ಉತ್ತರಪ್ರಭ ಸುದ್ದಿ
ಗದಗ: ಗದಗ ಬೆಟಗೇರಿ ನಗರಸಭೆ ಚುನಾವಣೆ ಸೇರಿದಂತೆ ಸ್ಥಳೀಯ ಸಾರ್ವತ್ರಿಕ ಚುನಾವಣೆಯು ದಿನಾಂಕ:27.12.2021 ರಂದು ನಡೆಯಲಿದ್ದು, ಅದರ ಪ್ರಯುಕ್ತ ಗದಗ ಬೆಟಗೇರಿ ನಗರ ಸಭೆ ವ್ಯಾಪ್ತಿಯಲ್ಲಿ ದಿನಾಂಕ:25.12.2021 ರ ಬೆಳಿಗ್ಗೆ 07.00 ಗಂಟೆಯಿOದ ದಿನಾಂಕ:27.12.2021 ರ ಮಧ್ಯರಾತ್ರಿಯವರೆಗೆ ದಂಡ ಪ್ರಕ್ರಿಯಾ ಸಂಹಿತೆ, 1973ರ ಕಲಂ 144 ಮತ್ತು ಕರ್ನಾಟಕ ಪೋಲೀಸ್ ಕಾಯ್ದೆ, 1963 ಕಲಂ 53ರ ಅಡಿ ಕೆಲವು ಷರತ್ತುಗಳನ್ನು ವಿಧಿಸಿ ಪ್ರತಿಬಂಧಕಾಜ್ಞೆಯನ್ನು ಗದಗ ಜಿಲ್ಲಾಧಿಕಾರಿ ಎಂ ಸುಂದರೇಶ ಬಾಬು ಅವರು ಆದೇಶ ಹೊರಡಿಸಿದ್ದಾರೆ.
- ಚುನಾವಣೆಗೆ ಸಂಬOಧಿಸಿದOತೆ ಗದಗ-ಬೆಟಗೇರಿ ನಗರಸಭೆ ವ್ಯಾಪ್ತಿಯಲ್ಲಿ 05 ಜನಕ್ಕಿಂತ ಹೆಚ್ಚು ಜನರು ಗುಂಪು ಸೇರುವುದು, ಮೆರವಣಿಗೆ ಅಥವಾ ಸಭೆ ಸಮಾರಂಭ ಜರುಗುವುದನ್ನು ನಿಷೇಧಿಸಿದೆ.
- ಚುನಾವಣಾ ಅಭ್ಯರ್ಥಿಗಳು/ಬೆಂಬಲಿಗರು ಮನೆಮನೆಗೆ ತೆರಳಿ ಪ್ರಚಾರ ಮಾಡಬಹುದಾಗಿದ್ದು, ಅದರಲ್ಲಿ 05 ಜನರಿಗಿಂತ ಹೆಚ್ಚು ಜನರು ಸೇರುವಂತಿಲ್ಲ.
- ಮತಗಟ್ಟೆಗಳ ಸುತ್ತಲಿನ 100 ಮೀಟರ್ ಪರಿಮಿತಿಯಲ್ಲಿ ಚುನಾವಣಾ ಪ್ರಚಾರ ನಿಷೆಧಿಸಿದೆ.
- ಈ ಅವಧಿಯಲ್ಲಿ ಪ್ರಚಾರಮಾಡುವುದನ್ನು, ವಾಹನ ಬಳಕೆಯನ್ನು ಹಾಗೂ ಧ್ವನಿವರ್ಧಕಗಳನ್ನು ಬಳಸುವಂತಿಲ್ಲ.
- ಸಾಮಾನ್ಯವಾಗಿ ಮತಕ್ಷೇತ್ರದಲ್ಲಿ ವಾಸಿಸದ ಹಾಗೂ ಮತದಾರರಲ್ಲದ ಚುನಾವಣಾ ಪ್ರಚಾರಕರು ಜಿಲ್ಲೆಯಿಂದ ಹೊರಹೋಗತಕ್ಕದ್ದು.
