ಉತ್ತರಪ್ರಭ ಸುದ್ದಿ

ಮುಳಗುಂದ: ಸ್ಥಳೀಯ ಪಟ್ಟಣ ಪಂಚಾಯ್ತಿ ಮುಂದೆ ಡಿ.ಎಸ್.ಎಸ್. ಸಂಘಟನೆಗಳು ನಡೆಸುತ್ತಿದ್ದ ಆಮರಣ ಸತ್ಯಾಗ್ರಹ ಸ್ಥಳಕ್ಕೆ ಶುಕ್ರವಾರ ಜಿಲ್ಲಾ ಸಮಾಜ ಕಲ್ಯಾಣ ಅಧಿಕಾರಿ ಪ್ರಶಾಂತ ವರಗಪ್ಪನವರ, ಗದಗ ತಹಶೀಲ್ದಾರ ಕಿಷನ್ ಕಲಾಲ್ ಭೇಟಿ ನೀಡಿ ಸತ್ಯಾಗ್ರಹ ನಿರತರ ಮನವಿ ಸ್ವೀಕರಿಸಿದರು. ನಂತರ ಸತ್ಯಾಗ್ರಹ ಅಂತ್ಯಗೊಂಡಿತು.

ಈ ವೇಳೆ ಚಿಂಚಲಿ ಗ್ರಾಮ ಪಂಚಾಯ್ತಿ ಸದಸ್ಯ ಚಂದ್ರಶೇಖರ ಹರಿಜನ ಮಾತನಾಡಿ, 11ನೇ ವಾರ್ಡಿನ ಪಪಂ ಸದಸ್ಯ ಬಸವಂತಪ್ಪ ಹಾರೋಗೇರಿ ಅವರ ಪರಿಶಿಷ್ಟ ಜಾತಿ ಪ್ರಮಾಣ ಪತ್ರ ಖೋಟ್ಟಿ ಆಗಿದ್ದು ತನಿಖೆ ನಡೆಸಿ ಎಂದು ಸಂಬಂಧಿಸಿದ ಇಲಾಖೆ ಅಧಿಕಾರಿಗಳಿಗೆ ಒಂದುವರೆ ವರ್ಷದ ಹಿಂದೆ ಮನವಿ ಕೊಟ್ಟಿದ್ದೇವೆ, ಇವರೆಗೂ ಇತ್ಯರ್ಥವಾಗಿಲ್ಲ ಅಧಿಕಾರಿಗಳ ವಿಳಂಬ ಧೋರಣೆಯಿಂದ ಬೇಸತ್ತು ಆಮರಣ ಸತ್ಯಾಗ್ರಹ ಮಾಡಬೇಕಾಗಿದೆ. ನಿಜವಾದ ಪರಿಶಿಷ್ಟರ ಸವಲತ್ತುಗಳು ಅನ್ಯರ ಪಾಲಾಗಿದ್ದು ಕೂಡಲೆ ನ್ಯಾಯ ಒದಗಿಸಬೇಕು. ಈ ಕುರಿತು ಲಿಖಿತ ಭರವಸೆ ಕೊಡಬೇಕು. ಎಂದರು.

