ಸಾಮಾಜಿಕ, ಆರ್ಥಿಕ, ಶೈಕ್ಷಣಿಕೆ ಸಮೀಕ್ಷೆ ವರದಿ ಜಾರಿಗೊಳಿಸಿ: ಸಿದ್ದರಾಮಯ್ಯ
ಸಾಮಾಜಿಕ ನ್ಯಾಯದ ಪರವಾಗಿದ್ದೇವೆ ಎಂದು ಬಾಯಿಮಾತಿನಲ್ಲಿ ಹೇಳಿದರೆ ಸಾಲದು, ಹಿಂದುಳಿದ ವರ್ಗಗಳ ಶಾಶ್ವತ ಆಯೋಗ ಸಲ್ಲಿಸಿರುವ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ವರದಿಯನ್ನು ತಕ್ಷಣ ಜಾರಿಗೊಳಿಸಬೇಕು ಎಂದು ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ ಮತ್ತು ಸಮಾಜ ಕಲ್ಯಾಣ ಇಲಾಖೆ ಸಚಿವ ಶ್ರೀರಾಮುಲು ಅವರನ್ನು ಒತ್ತಾಯಿಸುತ್ತೇನೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದರು.