ಗದಗ : ರಾಜ್ಯಾದ್ಯಂತ ಸೋಂಕು ನಿಯಂತ್ರಣಕ್ಕಾಗಿ ರ‍್ಕಾರ ಜಾರಿಗೊಳಿಸಿರುವ ಮರ‍್ಗಸೂಚಿಗಳನ್ನು ಜಿಲ್ಲೆಯ ಕಂದಾಯ, ಪೊಲೀಸ್ ಹಾಗೂ ಇತರೆ ಇಲಾಖೆಗಳು ಸಮನ್ವಯದೊಂದಿಗೆ ಕಾರ್ಯ ನಿರ್ವಹಿಸುವದರ ಮೂಲಕ ರಾತ್ರಿ ಹಾಗೂ ವಾರಾಂತ್ಯದ ಕಫ್ರ‍್ಯೂ ಮರ‍್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸುವಂತೆ ಜಿಲ್ಲಾ ವಿಪತ್ತು ನರ‍್ವಹಣಾ ಸಮಿತಿ ಅಧ್ಯಕ್ಷರು ಹಾಗೂ ಜಿಲ್ಲಾಧಿಕಾರಿ ಎಂ.ಸುಂದರೇಶ್ ಬಾಬು ಅವರು ಸೂಚನೇ ನೀಡಿದರು.

ಜಿಲ್ಲಾಡಳಿತ ಭವನದ ವಿಡೀಯೋ ಸಂವಾದ ಸಭಾಂಗಣದಲ್ಲಿ ಶುಕ್ರವಾರ ಜರುಗಿದ ಕೋವಿಡ್ ಸೋಂಕು ನಿಯಂತ್ರಣ ಹಾಗೂ ಕಠಿಣ ಮರ‍್ಗಸೂಚಿಗಳ ಅನುಷ್ಠಾನ ಕುರಿತ ಜರುಗಿದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಸೋಂಕು ನಿಯಂತ್ರಣದಲ್ಲಿ ವಿವಿಧ ಇಲಾಖೆಗಳು ಪ್ರಮುಖವಾಗಿ ಪೊಲೀಸ್ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳು ಮುಂಚೂಣಿಯಲ್ಲಿ ನಿಂತು ಪರಸ್ಪರ ಸಮನ್ವಯದೊಂದಿಗೆ ರ‍್ತವ್ಯ ನರ‍್ವಹಿಸಬೇಕು. ತಾಲೂಕಾಡಳಿತ ಹಾಗೂ ಸ್ಥಳೀಯ ಆಡಳಿತಗಳು ಸೋಂಕಿನ ಹತೋಟಿಗೆ ಮರ‍್ಗಸೂಚಿಗಳ ಪಾಲನೆ ಸರಿಯಾಗಿ ಅನುಷ್ಠಾನಗೊಳಿಸಬೇಕೆಂದು ಸೂಚಿಸಿದರು.

ದಿ. 05-01-2022 ರ ರಾತ್ರಿ 10 ಗಂಟೆಯಿಂದ ದಿ.19-01-2022ರ ಬೆಳಗ್ಗೆ 5 ಗಂಟೆಯವರೆಗೆ ರಾತ್ರಿ ಕಫ್ರ‍್ಯೂ ಹಾಗೂ ಶುಕ್ರವಾರ ರಾತ್ರಿ 10 ಗಂಟೆಯಿಂದ ಸೋಮವಾರ ಬೆಳಗಿನ 5 ಗಂಟೆಯವರೆಗೆ ವಾರಾಂತ್ಯದ ಕಫ್ರ‍್ಯೂ ಜಾರಿಯಲ್ಲಿರುತ್ತದೆ. ಈ ಅವಧಿಯಲ್ಲಿ ಸರ್ಕಾರ ಜಾರಿಗೊಳಿಸಿರುವ ಪರಿಷ್ಕೃತ ಮರ‍್ಗಸೂಚಿಗಳ ಪಾಲನೆಯಾಗುವಂತೆ ನಿಗಾವಹಿಸಬೇಕು. ಹಾಗೂ ಮಾರ್ಗಸೂಚಿ ಉಲ್ಲಂಘಿಸುವವರ ಮೇಲೆ ನಿಯಮಾನುಸಾರ ಕ್ರಮ ಕೈಗೊಳ್ಳುವಂತೆ ನಿರ್ದೇಶನ ನೀಡಿದರು.

ವಾರಾಂತ್ಯದ ಕಫ್ರ‍್ಯೂ ವೇಳೆಯಲ್ಲಿ ಬರುವ ಸಂತೆಗಳನ್ನು ಸಾಧ್ಯವಾದಷ್ಟು ಮುಂದೂಡಬೇಕು. ಇಲ್ಲವಾದಲ್ಲಿ ವಿಶಾಲವಾದ ಮೈದಾನಕ್ಕೆ ರ‍್ಗಾಯಿಸಿ ಕೋವಿಡ್ ಮರ‍್ಗಸೂಚಿ ಪಾಲನೆಯಾಗುವಂತೆ ನೋಡಿಕೊಳ್ಳಬೇಕು. ಅಗತ್ಯ ಸೇವೆಗಳ ಅಂಗಡಿ ಮುಂಗ್ಗಟ್ಟುಗಳಲ್ಲಿ ಕೋವಿಡ್ ನಿಯಮ ಕಟ್ಟುನಿಟ್ಟಾಗಿ ಪಾಲಿಸಬೇಕು. ಹಾಗೂ ಪ್ರವೇಶ ದ್ವಾರದಲ್ಲಿ ಕಡ್ಡಾಯವಾಗಿ ಮಾಸ್ಕ ಧರಿಸಿ ಆಗಮಿಸುವಂತೆ ಅಳವಡಿಸಲು ತಿಳಿಸಿ ಸಾಮಾಜಿಕ ಅಂತರ ಪಾಲನೆಯಾಗುವಂತೆ ನೋಡಿಕೊಳ್ಳಬೇಕೆಂದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಿ. ಶಿವಪ್ರಕಾಶ ಅವರು ಮಾತನಾಡಿ ಗದಗ ನಗರದ ಸುತ್ತಲಿನ ಪ್ರಮುಖ ಪ್ರವೇಶ ರಸ್ತೆಗಳಲ್ಲಿ ಚೆಕ್ ಪೋಸ್ಟ ತೆರೆಯುವ ಮೂಲಕ ಅನಗತ್ಯ ಸಾರ‍್ವಜನಿಕರ ಸಂಚಾರವನ್ನು ತಡೆಯಬೇಕು. ಸಂಚಾರಿ ದಳಗಳ ವಾಹನಗಳ ಮೂಲಕ ಅಲ್ಲಲ್ಲಿ ಅನಗತ್ಯ ಜನ ಸಂಚಾರವನ್ನು ನಿಯಂತ್ರಿಸಬೇಕು. ಬೀಟ್ ಪೊಲೀಸರು ಪ್ರತಿದಿನ ಜನಜಂಗುಳಿ ಸೇರುವ ಪ್ರದೇಶಗಳ ಮಾಹಿತಿಯನ್ನು ಮೇಲಾಧಿಕಾರಿಗಳಿಗೆ ತಿಳಿಸುವ ಮೂಲಕ ನಿಯಂತ್ರಿಸಲು ಸೂಕ್ತ ಕ್ರಮ ವಹಿಸಬೇಕು. ತಾಲೂಕುಗಳಲ್ಲಿ ಪೊಲೀಸ್ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳು ಒಟ್ಟಿಗೆ ಕರ‍್ಯಾಚರಣೆ ಮಾಡಬೇಕು. ಒಟ್ಟಾರೆ ಸರ್ಕಾರ ನೀಡಿರುವ ಮಾರ್ಗಸೂಚಿಗಳ ಪಾಲನೆಯೊಂದಿಗೆ ಜಿಲ್ಲಾದ್ಯಂತ ಸೋಂಕು ನಿಯಂತ್ರಣ ಮಾಡುವ ಉದ್ದೇಶದಿಂದ ಅಗತ್ಯದ ಕ್ರಮಗಳನ್ನು ಅಧಿಕಾರಿಗಳು ಕೈಗೊಳ್ಳುವಂತೆ ಸೂಚಿಸಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಎಂ.ಸತೀಶ್ ಕುಮಾರ,ಉಪವಿಭಾಗಾಧಿಕಾರಿ ರಾಯಪ್ಪ ಹುಣಸಗಿ ಸೇರಿದಂತೆ ಪೊಲೀಸ್ ಇಲಾಖೆ ಹಿರಿಯ ಅಧಿಕಾರಿಗಳು, ವಿವಿಧ ಇಲಾಖೆಯ ಮುಖ್ಯಸ್ಥರು ಆಯಾ ತಾಲೂಕಿನ ತಹಶೀಲ್ದಾರರು, ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.

Leave a Reply

Your email address will not be published. Required fields are marked *

You May Also Like

ಲಕ್ಷ್ಮೇಶ್ವರ: ಕೊರೊನಾ ವಾರಿಯರ್ಸ್ ಗೆ ಶಿಕ್ಷಕನ ಸೇವೆ

ವೀಕೆಂಡ್ ಕರ್ಫ್ಯೂಗೆ ಪಟ್ಟಣದಲ್ಲಿ ಜನತೆ ಸಾಥ್ ನೀಡಿದ್ದು ಜನರು ಇಲ್ಲದೇ ಬಸ್ಟ್ಯಾಂಡ್, ಬಾನು ಮಾರ್ಕೆಟ್ ಸೇರಿದಂತೆ ಅನೇಕ ಕಡೆಗಳಲ್ಲಿ ಬಿಕೋ ಎನ್ನುತ್ತಿದೆ.

ರಾಜ್ಯ ಸರ್ಕಾರದಿಂದ ವಾಹನ ಸವಾರರಿಗೆ ಬಿಗ್ ಶಾಕ್ : ಉಚಿತ ಪಾರ್ಕಿಂಗ್ ರದ್ದು

ವಾಹನ ಸವಾರರಿಗೆ ರಾಜ್ಯ ಸರ್ಕಾರವು ಬಿಗ್ ಶಾಕ್ ನೀಡಿದ್ದು, ಬೆಂಗಳೂರಿನಲ್ಲಿ ಪ್ರಸ್ತುತ ಇರುವ ಉಚಿತ ಪಾರ್ಕಿಂಗ್ ವ್ಯವಸ್ಥೆಯನ್ನು ರದ್ದು ಮಾಡಲು ಗ್ರೀನ್ ಸಿಗ್ನಲ್ ನೀಡಿದೆ.ಪ್ರಸ್ತುತ ಬೆಂಗಳೂರಿನಲ್ಲಿ ಇರುವ ಬಹುತೇಕ ಉಚಿತ ಪಾರ್ಕಿಂಗ್ ವ್ಯವಸ್ಥೆಯನ್ನು ಪಾವತಿ ಪಾರ್ಕಿಂಗ್ ವ್ಯವಸ್ಥೆಗೆ ಬದಲಾಯಿಸುವುದು ಸೇರಿದಂತೆ ನಗರ ಭೂಸಾರಿಗೆ ನಿರ್ದೇಶನಾಲಯ ಸಿದ್ಧಪಡಿಸಿರುವ ಪರಿಷ್ಕೃತ ಪಾರ್ಕಿಂಗ್ ನೀತಿ 2.0 ಅನುಷ್ಠಾನಕ್ಕೆ ರಾಜ್ಯ ಸರ್ಕಾರ ಅನುಮೋದನೆ ನೀಡಿದೆ.

ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ: ಡಾ. ಕೆ. ಸುಧಾಕರ್

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಆದರೆ, ಸೋಂಕಿತರು ಹೆಚ್ಚಿನ…

ಜಿಲ್ಲಾದ್ಯಂತ ಶೇಕಡ 38.98 ಮತದಾನ: ಮದ್ಯಾಹ್ನ 1ಗಂಟೆವರೆಗಿನ ವಿವರ

ಗದಗ ಜಿಲ್ಲೆ ವಿಧಾನಸಭಾ ಚುನಾವಣೆ ಮತದಾನ ವಿವರ ಮಧ್ಯಾಹ್ನ 1=00 ಗಂಟೆಯವರೆಗೆ ಶೇಕಡಾವಾರು ಮತದಾನ ಇಂತಿದೆ.…