ಉತ್ತರಪ್ರಭ

ಗದಗ: ಇಂದು ಗದಗ ಶಹರದ ಎ ಎಸ್ ಎಸ್ ಕಾಲೇಜಿನಲ್ಲಿ 15 ರಿಂದ 18 ವರ್ಷದ ಕಿರಿಯರಿಗೆ ಕೋವಿಡ್-19 ರಿಂದ ಸುರಕ್ಷೆಗಾಗಿ ಲಸಿಕೆ ಹಾಕುವ ಕಾರ್ಯಕ್ರಮ ಎರ್ಪಡಿಸಲಾಗಿತ್ತು.

ಈ ಕಾರ್ಯಕ್ರಮದ ಉದ್ಘಾಟನೆಗೆಂದು ಆಗಮಿಸಿದ್ದ ಲೋಕೋಪಯೋಗಿ ಸಚಿವರಾದ ಸಿ ಸಿ ಪಾಟೀಲ ಹಾಗೂ ಅಧ್ಯಕ್ಷರಾಗಿ ಶಾಸಕ ಎಚ್ ಕೆ ಪಾಟೀಲ, ಮುಖ್ಯ ಅಥಿತಿಗಳಾಗಿ ಗದಗ-ಬೆಟಗೇರಿ ನಗರಸಭಾ ಸದಸ್ಯರಾದ ಸುರೇಶ ಕಟ್ಟಿಮನಿ ಹಾಗೂ ಅಥಿತಿಗಳಾಗಿ ಜಿಲ್ಲಾಧಿಕಾರಿ ಎಮ್ ಸುಂದರೇಶ ಬಾಬು,
ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭರತ ಎಸ್, ಅಪರ ಜಿಲ್ಲಾಧಿಕಾರಿ ಸತೀಶ್ ಕುಮಾರ, ಉಪನಿರ್ದೇಶಕರು ಪ.ಪೂ ಶಿಕ್ಷಣ ಇಲಾಖೆ ಎಮ್ ಎಮ್ ಕಾಂಬಳೆ, ಜಿಲ್ಲಾ ಆರ್ ಸಿ ಎಚ್ ಅಧಿಕಾರಿಗಳು ಡಾ. ಬಿ ಎಸ್ ಗೋಜನೂರು, ಆರೋಗ್ಯ ಅಧಿಕಾರಿಗಳಾದ ಡಾ. ಅಮೃತ ಹರಿದಾಸ, ಹಾಗು ಅನೇಕ ಗಣ್ಯರು ಸಭೆಗೆ ಆಗಮಿಸಿದ್ದರು.

Leave a Reply

Your email address will not be published. Required fields are marked *

You May Also Like

ಸಾರ್ವಜನಿಕರಿಂದ ಗೃಹ ಮಂಡಳಿ ಅಧಿಕಾರಿ ತರಾಟೆಗೆ

ಗದಗ: ಕರ್ನಾಟಕ ಗೃಹ ಮಂಡಳಿ ಅಧಿಕಾರಿಯನ್ನು ಸಾರ್ವಜನಿಕರು ತರಾಟೆಗೆ ತೆಗೆದುಕೊಂಡ ಘಟನೆ ಇಂದು ಗದಗನ ಗೃಹ…

ಹೊಳೆ ಇಟಗಿಯಲ್ಲಿ ರಸ್ತೆ ಹುಡುಕಿ ಕೊಡ್ತಿರಾ ಪ್ಲೀಸ್!

ನೀರಿನಿಂದ ತುಂಬಿಕೊಂಡ ಗುಂಡಿಗಳನ್ನು ನೋಡಿದರೆ ಅವು ಪಕ್ಕಾ ಮೀನಿನ ಗುಂಡಿಗಳಂತೆ ಕಾಣುತ್ತವೆ. ಆದ್ರೆ ಅವು ಗುಂಡಿಗಳಲ್ಲ. ಅರೇ ಇದೇನಿದು ಗುಂಡಿಗಳು ಅಂತಿರಾ, ಮತ್ತೆ ಗುಂಡಿಗಳಲ್ಲ ಅಂತಿರಾ ಅಂತ ಕನ್ಫ್ಯೂಸ್ ಆಗಬೇಡಿ ಇದು ಗ್ರಾಮವೊಂದ ರಸ್ತೆಯ ಕಥೆ.

ಅಬ್ಬಿಗೇರಿ: ಕಠಿಣ ಲಾಕ್ಡೌನ್ ಮನೆ ಮನೆಗೆ ಪಡಿತರ

ನರೇಗಲ್: ಕೊರೊನಾ ಎರಡನೇ ಅಲೆಯನ್ನು ತಡೆಗಟ್ಟಲು ಜಿಲ್ಲಾಡಳಿತ 5 ದಿನದವರೆಗೂ ಕಠಿಣ ಲಾಕ್ಡೌನ್ ವಿಧಿಸಿದ ಪರಿಣಾಮ, ಸಮೀಪದ ಅಬ್ಬಿಗೇರಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಪಡಿತರನ್ನು ಮನೆ ಮನೆಗೆ ತಲುಪಿಸುವ ಕಾರ್ಯ ಕೈಗೊಂಡರು. ಗ್ರಾಮದಲ್ಲಿನ ಸಂಘದ ಪಡಿತರ ಚೀಟಿ ಇರುವ ಮನೆಮನೆಗೆ ತೆರಳಿ ಗ್ರಾಹಕರ ಪಡಿತರವನ್ನು ಸ್ಥಳದಲ್ಲಿಯೇ ತೂಕ ಮಾಡಿ ಹಂಚಿಕೆ ಮಾಡಲಾಗುತ್ತಿದೆ,ಕಠಿಣ ಲಾಕ್ಡೌನ್ ನಿಂದ ಜನರು ಹೊರಗಡೆ ಬರಲು ಆಗದ ಕಾರಣ ಗ್ರಾಮ ಪಂಚಾಯತಿ ಯವರು ಪಡಿತರವನ್ನು ಮನೆ ಮನೆಗೆ ಹಂಚುತ್ತಿರುವುದು ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದರು.

ಕೊರ್ಲಹಳ್ಳಿ: ಕುಡಿಯುವ ನೀರಿನ ಪೈಪ್ ಒಡೆದು ನೀರು ಪೋಲು!

ಗದಗ ನಗರಕ್ಕೆ ಸರಬರಾಜಾಗುವ ಕುಡಿಯುವ ನೀರಿನ ಪೈಪ್ ಲೈನ್ ಒಡೆದು ಅಪಾರ ಪ್ರಮಾಣದ ನೀರು ಪೋಲಾಗುತ್ತಿದೆ. ಮುಂಡರಗಿ ತಾಲೂಕಿನ ಕೊರ್ಲಹಳ್ಳಿಯಿಂದ ಗದಗ ನಗರಕ್ಕೆ ಕುಡಿಯುವ ನೀರು ಸರಬರಾಜು ಮಾಡುವ ಪೈಪ್ ಲೈನ್ ಇದಾಗಿದೆ. ಕೊರ್ಲಹಳ್ಳಿ ಸಮೀಪದಲ್ಲಿ ಹೆದ್ದಾರಿ ಪಕ್ಕದಲ್ಲಿ ಅಪಾರ ಪ್ರಮಾಣದ ನೀರು ಪೋಲಾಗುತ್ತಿದೆ.