ಬೆಂಗಳೂರು, : ನೈಟ್‌ ಕರ್ಫ್ಯೂ ಎರಡು ವಾರ ಮುಂದುವರಿಕೆ, ವಾರಾಂತ್ಯದ ಲಾಕ್‌ಡೌನ್ ಜಾರಿ ಹಾಗೂ ಬೆಂಗಳೂರಿನಲ್ಲಿ 10-12ನೇ ತರಗತಿ ಹೊರತುಪಡಿಸಿ ಉಳಿದೆಲ್ಲಾ ಶಾಲೆಗಳನ್ನು ಮುಚ್ಚಿ ಕೇವಲ ಆನ್‌ಲೈನ್ ತರಗತಿ ನಡೆಸಲು ಸರ್ಕಾರ ತೀರ್ಮಾನ ಮಾಡಿದೆ.ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಮಂಗಳವಾರ ಸಂಜೆ ಗೃಹ ಕಚೇರಿ ಕೃಷ್ಣಾದಲ್ಲಿ ಕೊರೊನಾ ವಿಷಯಕ್ಕೆ ಸಂಬಂಧಿಸಿದಂತೆ ತಜ್ಞರ ಸಭೆ ಕರೆಯಲಾಗಿತ್ತು. ರಾಜ್ಯದಲ್ಲಿ ಜಾರಿ ಮಾಡಬೇಕಾದ ಕಠಿಣ ರೂಲ್ಸ್‌ಗಳು, ಬೆಡ್‌ಗಳ ಲಭ್ಯತೆ, ಔಷಧಗಳ ದಾಸ್ತಾನು ಸಹಿತ ಕೋವಿಡ್ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಹಲವು ವಿಷಯಗಳ ಕುರಿತು ಚರ್ಚಿಸಲಾಗಿದೆ.ಜ.7 ಶುಕ್ರವಾರ ರಾತ್ರಿ 10ರಿಂದ ಸೋಮವಾರ ಜ.10ರವರೆಗೆ ವಾರಾಂತ್ಯದ ಕರ್ಫ್ಯೂ ಇರುತ್ತದೆ. ಇದರ ಜೊತೆಗೆ ಮುಂದಿನ ಎರಡು ವಾರ ರಾತ್ರಿ ಕರ್ಫ್ಯೂ ಮುಂದುವರಿಯುತ್ತದೆ ಎಂದು ಸಭೆಯ ಬಳಿಕ ಸಚಿವರಾದ ಆರ್. ಅಶೋಕ್ ಮತ್ತು ಡಾ.ಕೆ. ಸುಧಾಕರ್ ಹೇಳಿದರು.ಶಾಲೆಗಳಿಗೆ ಆನ್‌ಲೈನ್ ತರಗತಿ:
ನಗರ ಪ್ರದೇಶಗಳಲ್ಲಿ ಓಮಿಕ್ರಾನ್ ಪ್ರಕರಣಗಳು ಹೆಚ್ಚಾಗುತ್ತಿರುವ ಕಾರಣ ಬೆಂಗಳೂರಲ್ಲಿ 10-12ನೇ ತರಗತಿ ಹೊರತುಪಡಿಸಿ ಉಳಿದೆಲ್ಲಾ ಶಾಲೆ ಮುಚ್ಚಲು ತೀರ್ಮಾನಿಸಲಾಗಿದೆ. ಮಕ್ಕಳನ್ನು ಪ್ರತಿನಿತ್ಯ ಶಾಲೆಗೆ ಕರೆಯಿಸದೆ ಆನ್‌ಲೈನ್ ಮೂಲಕ ಮಾತ್ರ ತರಗತಿಗಳನ್ನು ನಡೆಸಲು ಸೂಚಿಸಲಾಗಿದೆ. ಇದು ಪದವಿ ಕಾಲೇಜುಗಳಿಗೂ ಅನ್ವಯಿಸುತ್ತದೆ ಎಂದು ಸಚಿವರು ಹೇಳಿದರು.

