ಗದಗ: ಹುಲಕೋಟಿ ಸಹಕಾರಿ ಶಿಕ್ಷಣ ಸಂಸ್ಥೆಯ ಪದವಿ ಪೂರ್ವ ಕಾಲೇಜಿನ ನಿವೃತ್ತ ಪ್ರಾಚಾರ್ಯರು ಮತ್ತು ನೆಲ್ಸನ್ ಮಂಡೇಲಾ ಶಿಕ್ಷಣ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷರೂ ಆಗಿದ್ದ ಶ್ರೀ ಡಿ.ಡಿ. ಕಡೇಮನಿಯವರು ತಮ್ಮ ೭೩ನೇ ವಯಸ್ಸಿನಲ್ಲಿ ದಿ.೬ ರಂದು ಗುರುವಾರ ಹೃದಯಾಘಾತದಿಂದ ನಿಧನರಾದರು.
ಇವರು ತಮ್ಮ ಧರ್ಮಪತ್ನಿ ಶ್ರೀಮತಿ ವಿಜಯಲಕ್ಷ್ಮಿ ಕಡೇಮನಿ, ಸುಪುತ್ರರಾದ ವಿಶಾಲ್ ಹಾಗೂ ವಿಜಯಕುಮಾರ, ಮಗಳು ಶ್ರೀಮತಿ ರೇಶ್ಮಾ ಕೋಂ. ಆನಂದ ಜಿಗಜಿಣಗಿ, ಸೊಸೆ ಶ್ರೀದೇವಿಯವರನ್ನು ಹಾಗೂ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ.
ಮಾಜಿ ಕೇಂದ್ರ ಸಚಿವರು ಹಾಗೂ ಸಂಸದರಾದ ಶ್ರೀ ರಮೇಶ ಜಿಗಜಿಣಗಿ, ಹಿರಿಯರಾದ ಮೋಹನ ಆಲಮೇಲಕರ, ಜಗದ್ಗುರು ತೋಂಟದಾರ್ಯ ವಿದ್ಯಾಪೀಠದ ಕಾರ‍್ಯದರ್ಶಿಗಳಾದ ಶಿವಾನಂದ ಎಸ್. ಪಟ್ಟಣಶೆಟ್ಟಿ, ಹಿರಿಯ ಮುಖಂಡರಾದ ಎಸ್. ಎನ್. ಬಳ್ಳಾರಿ ನಿವೃತ್ತ ಶಿಕ್ಷಕರು, ಪ್ರೊ. ಸತೀಶ ಪಾಸಿ ಹಾಗೂ ಅವರ ಅಭಿಮಾನಿಗಳು ಡಿ.ಡಿ. ಕಡೇಮನಿಯವರ ನಿಧನಕ್ಕೆ ತೀವ್ರ ಸಂತಾಪ ಸೂಚಿಸಿದ್ದಾರೆ.

ಮೃತರ ಅಂತ್ಯಕ್ರಿಯೆ ದಿ.೭ ರಂದು ಶುಕ್ರವಾರ ಮುಂಜಾನೆ ೧೧ ಗಂಟೆಗೆ ಹಾತಲಗೇರಿ ರಸ್ತೆಯ ಹಿಂದೂ ರುದ್ರಭೂಮಿಯಲ್ಲಿ ಜರುಗುವುದು.

Leave a Reply

Your email address will not be published. Required fields are marked *

You May Also Like

ಜು.30 ರಿಂದ ಸಿಇಟಿ ಪರೀಕ್ಷೆ

ಜುಲೈ 30 ಮತ್ತು 31 ರಂದು ಸಿಇಟಿ ಪರೀಕ್ಷೆ ನಡೆಸಲಾಗುತ್ತಿದ್ದು, ಎಂದಿನಂತೆ ಆಫ್ ಲೈನ್ ನಲ್ಲಿ ಈ ಬಾರಿಯೂ ಪರೀಕ್ಷೆ ನಡೆಯಲಿದೆ ಎಂದಿದ್ದಾರೆ.

ಅಂದರ ಬಾಹರ ಆಡುತ್ತಿದ್ದ 6 ಜನ ಬಂದನ

ಲಕ್ಷ್ಮೇಶ್ವರ. ಲಕ್ಷ್ಮೇಶ್ವರ ಪಟ್ಟಣದಲ್ಲಿ ಕೊಡಿಯಲ್ಲಮ್ಮ ದೇವಸ್ಥಾನದ ಮುಂಬಾಗ, ಸಾರ್ವಜನಿಕ ಬಯಲು ಪ್ರದೇಶದಲ್ಲಿ ಇಸ್ಪೀಟ್ (ಅಂದರ ಬಾಹರ)…

ಗದಗ: ಕಾರ್ ಅಪಘಾತ ಮೂವರು ಶಿಕ್ಷಕರಿಗೆ ಗಂಭೀರ ಗಾಯ

ಗದಗ: ಕಾರ್ ಅಪಘಾತದಲ್ಲಿ ಮೂವರು ಶಿಕ್ಷಕರು ಗಂಭೀರ ಗಾಯಗೊಂಡ ಘಟನೆ ಗದಗ ತಾಲೂಕಿನ ನರ್ಸಾಪೂರ ಗ್ರಾಮದ…

ಆಂತರಿಕ ಕಚ್ಚಾಟದಿಂದ ಬಿಜೆಪಿ ಸರ್ಕಾರ ಪತನವಾದರೆ ನಾವು ಜವಾಬ್ದಾರರಲ್ಲ-ಸಿದ್ದರಾಮಯ್ಯ

ಕಾಂಗ್ರೆಸ್ ಪಕ್ಷದ ಯಾವ ಶಾಸಕರು ರಾಜಿನಾಮೆ ನೀಡುವುದಿಲ್ಲ. ತಮ್ಮ ಪಕ್ಷದ ಹುಳುಕು ಮುಚ್ಚಿಕೊಳ್ಳಲು ಸಚಿವ ರಮೇಶ್ ಜಾರಕಿಹೊಳಿ ಸುಳ್ಳು ಹೇಳುತ್ತಿದ್ದಾರೆ. ಬಿಜೆಪಿಯಲ್ಲಿನ ಆಂತರಿಕ ಕಚ್ಚಾಟವೇ ಬಿಜೆಪಿಗೆ ಮುಳುವಾಗಲಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದರು.