ್ಷ್ಮೇಶ್ವರ: ಪಟ್ಟಣದ ಶ್ರೀಮತಿ ಕಮಲಾ ಮತ್ತು ವೆಂಕಪ್ಪ ಎಂ ಅಗಡಿ ಇಂಜಿನಿಯರಿಂಗ್ ಕಾಲೇಜಿನ…

ರೆಮ್ ಡೆಸಿವರ್ ಈಗ 800 ಮೆಟ್ರಿಕ್ ಟನ್ ಹೆಚ್ಚಿಸಿದ ಕೇಂದ್ರ ಸರ್ಕಾರ

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಮನವಿ ಸ್ಪಂದಿಸಿದ ಪ್ರಾಧನಿ ನರೇಂದ್ರ ಮೋದಿ ಅವರು ಒಂದೇ ದಿನದಲ್ಲಿ ರಾಜ್ಯಕ್ಕೆ ರೆಮ್ ಡೆಸವಿರ್ ಹಂಚಿಕೆಯನ್ನು 800 ಮೆಟ್ರಿಕ್ ಟನ್ ಗಳಿಗೆ ಹೆಚ್ಚಿಸಿದ್ದಾರೆ ಎಂದು ಆರೋಗ್ಯ ಸಚಿವ ಡಾ.ಸುಧಾಕರ್ .ಕೆ ತಮ್ಮ ಅಧಿಕೃತ ಟ್ವೀಟರ್ ನಲ್ಲಿ ಪೋಷ್ಟ ಮಾಡಿದ್ದಾರೆ.

ಆಗಸ್ಟ್ 2ರವರೆಗೆ ಗದಗ ಜಿಲ್ಲೆಯಾದ್ಯಂತ ಪ್ರತಿಬಂಧಕಾಜ್ಞೆ

ಗದಗ: ರಾಜ್ಯ ಸರ್ಕಾರದ ನಿರ್ದೇಶನ ರೀತ್ಯ ಗದಗ ಜಿಲ್ಲೆಯಾದ್ಯಂತ  ಅಗಸ್ಟ 2 ರ ಮಧ್ಯರಾತ್ರಿಯವರೆಗೆ ಪ್ರತಿದಿನ…

ಗ್ರಾಮ ಪಂಚಾಯತಿಗಳಲ್ಲಿ ನರೇಗಾ ಕಾಮಗಾರಿ ಬೇಡಿಕೆ ಪೆಟ್ಟಿಗೆ

ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ರೈತರ ಕ್ರಿಯಾ ಯೋಜನೆ ಅಭಿಯಾನದ ಅಂಗವಾಗಿ ಲಕ್ಷ್ಮೇಶ್ವರ ತಾಲೂಕು ಪಂಚಾಯಿತಿ ವ್ಯಾಪ್ತಿಯ ಎಲ್ಲ ಗ್ರಾಮ ಪಂಚಾಯಿತಿ ಕಾರ್ಯಾಲಯದಲ್ಲಿ ಕಾಮಗಾರಿ ಬೇಡಿಕೆ ಪೆಟ್ಟಿಗೆ ಇಡಲಾಗಿದೆ ಎಂದು ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಆರ್.ವೈ.ಗುರಿಕಾರ ತಿಳಿಸಿದ್ದಾರೆ.