- ಮತಗಟ್ಟೆಗಳಲ್ಲಿ ಮೋಬೈಲ್ ಫೋನ್, ಕಾರ್ಡಲೆಸ್ ಫೋನ್ ಅಥವಾ ಇನ್ನಿತರೆ ಎಲೇಕ್ಟ್ರಾನಿಕ್ ಉಪಕರಣಗಳನ್ನು ತೆಗೆದುಕೊಂಡು ಹೊಗುವುದನ್ನು ನಿಷೆಧಿಸಿದೆ.(ಚುನಾವಣಾ ಕಾರ್ಯದಲ್ಲಿ ಇರುವ ಸಿಬ್ಬಂದಿ ಹೊರತುಪಡಿಸಿ).
- ಮತಗಟ್ಟೆಗಳ ಸುತ್ತಾ 100 ಮೀಟರ್ ಪರಿಮಿತಿಯಲ್ಲಿ ಪ್ರಚಾರಕ್ಕೆ ಸಂಬoಧಿಸಿದ ಪೋಸ್ಟರ್/ಬ್ಯಾನರ್ ಅಥವಾ ಇನ್ನಾವುದೇ ವಸ್ತುಗಳನ್ನು ಬಳಸುವಂತಿಲ್ಲ
- ಸದರಿ ಸ್ಥಳದಲ್ಲಿ ಬಹಿರಂಗವಾಗಿ ಘೋಷಣೆ ಮಾಡುವುದು ,ಪದ ಹಾಡುವುದು, ವಾದ್ಯ ಬಾರಿಸುವುದು,ವ್ಯಾಖ್ಯಾನ ಕೊಡುವುದು , ಸನ್ನೆ ಅಥವಾ ನಕಲಿ ಪ್ರದರ್ಶನವನ್ನು ಹಾಗೂ ಸಾರ್ವಜನಿಕ ಸಭ್ಯತೆ ಅಥವಾ ನೀತಿಯನ್ನು ಆಕ್ರಮಮಿಸಬಹುದಾಗಿದೆ ಕೃತ್ಯಗಳನ್ನು ಮಾಡುವುದನ್ನು ನಿಷೇಧಿಸಲಾಗಿದೆ.
- ಗದಗ-ಬೆಟಗೇರಿ ನಗರ ಸಭೆ ಮತಕ್ಷೇತ್ರದ ಎಲ್ಲಾ ಕಲ್ಯಾಣಮಂಟಪ, ಸಮುದಾಯ ಭವನ, ವಸತಿಗೃಹಗಳಲ್ಲಿ ಹಾಗೂ ಅತಿಥಿ ಗೃಹಗಳಲ್ಲಿ ಬಹಿರಂಗ ಪ್ರಚಾರದಲ್ಲಿ ತೊಡಗಿರುವ ಜಿಲ್ಲೆಯವರಲ್ಲದವರು ವಾಸ್ತವ್ಯ ಮಾಡತಕ್ಕದ್ದಲ್ಲ. ಈ ಬಗ್ಗೆ ಸಂಬoಧಿಸಿದ ಮಾಲಿಕರು ಪರಶೀಲನೆ ಮಾಡಿ ಖಚಿತಪಡಿಸಿಕೊಳ್ಳತಕ್ಕದು. ಎಮ್.ಸಿ.ಸಿ, ಎಪ್.ಎಸ್.ಟಿ ಹಾಗೂ ಪೋಲಿಸ್ ಇಲಾಖೆಯವರು ಈ ಬಗ್ಗೆ ನಿಗಾವಹಿಸತಕ್ಕದ್ದು ಹಾಗೂ ಎಲೇಕ್ಟ್ರಾನಿಕ್ ಮುದ್ರಣ ಮತ್ತು ಸಾಮಾಜಿಕ ಮಾಧ್ಯಮ, ಹೊಟೇಲ್ಗಳು, ರೇಸಾರ್ಟಗಳ ಮೇಲೆ ನಿಗಾವಹಿಸುವುದು.
- ಸಿನಿಮಾಟೋಗ್ರಾಪ್, ದೂರದರ್ಶನ ಅಥವಾ ಇತರ ರೀತಿಯ ಉಪಕರಣಗಳ ಮೂಲಕ ಯಾವುದೆ ಚುನಾವಣಾ ವಿಷಯವನ್ನು ಸಾರ್ವಜನಿಕರಿಗೆ ಪ್ರದರ್ಶಿಸುವುದನ್ನು ನಿರ್ಭಂಧಿಸಿದೆ.
