ಗದಗ : ಜಿಲ್ಲೆಯಲ್ಲಿನ ಆರೋಗ್ಯ ಕಾರ್ಯಕರ್ತರ, ಮುಂಚೂಣಿ ಕಾರ್ಯಕರ್ತರು ಹಾಗೂ 60 ವರ್ಷದ ಮೇಲ್ಪಟ್ಟ ಸಹ ಅಸ್ವಸ್ಥತೆ ಹೊಂದಿರುವ ಫಲಾನುಭವಿಗಳಿಗೆ ಭಾರತ ಸರ್ಕಾರದ ಶಿಫಾರಸ್ಸನ ಮೇರೆಗೆ ಕೋವಿಡ್-19 ಮುನ್ನೆಚ್ಚರಿಕಾ ಲಸಿಕಾ ಡೋಸ್ ನೀಡುವ ಕಾರ್ಯಕ್ರಮವನ್ನು ಜನೇವರಿ 10 ರಿಂದ ಪ್ರಾರಂಭಿಸಲಾಗುವದು.

ಈಗಾಗಲೇ 2ನೇ ಡೋಸ್ ಲಸಿಕೆ ಪಡೆದ 9 ತಿಂಗಳು (39 ವಾರಗಳ) ನಂತರ ಆರೋಗ್ಯ, ಮುಂಚೂಣಿ ಕಾರ್ಯಕರ್ತರು, 60 ವರ್ಷ ಮೇಲ್ಪಟ್ಟ ಅಸ್ವಸ್ಥತೆ ಹೊಂದಿದ ಫಲಾನುಭವಿಗಳು ಮುನ್ನೆಚ್ಚರಿಕಾ ಡೋಸ್ ಪಡೆಯಲು ಅರ್ಹರಾಗಿದ್ದು ಸರ್ಕಾರಿ ಕೋವಿಡ್-19 ಲಸಿಕಾಕರಣ ಕೇಂದ್ರಗಳಲ್ಲಿ ಈ ಗುಂಪಿನ ಫಲಾನುಭವಿಗಳಿಗೆ ಉಚಿತವಾಗಿ ಲಸಿಕೆಗಳನ್ನು ನೀಡಲಾಗುತ್ತದೆ.

ಓಮಿಕ್ರಾನ ವೈರಸ್ ಭೀತಿಯಲ್ಲಿರುವ ಜನರು ಕಡ್ಡಾಯವಾಗಿ 2 ಡೋಸಗಳನ್ನು ಪಡೆಯಲು ಹಾಗೂ ಮುಂಚೂಣಿ, ಆರೋಗ್ಯ ಕಾರ್ಯಕರ್ತರು ಹಾಗೂ 60 ವರ್ಷ ಮೇಲ್ಪಟ್ಟ ಸಹ ಅಸ್ವಸ್ಥತೆ ಹೊಂದಿರುವವರು ಸ್ವಯಂ ಪ್ರೇರಿತವಾಗಿ ಹೆಚ್ಚುವರಿ ಲಸಿಕೆ ಡೋಸನ್ನು ಪಡೆಯಲು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು ಮನವಿ ಮಾಡಿರುತ್ತಾರೆ.

Leave a Reply

Your email address will not be published. Required fields are marked *

You May Also Like

ಹಕ್ಕಿ ಜ್ವರದ ಆತಂಕದ ನಡುವೆಯೇ ಗದಗ ಜಿಲ್ಲೆಯಲ್ಲಿ ಹಕ್ಕಿಗಳ ಸಾವು

ಇದೀಗ ಹಕ್ಕಿ ಜ್ವರದ ಸುದ್ದಿಯೇ ಸದ್ದು ಮಾಡುತ್ತಿದೆ. ಜನರು ಈ ಆತಂಕದಲ್ಲಿರುವಾಗಲೇ ಗದಗ ಜಿಲ್ಲೆ ಡಂಬಳ ಗ್ರಾಮದಲ್ಲಿ ಹಕ್ಕಿಗಳು ಏಕಾಏಕಿ ಸಾವನ್ನಪ್ಪಿರುವುದು ಇಲ್ಲಿನ ಜನರನ್ನು ಗಾಬರಿಗೊಳಿಸಿದೆ.

ಕಟ್ಟಡ ಕಾರ್ಮಿಕರು ಲಾಕ್ ಡೌನ್ ಪರಿಹಾರಧನ ಪಡೆಯಲು ಇರುವ ಷರತ್ತುಗಳೇನು?

ಬೆಂಗಳೂರು: ಕೋವಿಡ್-19 ಸಾಂಕ್ರಾಮಿಕ ರೋಗದ ಹಿನ್ನಲೆಯಲ್ಲಿ ಸಿಎಂ ಯಡಿಯೂರಪ್ಪ ಘೋಷಿಸಿರುವಂತೆ ನೊಂದಾಯಿತ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗೆ ರೂ.3,000 ಲಾಕ್ ಡೌನ್ ವಿಶೇಷ ಪರಿಹಾರಧನವನ್ನು ರಾಜ್ಯ ಸರ್ಕಾರ ಬಿಡುಗಡೆ ಮಾಡಿದೆ.

ಸಚಿವ ಜಗದೀಶ್ ಶೆಟ್ಟರ್ ಮಗನಿದ್ದ ಕಾರು ಅಪಘಾತ!

ದಾವಣಗೆರೆ : ಸಚಿವ ಜಗದೀಶ್ ಶೆಟ್ಟರ್ ಅವರ ಪುತ್ರನಿದ್ದ ಕಾರು ಅಪಘಾತಕ್ಕೆ ಈಡಾಗಿರುವ ಘಟನೆ ನಗರದ ಹಳೆಯ ಕುಂದುವಾಡ ಬಳಿಯ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ನಡೆದಿದೆ.

ಕೊರೊನಾ ಬಿಕ್ಕಟ್ಟು – ಹೊಸ ಮಾರ್ಗಸೂಚಿಯ ಮೊರೆ ಹೋದ ಸರ್ಕಾರ!

ಬೆಂಗಳೂರು: ಸದ್ಯ ಲಾಕ್ ಡೌನ್ ಸಡಿಲಿಕೆ ಮಾಡಲಾಗಿದೆ. ಹೀಗಾಗಿ ಬೇರೆ ಬೇರೆ ರಾಜ್ಯಗಳಿಂದಲೂ ಜನರು ರಾಜ್ಯಕ್ಕೆ…