ಲಕ್ಷ್ಮೇಶ್ವರ:
ಅಕಾಲಿಕ ಮಳೆ ಹಾಗೂ ಸಾಲದ ಹೊರೆ ತಾಲೂಕಿನಲ್ಲಿ ರೈತರೊಬ್ಬರ ಜೀವ ತೆಗೆದಿದೆ. ಬೆಳೆದ ಬೆಳೆ ಕಣ್ಣೆದುರೇ ಹಾಳಾಗಿದ್ದನ್ನು ಕಂಡ ರೈತ ಮುಂದೆ ಜೀವನ ಹೇಗೆ, ಬ್ಯಾಂಕಿನ ಸಾಲ ಹೇಗೆ ತಿರಿಸೊದು ಎಂದು ಮನನೊಂದು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ದೊಡ್ಡೂರು ಗ್ರಾಮದಲ್ಲಿ ನಡೆದಿದೆ.

ತಾಲೂಕಿನ ದೊಡ್ಡೂರ ಗ್ರಾಮದ ಜಗದೀಶ ಚನ್ನಬಸಪ್ಪ ಬಾಗಲದ (52) ಆತ್ಮಹತ್ಯೆ ಮಾಡಿಕೊಂಡ ರೈತ. ಅವರು ತಮ್ಮ ಹೊಲದಲ್ಲಿ ಕಷ್ಟಪಟ್ಟು ಬೆಳೆ ಬೆಳೆದಿದ್ದರು. ಕೆಲ ದಿನಗಳ ಹಿಂದೆ ಸುರಿದ ಮಳೆಗೆ ಬೆಳೆಗಳು ನಾಶವಾಗಿದ್ದವು. ಬೆಳೆ ಹಾಳಾಗಿದ್ದರಿಂದ ಹಾಗೂ ತಾಲೂಕಿನ ಶಿಗ್ಲಿ ಗ್ರಾಮದ ಕೇನೆರಾ ಬ್ಯಾಂಕ್ ನಲ್ಲಿ 2 ಲಕ್ಷ 65 ಸಾವಿರ ರೂಪಾಯಿ ಸಾಲ ಮಾಡಿದ್ದ ರೈತ ಮಾನಸಿಕವಾಗಿ ತೀವ್ರ ನೊಂದಿದ್ದರು ಎನ್ನಲಾಗುತ್ತಿದೆ. ಸಾಲಭಾದೆಯಿಂದ ರೈತ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಲಕ್ಷ್ಮೇಶ್ವರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

You May Also Like

ನೀವು ಸರ್ಕಾರಿ ಜಮೀನು ಲೀಜ್ ಪಡೆದಿದ್ದಿರಾ? ಆ ಜಮೀನು ನಿಮ್ಮದಾಗಲಿದೆ..!

ಬೆಂಗಳೂರು: ಗುತ್ತಿಗೆಯಡಿಯಲ್ಲಿ ನೀಡಿದ್ದ ಸರ್ಕಾರಿ ಜಮೀನನ್ನು ಖಾಯಂ ಆಗಿ ಅವರ ಹೆಸರಿಗೆ ಮಾರ್ಪಡಿಸಲು ರಾಜ್ಯ ಸರ್ಕಾರ…

ಗದಗನಲ್ಲಿ ಅಲ್ಪಸಂಖ್ಯಾತ ನಿಗಮದ ಅಧಿಕಾರಿ ಎಸಿಬಿ ಬಲೆಗೆ

ಗದಗ: ನಗರದ ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕ ಹಾಗೂ ಕಂಪ್ಯೂಟರ್ ಆಪರೇಟರ್ ಇಂದು ಎಸಿಬಿ…

ಹಾಸ್ಯನಟ ಮಿಮಿಕ್ರಿ ರಾಜಗೋಪಾಲ್ ಕಾಲವಶ

ಬೆಂಗಳೂರು: ಕನ್ನಡ, ತಮಿಳು ಮತ್ತಿತರ ಭಾಷೆಗಳ 650ಕ್ಕೂ ಅಧಿಕ ಸಿನಿಮಾಗಳಲ್ಲಿ ಅಭಿನಯಿಸಿದ್ದ ಹಾಸ್ಯ ನಟ ಮಿಮಿಕ್ರಿ…

7 ದಿನಗಳಿಂದ ಗ್ರಾ.ಪಂ ನೌಕರರ ಕಾರ್ಯ ಸ್ಥಗಿತ ; ಸಾರ್ವಜನಿಕರಿಗೆ ಪರದಾಟ ; ಧರಣಿ ‘ಕೈ’ ಬಿಡದ ಗ್ರಾ.ಪಂ ಒಕ್ಕೂಟ..!

ಉತ್ತರಪ್ರಭ ಗದಗ :ಕಳೆದ 7 ದಿನಗಳಿಂದ ರಾಜ್ಯಾದ್ಯಂತ ಗ್ರಾ.ಪಂ ಅಭಿವೃದ್ಧಿ ಅಧಿಕಾರಿಗಳು, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತನ…