ಲಕ್ಷ್ಮೇಶ್ವರ:
ಅಕಾಲಿಕ ಮಳೆ ಹಾಗೂ ಸಾಲದ ಹೊರೆ ತಾಲೂಕಿನಲ್ಲಿ ರೈತರೊಬ್ಬರ ಜೀವ ತೆಗೆದಿದೆ. ಬೆಳೆದ ಬೆಳೆ ಕಣ್ಣೆದುರೇ ಹಾಳಾಗಿದ್ದನ್ನು ಕಂಡ ರೈತ ಮುಂದೆ ಜೀವನ ಹೇಗೆ, ಬ್ಯಾಂಕಿನ ಸಾಲ ಹೇಗೆ ತಿರಿಸೊದು ಎಂದು ಮನನೊಂದು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ದೊಡ್ಡೂರು ಗ್ರಾಮದಲ್ಲಿ ನಡೆದಿದೆ.

ತಾಲೂಕಿನ ದೊಡ್ಡೂರ ಗ್ರಾಮದ ಜಗದೀಶ ಚನ್ನಬಸಪ್ಪ ಬಾಗಲದ (52) ಆತ್ಮಹತ್ಯೆ ಮಾಡಿಕೊಂಡ ರೈತ. ಅವರು ತಮ್ಮ ಹೊಲದಲ್ಲಿ ಕಷ್ಟಪಟ್ಟು ಬೆಳೆ ಬೆಳೆದಿದ್ದರು. ಕೆಲ ದಿನಗಳ ಹಿಂದೆ ಸುರಿದ ಮಳೆಗೆ ಬೆಳೆಗಳು ನಾಶವಾಗಿದ್ದವು. ಬೆಳೆ ಹಾಳಾಗಿದ್ದರಿಂದ ಹಾಗೂ ತಾಲೂಕಿನ ಶಿಗ್ಲಿ ಗ್ರಾಮದ ಕೇನೆರಾ ಬ್ಯಾಂಕ್ ನಲ್ಲಿ 2 ಲಕ್ಷ 65 ಸಾವಿರ ರೂಪಾಯಿ ಸಾಲ ಮಾಡಿದ್ದ ರೈತ ಮಾನಸಿಕವಾಗಿ ತೀವ್ರ ನೊಂದಿದ್ದರು ಎನ್ನಲಾಗುತ್ತಿದೆ. ಸಾಲಭಾದೆಯಿಂದ ರೈತ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಲಕ್ಷ್ಮೇಶ್ವರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

You May Also Like

ಬೆಂಬಲ ಬೆಲೆಯಲ್ಲಿ ಸರ್ಕಾರ ಗೋವಿನ ಜೋಳ ಖರೀದಿಸಲು ರೈತರ ಆಗ್ರಹ

ತಾನು ಬೆಳೆದ ಬೆಳೆ ತನ್ನ ಬದುಕು ಬಂಗಾರವಾಗಿಸುತ್ತದೆ ಎಂದು ನಂಬಿದ ಅನ್ನದಾನಿಗೆ ಭಾರಿ ನಿರಾಶೆಯಾಗಿದೆ. ಬಿಳಿ ಗೋವಿನ ಜೋಳ ಬದುಕಿನಲ್ಲಿ ಬೆಳಕು ಚೆಲ್ಲುತ್ತೆ ಎಂಬ ವಿಶ್ವಾಸದಲ್ಲಿ ರೈತನಿಗೆ ಬಿಳಿ ಗೋವಿನ ಜೋಳ ಕೂಡ ಉತ್ತಮ ಧಾರಣೆ ನೀಡದ ಹಿನ್ನೆಲೆ ಬದುಕಿಗೆ ಕತ್ತಲೆ ಆವರಿಸಿದಂತಾಗಿದೆ. ಇದರಿಂದ ಉತ್ತಮ ಧಾರಣೆಯ ನಿರೀಕ್ಷೆಯಲ್ಲಿದ್ದ ರೈತರು ಅಸಹಾಯಕರಾಗಿ ಕೈಚೆಲ್ಲಿ ಕುಳಿತಿದ್ದಾರೆ.

ಯುವತಿಯ ಚಿಕಿತ್ಸೆಗೆ ನೆರವಾದ ಗದಗ-ಬೆಟಗೇರಿ ಪೊಲೀಸರು

ಉತ್ತರಪ್ರಭ ಗದಗ-ಬೆಟಗೇರಿ ಪೊಲೀಸರ ಕಾರ್ಯಕ್ಕೆ ಗದಗ-ಬೆಟಗೇರಿ ಜನತೆ ಮೆಚ್ಚಿಗೆ. ಗದಗ ಬೆಟಿಗೇರಿ ನಗರದ ಬಡಕುಟುಂಬದ ಯುವತಿ…

24 ಗಂಟೆಗಳಲ್ಲಿ ರಾಜ್ಯದಲ್ಲಿ 37 ಕೋವಿಡ್ ಪಾಸಿಟಿವ್

ಮೇ 03 ಸಂಜೆ 5 ರಿಂದ ಮೇ 04 ಸಂಜೆ 5ರ ವರೆಗೆ 37 ಹೊಸ ಕೋವಿಡ್-19 ಪ್ರಕರಣಗಳು ರಾಜ್ಯದಲ್ಲಿ ಪತ್ತೆಯಾಗಿದೆ.

ಜುಲೈನಲ್ಲಿ ಪಿಯುಸಿ ಹಾಗೂ ಆಗಸ್ಟ್‌ ಮೊದಲ ವಾರದಲ್ಲಿ ಎಸ್ಸೆಸ್ಸೆಲ್ಸಿ ಫಲಿತಾಂಶ : ಶಿಕ್ಷಣ ಸಚಿವ ಸುರೇಶ್ ಕುಮಾರ್

ಚಿಕ್ಕಬಳ್ಳಾಪುರ : ರಾಜ್ಯದಲ್ಲಿ ಸದ್ಯ ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಯುತ್ತಿದೆ. ಜುಲೈನಲ್ಲಿ ಪಿಯುಸಿ ಪರೀಕ್ಷೆ ಫಲಿತಾಂಶ ಹಾಗೂ…