50:50 ರೂಲ್ಸ್‌:
ಸರ್ಕಾರಿ ಕಚೇರಿಗಳು ಭಾರತ ಸರ್ಕಾರದ ಮಾರ್ಗಸೂಚಿ ಅನುಸರಿಸಲು ತೀರ್ಮಾನಿಸಿ. ಉಳಿದಂತೆ ಚಿತ್ರಮಂದಿರ, ಮಾಲ್, ಬಾರ್, ಕ್ಲಬ್‌ಗಳಿಗೆ ಶೇ 50ರಷ್ಟು ಮಾತ್ರ ಆಸನಗಳ ಭರ್ತಿಗೆ ಅವಕಾಶ ನೀಡಲಾಗಿದೆ.ಮಹಾರಾಷ್ಟ್ರ, ಕೇರಳ ಮತ್ತು ಗೋವಾದಿಂದ ಬರುವ ಪ್ರಯಾಣಿಕರಿಗೆ ಆರ್‌ಟಿಪಿಸಿಆರ್ ಟೆಸ್ಟ್ ಮತ್ತು ನೆಗೆಟಿವ್‌ ರಿಪೋರ್ಟ್ ಕಡ್ಡಾಯ ಮಾಡಲಾಗಿದೆ. ವಿದೇಶಿ ಪ್ರಯಾಣಿಕರಿಗೆ ಭಾರತ ಸರ್ಕಾರದ ಮಾರ್ಗಸೂಚಿಗಳನ್ನು ಅನ್ವಯ ಮಾಡಲಾಗುತ್ತದೆ.

Leave a Reply

Your email address will not be published. Required fields are marked *

You May Also Like

ಇಂಧಿರಾಗಾಂಧಿ ಭಾವಚಿತ್ರಕ್ಕೆ ಮಸಿ: ಆರೋಪಿ ಬಂಧನ

ದಾವಣಗೆರೆ: ಮಾಜಿ ಪ್ರಧಾನಿ ದಿ.ಇಂದಿರಾ ಗಾಂಧಿ ಅವರ ಭಾವಚಿತ್ರಕ್ಕೆ ಮಸಿ ಬಳಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನ…

ಖಾಸಗಿ ಶಾಲಾ ಶಿಕ್ಷಕರ ಗೋಳು ಕೇಳುವವರು ಯಾರು?: ಶಿಕ್ಷಕರ ಸಮಸ್ಯೆಗೆ ಸ್ಪಂದಿಸಬೇಕಿದೆ ಸರ್ಕಾರ

ಲಾಕ್ ಡೌನ್ ಹಿನ್ನೆಲೆ ಜೂನ್ 1 ಕ್ಕೆ ಆರಂಭವಾಗಬೇಕಿದ್ದ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳು ಈವರೆಗೆ ಆರಂಭವಾಗಿಲ್ಲ. ಇದರಿಂದ ಖಾಸಗಿ ಶಾಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿಕ್ಷಕರು ತೀವ್ರ ತೊಂದರೆಗೀಡಾಗಿದ್ದಾರೆ.

ಚಸ್ ಅಲ್ಲೋ ಮಾರಾಯ ಚೀಯರ್ಸ್ ಅನ್ನು ಶು..!! ಇಂಗ್ಲೀಷ್ ಬ್ಯಾಡ ಕನ್ನಡದಾಗ ಹೇಳು..!

ಶು..!, ಕರ್ನಾಟಕದಾಗ ಹುಟ್ಟಿ ಚೆಸ್ ಅಂತ ಇಂಗ್ಲೀಷ್ ನ್ಯಾಗ್ ಹೇಳ ಬ್ಯಾಡ್ರಿ ಅಂದ, ಕನ್ನಡಾಭಿಮಾನಿಗಳು ಯಾರಾದ್ರು ಕೇಳಿಸಿಕೊಂಡ್ರ ಕುಡುಕರೆಲ್ಲ ಕನ್ನಡ ಬಿಟ್ಟು ಇಂಗ್ಲೀಷ್ ಮಾತಾಡಾಕತ್ಯಾರ ಅಂತ ಸ್ಟ್ರೈಕ್ ಮಾಡಿ ಬಾರ್ ಬಂದ್ ಮಾಡಿಸಿಗಿಡಿಸ್ಯಾರೋ ಮಾರಾಯ್ರ.

ವಾರದ ಮಲ್ಲಪ್ಪನವರ ಸಮಾಜಿಕ ಸೇವೆ ಅಪಾರ : ಅಂದಾನೆಪ್ಪ ವಿಭೂತಿ

ವಾರದ ಮಲ್ಲಪ್ಪ ಅವರು ಸಾಮಾಜಿಕವಾಗಿ, ಶೈಕ್ಷಣಿಕವಾಗಿ, ಧಾರ್ಮಿಕವಾಗಿ, ಔದ್ಯೋಗಿಕವಾಗಿ ಮಾಡಿದ ಸೇವೆ ಅಪಾರವಾದದ್ದು. ಎಂದು ವಿಭೂತಿ ಪತ್ರಿಕೆ ಸಂಪಾದಕ ಅಂದಾನೆಪ್ಪ ವಿಭೂತಿ ಹೇಳಿದರು.