ನಂತರ ಜಿಲ್ಲಾ ಸಮಾಜ ಕಲ್ಯಾಣಧಿಕಾರಿ ಪ್ರಶಾಂತ ವರಗಪ್ಪನವರ ಮಾತನಾಡಿ, ಖೋಟ್ಟಿ ಜಾತಿ ಪ್ರಮಾಣ ಪತ್ರ ರದ್ದು ಕೋರಿ ಸಲ್ಲಿಸಿರುವ ಮನವಿ ಈಗಾಗಲೇ ಜಿಲ್ಲಾಡಳಿತ ತನಿಖೆ ಹಂತದಲ್ಲಿದೆ. ಪರ ಮತ್ತು ವಿರೋದಗಳನ್ನ ಆಲಿಸಿ ಜಿಲ್ಲಾಧಿಕಾರಿಗಳು ನ್ಯಾಯ ಇತ್ಯರ್ಥ ಮಾಡಲಿದ್ದು ತಮ್ಮ ಮನವಿಯನ್ನ ಅವರಿಗೆ ಸಲ್ಲಿಸುತ್ತೇವೆ. ಎಂದು ಭರವಸೆ ನೀಡಿದರು. ನಂತರ ಅರ್ಜಿದಾರ ಮರಿಯಪ್ಪ ನಡುಗೇರಿ ಮಾತನಾಡಿ, ಪರಿಶಿಷ್ಟ ಜಾತಿ ಸಮುದಾಯಕ್ಕೆ ಅನ್ಯಾಯವಾಗಿದ್ದು ತಾವು ಕೊಟ್ಟ ಭರವಸೆ ಕೂಡಲೆ ಈಡೆರದಿದ್ದರೆ ಜಿಲ್ಲಾಡಳಿತದ ಮುಂದೆ ಮತ್ತೆ ಸತ್ಯಾಗ್ರಹ ನಡೆಸುತ್ತೇವೆ. ಎಂದರು.

ಈ ಸಂದರ್ಭದಲ್ಲಿ ಗದಗ ತಾಲೂಕ ಸಮಾಜ ಕಲ್ಯಾಣಧಿಕಾರಿ ಎಸ್.ಎಂ.ಹೆಬ್ಬಳ್ಳಿ, ಡಿಎಸ್‍ಎಸ್‍ನ ಸುಭಾಶ್ ಜಾಲಣ್ಣವರ, ಪ್ರಕಾಶ ಗಡದವರ, ದೇವಪ್ಪ ನಡುಗೇರಿ, ಪರಸುರಾಮ ನಡುಗೇರಿ, ಗಾಳೆಪ್ಪ ನಡುಗೇರಿ, ಉಡಚಪ್ಪ ಪೂಜಾರ, ಸಂತೋಷ ಜಾಲಣ್ಣವರ, ಮಹಾಂತೇಶ ದೊಡ್ಡಮನಿ, ಬಸವರಾಜ ನಡುಗೇರಿ, ಬಸವಣ್ಣೆಪ್ಪ ನಡುಗೇರಿ, ಮಂಜು ಗಡದವರು, ಶರಣಪ್ಪ ಕಾಳೆ, ಕನಕಪ್ಪ ಹಲಗಿಕೆಂಚಣ್ಣವರ, ಫಕ್ಕಿರೇಶ ಚಾಕಲಬ್ಬಿ ಮೊದಲಾದವರು ಇದ್ದರು.

ಮುಳಗುಂದ ಡಿಎಸ್‍ಎಸ್ ಸಂಘಟನೆ ನಡಸುತ್ತಿದ್ದ ಸತ್ಯಾಗ್ರಹ ಮನವಿಯನ್ನ ಸಮಾಜ ಕಲ್ಯಾಣಧಿಕಾರಿ ಪ್ರಶಾಂತ ವರಗಪ್ಪನವರ ಸ್ವೀಕರಿಸಿದರು.

Leave a Reply

Your email address will not be published. Required fields are marked *

You May Also Like

ಕೆ ಎಸ್ ಆರ್ ಟಿ ಸಿ ಬಸ್ ಜಪ್ತಿ..!

ಉತ್ತರಪ್ರಭರೋಣ: ರೋಣ ಬಸ್ ನಿಲ್ದಾಣದಲ್ಲಿ ಬಾಗಲಕೋಟೆ ಘಟಕಕ್ಕೆ ಒಳಪಟ್ಟ ಬಸ್ ಹೈಕೋರ್ಟ್ ಆದೇಶದ ಮೇರೆಗೆ ವಶಕ್ಕೆ…