- ಯಾವುದೇ ಚುನಾವಣಾ ವಿಷಯವನ್ನು ಸಾರ್ವಜನಿಕರಿಗೆ ಪ್ರಚಾರ ಮಾಡುವ ಉದ್ದೇಶದಿಂದ ಅಥವಾ ಮತದಾರರನ್ನು ಆಕರ್ಷಿಸುವ ಉದ್ದೇಶದಿಂದ ಯಾವುದೇ ಸಂಗೀತ ಕಛೇರಿ ಅಥವಾ ನಾಟಕ ಪ್ರದರ್ಶನ ಅಥವಾ ಯಾವುದೆ ಇತರ ಮನರಂಜನೆ ಕಾರ್ಯಕ್ರಮಗಳನ್ನು ಆಯೋಜಿಸಲು ಅವಕಾಶವಿರುವುದಿಲ್ಲಾ.
- ಶಸ್ತ್ರ, ಬಡಿಗೆ, ಭರ್ಚಿ, ಖಡ್ಗ, ಗದೆ, ಬಂದೂಕು, ಚೂರಿ, ಲಾಠಿ, ಡೊಣ್ಣೆ, ಚಾಕೂ ಅಥವಾ ದೇಹಕ್ಕೆ ಅಪಾಯವನ್ನು ಉಂಟುಮಾಡಬಹುದಾದ ಯಾವುದೇ ಮಾರಕಾಸ್ತ್ರವನ್ನು ತೆಗೆದುಕೊಂಡು ಹೋಗುವುದನ್ನು ಮತ್ತು ತಿರುಗಾಡುವುದನ್ನು ಪ್ರತಿಬಂಧಿಸಲಾಗಿದೆ.
- ಮತಗಟ್ಟೆಯ ವ್ಯಾಪ್ತಿಯಲ್ಲಿನ ಝೆರಾಕ್ಸ ಅಂಗಡಿ ಬುಕ್ಸ್ಟಾಲ್, ಫೋಟೋ ಕಾಪಿಯರ್ಗಳನ್ನು ಬಂದ್ ಮಾಡುವುದು.
- ಕಲ್ಲುಗಳನ್ನು ,ಕ್ಷಾರ ಪದಾರ್ಥ ಇಲ್ಲವೇ ಸ್ಪೋಟಕ ವಸ್ತುಗಳು ಯಾವುದೇ ದಾಹಕ ವಸ್ತುಗಳು ಇತ್ಯಾದಿಗಳನ್ನು ಸದರಿ ಸ್ಥಳಕ್ಕೆ ತೆಗೆದುಕೊಂಡು ಹೋಗುವುದನ್ನು ಹಾಗೂ ಶೇಖರಿಸುವುದನ್ನು ನಿಷೇಧಿಸಲಾಗಿದೆ.
- ಕಲ್ಲುಗಳನ್ನು ಮತ್ತು ಎಸೆಯುವಂತಹ ವಸ್ತುಗಳನ್ನು, ಎಸೆಯುವ ಅಥವಾ ಬಿಡುವ ಸಾಧನಗಳನ್ನು ತೆಗೆದುಕೊಂಡು ಹೋಗುವುದನ್ನು ನಿಷೇಧಿಸಿಲಾಗಿದೆ.
- ಮನುಷ್ಯ ಶವಗಳ ಅಥವಾ ಅವುಗಳ ಆಕೃತಿ ಅಥವಾ ಪ್ರತೀಮೆಗಳನ್ನು ಪ್ರದರ್ಶನವನ್ನು ಮಾಡುವುದು ಪ್ರತಿಬಂಧಿಸಲಾಗಿದೆ.
- ಸಾರ್ವಜನಿಕವಾಗಿ ಯಾವುದೇ ವ್ಯಕ್ತಿ ಪ್ರಚೋದನಾತ್ಮಕ ಹಾಗೂ ಉದ್ರೇಕಕಾರಿ ಹಾಡುಗಳು, ಕೂಗಾಟ ಮಾಡುವುದನ್ನು ಹಾಗೂ ವ್ಯಕ್ತಿಗಳ ತೇಜೋವಧೆ ಮಾಡುವಂತಹ ಚಿತ್ರಗಳು, ಚಿಹ್ನೆಗಳು, ಪ್ರತಿಕೃತಿಗಳು ಮುಂತಾದವುಗಳನ್ನು ಪ್ರದರ್ಶಿಸುವುದಾಗಲಿ ಹಾಗೂ ಸಾರ್ವಜನಿಕರ ಗಾಂಭೀರ್ಯ ಹಾಗೂ ನೈತಿಕತೆಗೆ ಭಂಗ ತರುವಂತಹ ಅಥವಾ ಕಾನೂನು ಮತ್ತು ಸುವ್ಯವಸ್ಥೆಗೆ ಭಂಗ ತರುವಂತಹ ಯಾವುದೇ ಕೃತ್ಯಗಳಲ್ಲಿ ತೊಡಗುವುದನ್ನು ನಿಷೇಧಿಸಲಾಗಿದೆ.
