ಉತ್ತರ ಪ್ರಭ ಸುದ್ದಿ
ರೋಣ : ತಾಲೂಕಿನ ಜಿಗಳೂರ ಗ್ರಾಮದಲ್ಲಿ ಸುಮಾರು 20 ಲಕ್ಷ ವೆಚ್ಚದ ಅಂಬೇಡ್ಕರ್ ಸಮುದಾಯ ಭವನ ನಿರ್ಮಾಣಕ್ಕೆ ರೋಣ ಶಾಸಕ ಕೆ ಜಿ ಬಂಡಿಯವರು ಭೂಮಿ ಪೂಜೆ ಮಾಡಿದರು.
ಭವನದ ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಶಾಸಕರು ಜಿಗಳೂರ ಗ್ರಾಮಸ್ಥರು ಒಗ್ಗಟ್ಟಾಗಿರುವುದು ಒಳ್ಳೇದು ಆದರೆ ಚುನಾವಣೆ ಬಹಿಸ್ಕಾರ ಹಾಕುತ್ತಿರುವುದು ಡಾ ಬಾಬಾ ಸಾಹೇಬ್ ಅಂಬೇಡ್ಕರ್ ರಚಿಸಿದ ಸಂವಿಧಾನಕ್ಕೆ ಅವಮಾನ ಮಾಡಿದಂತಾಗುವದು, ಮತದಾನ ಪ್ರತಿಯೊಬ್ಬರ ಹಕ್ಕು ಆ ಹಕ್ಕನ್ನು ಪ್ರತಿಯೊಬ್ಬರೂ ಚಲಾಯಿಸಲೇಬೇಕು, ಅದನ್ನು ಬಿಟ್ಟು ನೀವೆಲ್ಲಾ ಸುಮ್ಮನೆ ಕುಳಿತುಕೊಂಡರೆ ಹೇಗೆ ಎಂದರು. ನಿಮ್ಮ ಗ್ರಾಮಕ್ಕೆ 20 ಲಕ್ಷ ಅನುದಾನ ಅಂಬೇಡ್ಕರ್ ಸಮುದಾಯ ಭವನವಷ್ಟೇ ಮಾಡಿದರೆ ಅಭಿವೃದ್ಧಿ ಕಾರ್ಯ ಮುಗಿಯುವದಿಲ್ಲ ಇನ್ನೂ ಸಿಕ್ಕಾಪಟ್ಟೆ ಅಭಿವೃದ್ಧಿ ಕಾಮಗಾರಿಗಳು ಆಗಬೇಕು ಎಲ್ಲದನ್ನು ಆ ಭಾಗದ ಶಾಸಕ ಮಾತ್ರ ಮಾಡುವದಕ್ಕೆ ಬರುವದಿಲ್ಲ ಗ್ರಾಮ ಪಂಚಾಯತ್ ಸದಸ್ಯರ ಪಾತ್ರ ಹೆಚ್ಚಿನದು ಆದ್ದರಿಂದ ತಾವೆಲ್ಲರೂ ಸೇರಿ ಮುಂದಿನ ದಿನಮಾನಗಳಲ್ಲಿ ಎಲ್ಲರೂ ಸೇರಿ ಚುನಾವಣೆಗೆ ಒಳ್ಳೆಯ ಅಭ್ಯರ್ಥಿ ಆಯ್ಕೆ ಮಾಡಿ ನಿಮ್ಮ ಗ್ರಾಮದ ಅಭಿವೃದ್ಧಿಗೆ ಮುಂದಾಗಿರಿ ಎಂದು ಬುದ್ದಿವಾದ ಹೇಳಿದರು.
ಈ ಸಂದರ್ಭದಲ್ಲಿ ಗ್ರಾಮಸ್ಥರಾದ ಬಾಬುಗೌಡ ಪಾಟೀಲ. ನೆರೆ ಗ್ರಾಮದ ಮಲ್ಲು ಮಾದರ,y ದುರ್ಗಪ್ಪ,ಬಸವರಾಜ, ಪರಸು ಮಾದರ ಇನ್ನೂ ಅನೇಕರು ಉಪಸ್ಥಿತರಿದ್ದರು..

