ಟೀಕಾಕಾರರಿಗೆ ಉತ್ತರ ಸಿಕ್ಕಿದೆ ಎಂದು ಭಾವಿಸುತ್ತೇನೆ: ಕೆ.ಸುಧಾಕರ್
ನಮ್ಮ ಬಗ್ಗೆ ವ್ಯಂಗ್ಯದ ಮಾತುಗಳನ್ನು ಆಡಿದ್ದವರಿಗೆ ಕ್ರಿಯಾಶೀಲ ಕಾರ್ಯ ಚಟುವಟಿಕೆಗಳ ಮೂಲಕ ಪ್ರತ್ಯುತ್ತರ ನೀಡಿದ್ದೇವೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ ಕೆ ಸುಧಾಕರ್ ಹೇಳಿದ್ದಾರೆ. ಎಂಟು ತಿಂಗಳ ರಾಜಕೀಯ ಗ್ರಹಣದ ಬಳಿಕ ಸಚಿವರಾದ ನಮ್ಮನ್ನು ಪ್ರತಿಪಕ್ಷದ ಕೆಲವರು ಲೇವಡಿ ಮಾಡಿದ್ದರು. ಇವರು ಏನು ಮಾಡುತ್ತಾರೋ ನಾವು ನೋಡುತ್ತೇವೆ ಎಂದು ಟೀಕೆಗಳ ಸುರಿಮಳೆ ಗೈದಿದ್ದರು. ಈಗ ಅವರಿಗೆಲ್ಲ ಉತ್ತರ ಸಿಕ್ಕಿರಬೇಕು ಎಂದು ಭಾವಿಸಿದ್ದೇನೆ ಎಂದರು.
ಲಾಕ್ಡೌನ್ ಪರಿಣಾಮ ಸರ್ಕಾರದ ಬೊಕ್ಕಸಕ್ಕೆ ಭಾರಿ ಪೆಟ್ಟು ನೀಡಿದೆ. ಇದರಿಂದಾಗಿ ಸರ್ಕಾರ ಕೂಡ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದೆ. ಈ ಕಾರಣದಿಂದ ರಾಜ್ಯ ಸರ್ಕಾರ ನೌಕರರ ಡಿಎಗೆ ಕತ್ತರಿ ಹಾಕಲಿದೆ..?
ಗಾಳಿ ಶುದ್ಧಿ ಮಾಡಲಿದೆಯಂತೆ ಯಂತ್ರ: ಬೆಂಗಳೂರಲ್ಲಿ ಪ್ರಾಯೋಗಿಕ ಕಾರ್ಯ
ಈಗಾಗಲೇ ಶುದ್ಧ ಕುಡಿಯುವ ನೀರು ಒದಗಿಸುವ ಯಂತ್ರಗಳು ರಾಜ್ಯದಲ್ಲೆಲ್ಲಡೆ ಕಂಡು ಬರುತ್ತಿವೆ. ಆದರೆ ಇದೀಗ ನೀರಿನಂತೆ ಗಾಳಿಯನ್ನು ಶುದ್ಧೀಕರಣ ಗೊಳಿಸುವ ಯಂತ್ರದಿಂದ ಸಿಲಿಕಾನ ಸಿಟಿಯಲ್ಲಿ ಗಾಳಿ ಶುದ್ಧಿಕರಣ ಮಾಡುವ ಪ್ರಾಯೋಗಿಕ ಕಾರ್ಯ ಕೈಗೊಳ್ಳಲಾಗಿದೆ.