ಗದಗ : ಕಾರ್ಮಿಕ ಇಲಾಖೆ ಅಡಿಯಲ್ಲಿ ಬರುವ ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸೊಸೈಯಟಿಯಲ್ಲಿ ಖಾಲಿ ಇರುವ 1 ಲೆಕ್ಕಿಗರ ಹಾಗೂ 1 ಜವಾನ ಹುದ್ದೆಯನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಸದರಿ ಹುದ್ದೆಗಳನ್ನು ಒಂದು ವರ್ಷದ ಕರಾರಿನ ಆಧಾರದ ಮೇಲೆ ಮಾಸಿಕ ಗೌರಧನ ನೀಡಲಾಗುತ್ತದೆ.  ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗಾಗಿ ಕಾರ್ಮಿಕ ಅಧಿಕಾರಿಗಳ ಕಚೇರಿ, ಜಿಲ್ಲಾಡಳಿತ ಭವನ, 1 ನೇ ಮಹಡಿ ಗದಗ ಇವರನ್ನು ಸಂಪರ್ಕಿಸಬಹುದಾಗಿದೆ. ದಿನಾಂಕ: 14-01-2022 ರ ಸಂಜೆ 5 ಗಂಟೆಯೊಳಗಾಗಿ ಅರ್ಜಿಗಳನ್ನು ಸಲ್ಲಿಸಬಹುದಾಗಿದ್ದು ತದನಂತರ ಸ್ವೀಕೃತಗೊಂಡ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಜಿಲ್ಲಾ ಕಾರ್ಮಿಕ ಇಲಾಖೆ ಪಕಟಣೆಯಲ್ಲಿ ತಿಳಿಸಿದೆ.

Leave a Reply

Your email address will not be published. Required fields are marked *

You May Also Like

ಬಾಗೇಪಲ್ಲಿ: ತಾಲೂಕಿನ ದುಗ್ಗಿನಾಕನಪಲ್ಲಿ ಗ್ರಾಮದ ಕೆರೆ ಕಾಲುವೆ ಪ್ರದೇಶದ ಒತ್ತುವರಿ ತೆರವುಗೆ ದೂರು

ಉತ್ತರಪ್ರಭ ಸುದ್ದಿ ಬಾಗೇಪಲ್ಲಿ: ತಾಲೂಕಿನ ದುಗ್ಗಿನಾಕನಪಲ್ಲಿ ಗ್ರಾಮದ ಕೆರೆ ಕಾಲುವೆ ಪ್ರದೇಶದ ಒತ್ತುವರಿ ತೆರವುಗೆ ದೂರು…

ಪಿ.ಎಸ್.ಐ ನೇಮಕಾತಿ ವಯೋಮಿತಿ ಹೆಚ್ಚಳ: ಗೃಹ ಸಚಿವ ಬೊಮ್ಮಾಯಿ

ಪಿ.ಎಸ್.ಐ ಹುದ್ದೆಯ ನೇಮಕಾತಿಗೆ ಸಂಬಂಧಿಸಿದಂತೆ ವಯೋಮಿತಿಯನ್ನು ಹೆಚ್ಚಿಸಲಾಗಿದೆ. ಈ ಕುರಿತು ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ.

ಹೊಳೆ ಆಲೂರು: ಮಲಪ್ರಭ ನದಿ ದಡದಲ್ಲಿ ಮೊಸಳೆ ಶವ ಪತ್ತೆ

ಇಲ್ಲಿನ ಮಲಪ್ರಭ ನದಿಯಲ್ಲಿ ಮೊಸಳೆ ಮೃತದೇಹ ಪತ್ತೆಯಾಗಿದೆ. ಕಳೆದ ಎರಡು ದಿನಗಳ ಹಿಂದೆ ಗದಗ ಜಿಲ್ಲೆ ಹೊಳೆಯಾಲೂರು ಗ್ರಾಮದಲ್ಲಿ ಮೊಸಳೆ ಪತ್ತೆಯಾಗಿತ್ತು. ಇದರಿಂದ ಗ್ರಾಮಸ್ಥರಲ್ಲಿ ಆತಂಕ ಮನೆಮಾಡಿತ್ತು. ಇನ್ನು ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಕೂಡ ಭೇಟಿ ನೀಡಿದ್ದರು. ನದಿ ದಡಕ್ಕೆ ಹೋಗದಂತೆ ಗ್ರಾಮ ಪಂಚಾಯತಿ ವತಿಯಿಂದ ಡಂಗುರ ಸಾರಲಾಗಿತ್ತು. ಆದರೆ ಇಂದು ಅದೇ ಸ್ಥಳದಲ್ಲಿ ಮೊಸಳೆಯ ಮೃತದೇಹ ಪತ್ತೆಯಾಗಿದ್ದು, ಬುಧುವಾರ ಇಲ್ಲಿ ಕಾಣಿಸಿಕೊಂಡ ಮೊಸಳೆ ಸಾವನ್ನಪ್ಪಿದಾಗಿರಬಹುದು ಎನ್ನಲಾಗಿದೆ.

ಕಿಚ್ಚನಿಗೆ ಜಪಾನ್ ನಿಂದ ಅಭಿಮಾನಿಯ ಮನವಿ

ಅನಾರೋಗ್ಯದಿಂದಾಗಿ ಕಳೆದ ಎರಡು ವಾರಗಳಿಂದ ಬಿಗ್ ಬಾಸ್ನಲ್ಲಿ ಕಿಚ್ಚ ಸುದೀಪ್ ಭಾಗಿಯಾಗಿಲ್ಲ. ಇದು ಅಭಿಮಾನಿಗಳಿಗೆ ಬೇಸರವುಂಟು ಮಾಡಿದ್ದು ಒಂದುಕಡೆಯಾದರೇ, ಕಿಚ್ಚನ ಆರೋಗ್ಯದ ಬಗ್ಗೆಯೂ ಅಭಿಮಾನಿಗಳಿಗೆ ಚಿಂತೆಯಾಗಿದೆ.