Leave a Reply

Your email address will not be published. Required fields are marked *

You May Also Like

ಆಲಮಟ್ಟಿ: 1.25 ಲಕ್ಷ ಕ್ಯುಸೆಕ್ ನೀರು ಬಿಡುಗಡೆ “ಪ್ರವಾಹ ನಿಯಂತ್ರಣಕ್ಕೆ ಹಂತ ಹಂತ ಹೊರ ಹರಿವು ಹೆಚ್ಚಳ”

ಆಲಮಟ್ಟಿ: ಕೃಷ್ಣಾ ನದಿಯಲ್ಲಿ ಒಳಹರಿವು ಹೆಚ್ಚಾದ ಹಿನ್ನೆಲೆಯಲ್ಲಿ ಆಲಮಟ್ಟಿ ಆಣೆಕಟ್ಟುಯಿಂದ 1.25 ಲಕ್ಷ ಕ್ಯುಸೆಕ್ ನೀರು…

ಕೊರೋನಾ ಸೋಂಕಿತರ ಸಂಖ್ಯೆ ಬಹಿರಂಗಕ್ಕೂ ಮೀನಾಮೇಷವೇ..?

ಲಾಕ್ ಡೌನ್ ಸಡಿಲಿಕೆಯಿಂದ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಸೋಂಕಿತರ ಸಂಖ್ಯೆಯಿಂದಾಗಿ ಕೇಂದ್ರ ಸರ್ಕಾರ ಅಂಕಿಸಂಖ್ಯೆಯನ್ನು ಬಹಿರಂಗ ಪಡಿಸಲು ಮೀನಾಮೇಷ ಎಣಿಸುತ್ತಿದೆಯೇ? ಎಂಬ ಪ್ರಶ್ನೆ ಉದ್ಭವವಾಗಿದೆ.

ಜೂನ್ 30 ರವರೆಗೆ ಲಾಕ್ಡೌನ್ ಕೇಂದ್ರ ಸರ್ಕಾರ ಹೇಳಿದ್ದೇನು? : ಸಚಿವ ಶೆಟ್ಟರ್ ಸ್ಪಷ್ಟನೆ

ಹುಬ್ಬಳ್ಳಿ: ರಾಜ್ಯದಲ್ಲಿ ಜೂನ್ 7 ರವರೆಗೆ ಲಾಕ್ ಡೌನ್ ಜಾರಿಯಲ್ಲಿದೆ. ಅಲ್ಲಿಯವರೆಗೆ ಲಾಕ್ ಡೌನ್ ಬಗ್ಗೆ ವಿಚಾರ ಬೇಡಾ. ಅಲ್ಲದೇ ಕೇಂದ್ರ ಸರ್ಕಾರ ಜೂನ್ 30 ರವರೆಗೆ ಲಾಕ್ ಡೌನ್ ಘೋಷಣೆ ಮಾಡಲಾಗುವುದು ಎಂದು ಹೇಳಿಲ್ಲಾ.

ಗದಗ ಜಿಲ್ಲೆಯಲ್ಲಿ ಐದು ದಿನ ಸಂಪೂರ್ಣ ಲಾಕ್ ಡೌನ್: ಏನಿರುತ್ತೆ..? ಏನಿರಲ್ಲಾ…?

ಗದಗ: ಈಗಾಗಲೇ ಕೋರೊನಾ ಸೋಂಕಿತರ ಪ್ರಮಾಣ ಹೆಚ್ಚುತ್ತಿದ್ದು, ಕೋವಿಡ್ ನಿಯಂತ್ರಣದ ದೃಷ್ಟಿಯಿಂದ ಗದಗ ಜಿಲ್ಲೆಯನ್ನು ಸಂಪೂರ್ಣ ಲಾಕ್ ಡೌನ್ ಗೆ ನಿರ್ಧಾರಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಿ.ಸಿ.ಪಾಟೀಲ್ ಹೇಳಿದರು. ಅವರು ಗದಗನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಮೇ.27 ರ ಬೆಳಿಗ್ಗೆ 10 ಗಂಟೆಯಿಂದ ಜೂನ್ 1 ನೇ ತಾರೀಖಿನ ಬೆಳಿಗ್ಗೆ 6 ಗಂಟೆಯವರೆಗೆ ಕಠಿಣ ಲಾಕ್ ಡೌನ್ ವಿಧಿಸಲಾಗಿದೆ.