ತಾಲೂಕಾಸ್ಪತ್ರೆಗೆ ಜಿಲ್ಲಾಧಿಕಾರಿ ಸುಂದರೇಶ ಬಾಬು ಭೇಟಿ

ಜಿಲ್ಲಾ‌ ವರಿಷ್ಠಾಧಿಕಾರಿ ಯತೀಶ್ ಎನ್, ತಹಸೀಲ್ದಾರ್ ಜೆ.ಬಿ.ಜಕ್ಕನಗೌಡ, ಹೊಳೆ ಆಲೂರ ಕಂದಾಯ ನಿರೀಕ್ಷಕ ರವಿ ಬಾರಕೇರ, ಸಿಡಿಪಿಒ ಬಿ.ಎಂ.ಮಾಳೇಕೊಪ್ಪ, ಭೀಮಸೇನ್ ಜೋಶಿ ಆಸ್ಪತ್ರೆಯ ವೈದ್ಯಾಧಿಕಾರಿ ಎಚ್.ಎಲ್.ಗಿರಡ್ಡಿ, ಸಿಪಿಐ ಸುನೀಲ್ ಸವದಿ, ಪಿಎಸ್ ಐ ವಿನೋದ ಪೂಜಾರಿ ಮುಂತಾದವರಿದ್ದರು.

ಗದಗ, ಶಿರಹಟ್ಟಿ, ರೋಣ, ಮುಂಡರಗಿ ಸೇರಿ 19ಪಾಸಿಟಿವ್, ಗದಗನಲ್ಲೇ ಅತಿ ಹೆಚ್ಚು

ಗದಗ ಜಿಲ್ಲೆಯಲ್ಲಿ ಇಂದು ಪತ್ತೆಯಾದ ಸೋಂಕಿತರಲ್ಲಿ ಗದಗ ತಾಲೂಕಿನಲ್ಲಿಯೇ ಹೆಚ್ಚು ಸೋಂಕಿತ ಪ್ರಕರಣಗಳು ಪತ್ತೆಯಾಗಿವೆ.

ಗದಗ ಜಿಲ್ಲೆಯಲ್ಲಿಂದು 302 ಕೊರೊನಾ ಪಾಸಿಟಿವ್: ಐವರು ಮೃತ

ಗದಗ: ಜಿಲ್ಲೆಯಲ್ಲಿ ಇಂದು 307 ಕೊರೊನಾ ಪಾಸಿಟಿವ್ ಪ್ರಕರಣಗಳು ದೃಡಪಟ್ಟಿವೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ ಒಟ್ಟು 22730 ಆಗಿದೆ. ಇದುವರೆಗೆ 372520 ಜನರು ಗದಗ ಜಿಲ್ಲೆಯಲ್ಲಿ ನಿಗಾಕ್ಕೆ ಒಳಗಾಗಿದ್ದಾರೆ. ಸೋಂಕಿನ ಪರೀಕ್ಷೆಗಾಗಿ 381761ಮಾದರಿ ಸಂಗ್ರಹಿಸಲಾಗಿದೆ. ಇದರಲ್ಲಿ 358843 ನಕಾರಾತ್ಮಕವಾಗಿವೆ (ನೆಗೇಟಿವ್) ಎಂದು ವರದಿಯಾಗಿದ್ದು, 188 ಕೇಸ್ ಗಳ ವರದಿ ಬರಲು ಬಾಕಿ ಇದೆ. ಇಂದು ಐದು ಜನ ಸೇರಿ 236 ಜನರು ಈವರೆಗೆ ಕೋವಿಡ್ ನಿಂದ ಮೃತಪಟ್ಟಿದ್ದಾರೆ. ಇದರಲ್ಲಿ ಇಂದು 405 ಜನರು ಸೇರಿ ಒಟ್ಟು 19598 ಜನ ಗುಣಮುಖರಾಗಿದ್ದಾರೆ. ಸದ್ಯ 2896 ಜನರು ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಜಿಲ್ಲಾಧಿಕಾರಿಗಳು ಅಂಕಿ ಅಂಶ ಬಿಡುಗಡೆ ಮಾಡಿದ್ದಾರೆ.