ಬೆಂಗಳೂರು:  ಪದ್ಮನಾಭನಗರ ಕ್ಷೇತ್ರದ ಬಿಜೆಪಿ ಶಾಸಕ, ಕಂದಾಯ ಸಚಿವ ಆರ್. ಅಶೋಕಗೆ ಕೋವಿಡ್ ಸೋಂಕು ತಗುಲಿದೆ. ನಗರದ ಖಾಸಗಿ ಆಸ್ಪತ್ರೆಗೆ ಅವರು ದಾಖಲಾಗಿದ್ದಾರೆ.ಕೋವಿಡ್ ಸೋಂಕು ತಗುಲಿರುವ ಸಚಿವ ಆರ್. ಅಶೋಕ ಶುಕ್ರವಾರ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರು ಚೇತರಿಸಿಕೊಳ್ಳುತ್ತಿದ್ದಾರೆ ಎಂದು ವೈದ್ಯರು ಹೇಳಿದ್ದಾರೆ.

ಕರ್ನಾಟಕದಲ್ಲಿ ಗುರುವಾರ 5031 ಹೊಸ ಕೋವಿಡ್ ಪ್ರಕರಣ ದಾಖಲಾಗಿತ್ತು. ಇದರಲ್ಲಿ ಬೆಂಗಳೂರು ನಗರದಲ್ಲಿಯೇ 4,324 ಪ್ರಕರಣ ಪತ್ತೆಯಾಗಿತ್ತು. ರಾಜ್ಯದ ಪಾಸಿಟಿವಿಟಿ ದರ ಶೇ 3.95 ಆಗಿದೆ. ಕರ್ನಾಟಕದಲ್ಲಿ ಕೋವಿಡ್ ಸೋಂಕು ಹರಡುವಿಕೆ ತಡೆಯಲು ಹಲವಾರು ನಿರ್ಬಂಧಗಳನ್ನು ಜಾರಿಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ. ಶುಕ್ರವಾರ ರಾತ್ರಿ 10 ಗಂಟೆಯಿಂದ ವಾರಾಂತ್ಯದ ಕರ್ಫ್ಯೂ ಸಹ ಜಾರಿಗೆ ಬರುತ್ತಿದೆ. ಮಂಗಳವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಜ್ಞರ ಜೊತೆ ಸುಧೀರ್ಘ ಸಭೆ ನಡೆಸಿದ್ದರು. ಸಭೆಯಲ್ಲಿ ಕಂದಾಯ ಸಚಿವ ಆರ್. ಅಶೋಕ ಸಹ ಪಾಲ್ಗೊಂಡಿದ್ದರು. ಸಭೆಯ ಬಳಿಕ ಅವರೇ ಕಠಿಣ ನಿಯಮಗಳ ಕುರಿತು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದರು.


Leave a Reply

Your email address will not be published. Required fields are marked *

You May Also Like

ಮಹಿಳಾ ನರ್ಸ್ ಚಿಕಿತ್ಸೆ ನೀಡುವಂತೆ ಆಸ್ಪತ್ರ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ ಯುವಕರು

ಅಪಘಾತದಲ್ಲಿ ತಮಗೆ ಗಾಯವಾಗಿದೆ ಎಂದು ಆಸ್ಪತ್ರೆಗೆ ಆಗಮಿಸಿದ ಇಬ್ಬರು ನಮಗೆ ಮಹಿಳಾ ನರ್ಸ್ ಚಿಕಿತ್ಸೆ ನಿಡಬೇಕು ಎಂದು ಆಸ್ಪತ್ರೆಯ ಸಿಬ್ಬಂದಿಗಳ ಮೇಲೆ ಹಲ್ಲೆ ನಡೆಸಿದ್ದಾರೆ.

ಬಿಜೆಪಿಯಿಂದ ಬಿ.ಎಂ.ಟಿ.ಸಿ, ಕೆ.ಎಸ್.ಆರ್.ಟಿ.ಸಿ ಖಾಸಗೀಕರಣದ ಹುನ್ನಾರ: ಎಸ್.ಆರ್.ಪಾಟೀಲ

ಕೇಂದ್ರ ಸರ್ಕಾರ ಎಲ್ಲಾ ಕ್ಷೇತ್ರಗಳನ್ನು ಒಂದೊಂದಾಗಿ ಖಾಸಗೀಕರಣಗೊಳಿಸುತ್ತಿದ್ದು, ಇದೀಗ ಕರ್ನಾಟಕದ @BJP4Karnataka ಸರ್ಕರವೂ ಕೂಡ ಇದೇ ಹಾದಿ ತುಳಿಯುತ್ತಿದೆ. ಬಿಎಂಟಿಸಿ ಸಂಸ್ಥೆಯ ಖಾಸಗೀಕರಣಕ್ಕೆ @BSYBJP @LaxmanSavadi ಮುಂದಾಗಿರುವುದನ್ನು ನಾನು ಖಂಡಿಸುತ್ತೇನೆ ಎಂದು ವಿಧಾನಪರಿಷತ್ ಸದಸ್ಯ ಎಸ್.ಆರ್.ಪಾಟೀಲ್ ಹೇಳಿದ್ದಾರೆ.

ಐರನ್ ಅಂಗಡಿಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು

ಉತ್ತರಪ್ರಭ ಪಾವಗಡ: ತುಮಕೂರು ಜಿಲ್ಲೆಯ ಗಡಿ ಪ್ರದೇಶವಾದ ಪಾವಗಡ ತಾಲ್ಲೂಕಿನ ತಮ್ಮ ಸ್ವ ಗ್ರಾಮವಾದ ಮಂಗಳವಾಡ…

ಆಂಧ್ರಪ್ರದೇಶ: ಎಸ್.ಎಸ್.ಎಲ್ಸಿ ಪರೀಕ್ಷೆ ರದ್ದುಗೊಳಿಸಿ ಆದೇಶ

ಆಂಧ್ರಪ್ರದೇಶ : ಮಹಾಮಾರಿಯ ಅಟ್ಟಹಾಸ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಆಂಧ್ರ ಪ್ರದೇಶ ಸರ್ಕಾರ, ಎಸ್ಸೆಸ್ಸೆಲ್ಸಿ ಪರೀಕ್ಷೆಯನ್ನು ರದ್ದುಗೊಳಿಸಿ ಆದೇಶ ಹೊರಡಿಸಿದೆ.