- ಯಾವುದೇ ವ್ಯಕ್ತಿ ಬಹಿರಂಗವಾಗಿ ಮೇಲೆ ವಿವರಿಸಿದ ಮಾರಕಾಸ್ತ್ರಗಳು, ಸ್ಪೋಟಕ ವಸ್ತಗಳು, ವಿನಾಶಕಾರಿ ವಸ್ತುಗಳು ಹಾಗೂ ಇತರ ಆಕ್ಷೇಪಾರ್ಹ ವಸ್ತುಗಳನ್ನು ಹೊಂದಿದ್ದು ಕಂಡು ಬಂದ ಕೂಡಲೇ ಅವುಗಳನ್ನು ವಶಪಡಿಸಿಕೊಳ್ಳಲು ಯಾವುದೇ ಪೋಲಿಸ್ ಅಧಿಕಾರಿಗಳಿಗೆ ಅಧಿಕಾರವಿರುತ್ತದೆ. ಅಂತಹ ಮಾರಕಾಸ್ತ್ರಗಳನ್ನು ಸರ್ಕಾರಕ್ಕೆ ಮುಟ್ಟುಗೊಲು ಮಾಡಿಕೊಳ್ಳಲಾಗುವುದು. ಅಲ್ಲದೇ ಸಂಬoಧಿಸಿದ ವ್ಯಕ್ತಿಗಳ ಮೇಲೆ ಕಾನೂನು ರೀತ್ಯ ಕ್ರಮ ಜರುಗಿಸಲಾಗುವುದು.
- ಶವ ಸಂಸ್ಕಾರಕ್ಕೆ ಅಥವಾ ಮದುವೆ ಮತ್ತು ಧಾರ್ಮಿಕ ಕಾರ್ಯಗಳಿಗೆ ಹಾಗೂ ಕೋವಿಡ್-19 ಕಾರ್ಯಗಳಿಗೆ ಈ ಆಜ್ಞೆ ಅನ್ವಯಿಸುವುದಿಲ್ಲ.
- ಮದುವೆ ಮತ್ತು ಇತರೇ ಕಾರ್ಯಕ್ರಮಗಳಲ್ಲಿ ಯಾವತ್ತೂ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಯಾಗದOತೆ ಹಾಗೂ ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆ ತರದಂತೆ ನಿಯಮಗಳನ್ನು ಪಾಲಿಸುವುದು. ಸದರಿ ಆದೇಶವನ್ನು ಉಲ್ಲಂಘಿಸುವವರ ವಿರುದ್ದ ಭಾರತೀಯ ದಂಡ ಸಂಹಿತೆಯ ಕಲಂ: 188ರ ಪ್ರಕಾರ, ಕರ್ನಾಟಕ ಪೌರ ನಿಗಮಗಳ ಅಧಿನಿಯಮ, 1976ರ ಕಲಂ: 46 ರಿಂದ 53 ರಲ್ಲಿ ತಿಳಿಸಿದಂತೆ ಸೂಕ್ತ ಕಾನೂನು ಕ್ರಮಗಳನ್ನು ಜರುಗಿಸಲಾಗುವುದು. ಈ ಆದೇಶವು ಮತದಾನ ಸಿಬ್ಬಂದಿ ಮತ್ತು ಅಧಿಕಾರಿಗಳಿಗೆ/ ಪೋಲೀಸ್ ಅಧಿಕರಿಗಳಿಗೆ ಹಾಗೂ ಚುನಾವಣಾ ಕಾರ್ಯನಿರತ ಸಿಬ್ಬಂದಿ ಮತ್ತು ಅಧಿಕಾರಿಗಳಿಗೆ ಅನ್ವಯಿಸುವುದಿಲ್ಲ.
