ಗದಗ : ಜಿಲ್ಲೆಯಲ್ಲಿನ ಆರೋಗ್ಯ ಕಾರ್ಯಕರ್ತರ, ಮುಂಚೂಣಿ ಕಾರ್ಯಕರ್ತರು ಹಾಗೂ 60 ವರ್ಷದ ಮೇಲ್ಪಟ್ಟ ಸಹ ಅಸ್ವಸ್ಥತೆ ಹೊಂದಿರುವ ಫಲಾನುಭವಿಗಳಿಗೆ ಭಾರತ ಸರ್ಕಾರದ ಶಿಫಾರಸ್ಸನ ಮೇರೆಗೆ ಕೋವಿಡ್-19 ಮುನ್ನೆಚ್ಚರಿಕಾ ಲಸಿಕಾ ಡೋಸ್ ನೀಡುವ ಕಾರ್ಯಕ್ರಮವನ್ನು ಜನೇವರಿ 10 ರಿಂದ ಪ್ರಾರಂಭಿಸಲಾಗುವದು.

ಈಗಾಗಲೇ 2ನೇ ಡೋಸ್ ಲಸಿಕೆ ಪಡೆದ 9 ತಿಂಗಳು (39 ವಾರಗಳ) ನಂತರ ಆರೋಗ್ಯ, ಮುಂಚೂಣಿ ಕಾರ್ಯಕರ್ತರು, 60 ವರ್ಷ ಮೇಲ್ಪಟ್ಟ ಅಸ್ವಸ್ಥತೆ ಹೊಂದಿದ ಫಲಾನುಭವಿಗಳು ಮುನ್ನೆಚ್ಚರಿಕಾ ಡೋಸ್ ಪಡೆಯಲು ಅರ್ಹರಾಗಿದ್ದು ಸರ್ಕಾರಿ ಕೋವಿಡ್-19 ಲಸಿಕಾಕರಣ ಕೇಂದ್ರಗಳಲ್ಲಿ ಈ ಗುಂಪಿನ ಫಲಾನುಭವಿಗಳಿಗೆ ಉಚಿತವಾಗಿ ಲಸಿಕೆಗಳನ್ನು ನೀಡಲಾಗುತ್ತದೆ.

ಓಮಿಕ್ರಾನ ವೈರಸ್ ಭೀತಿಯಲ್ಲಿರುವ ಜನರು ಕಡ್ಡಾಯವಾಗಿ 2 ಡೋಸಗಳನ್ನು ಪಡೆಯಲು ಹಾಗೂ ಮುಂಚೂಣಿ, ಆರೋಗ್ಯ ಕಾರ್ಯಕರ್ತರು ಹಾಗೂ 60 ವರ್ಷ ಮೇಲ್ಪಟ್ಟ ಸಹ ಅಸ್ವಸ್ಥತೆ ಹೊಂದಿರುವವರು ಸ್ವಯಂ ಪ್ರೇರಿತವಾಗಿ ಹೆಚ್ಚುವರಿ ಲಸಿಕೆ ಡೋಸನ್ನು ಪಡೆಯಲು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು ಮನವಿ ಮಾಡಿರುತ್ತಾರೆ.

Leave a Reply

Your email address will not be published. Required fields are marked *

You May Also Like

ಪಾದಯಾತ್ರೆ ಕೈಗೊಂಡ ಅಪ್ಪು ಅಭಿಮಾನಿಗೆ ಸನ್ಮಾನ

ವರದಿ : ವಿಠಲ‌ ಕೆಳೂತ್ ಮಸ್ಕಿ: ಬೆಂಗಳೂರುನಲ್ಲಿನ ಪುನೀತ ರಾಜಕುಮಾರ ಸಮಾಧಿವರೆಗೆ ಪಾದಯಾತ್ರೆ ನಡೆಸಿರುವ ಅಪ್ಪು…

ವಿಧಾನಪರಿಷತ್ ಚುನಾವಣೆಯಲ್ಲಿಯೂ ಜಯಭೇರಿ ಬಾರಿಸಿದ ಬಿಜೆಪಿ!

ಬೆಂಗಳೂರು : ಉಪ ಚುನಾವಣೆಯೊಂದಿಗೆ ವಿಧಾನಪರಿಷತ್ ಚುನಾವಣೆಯಲ್ಲಿಯೂ ಬಿಜೆಪಿ ಜಯಭೇರಿ ಬಾರಿಸಿದೆ.

ಕಾಂಗ್ರೆಸ್ ಹಿರಿಯ ನಾಯಕ ಸಿದ್ನಾಳ ವಿಧಿವಶ

ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಸಂಸದ ಎಸ್.ಬಿ.ಸಿದ್ನಾಳ್ (85) ಅನಾರೋಗ್ಯದಿಂದ ಇಂದು ನಿಧನರಾಗಿದ್ದಾರೆ.

3000 ಸಿನಿಮಾ ಕಾರ್ಮಿಕರಿಗೆ ಮಿಡಿದ ನಟ ಯಶ್ ಸಾಮಾಜಿಕ ಕಾಳಜಿ

ಬೆಂಗಳೂರು: ಈಗಾಗಲೇ ಲಾಕ್ ಡೌನ್ ಹಿನ್ನೆಲೆ ಸಿನಿಮಾ ಕಾರ್ಮಿಕರು ತೀವ್ರ ಸಂಕಷ್ಟಕ್ಕೀಡಾಗಿದ್ದಾರೆ. ಇದರಿಂದ ನಟ ಯಶ್ ಕನ್ನಡ ಚಿತ್ರರಂಗದ 3000 ಕಾರ್ಮಿಕರಿಗೆ ತಲಾ 5000 ನೀಡುವುದಾಗಿ ಘೋಷಿಸಿದ್ದಾರೆ. ಈ ಕುರಿತು ಸೋಶಿಯಲ್ ಮಿಡಿಯಾದಲ್ಲಿ ಘೋಷಣೆ ಮಾಡಿರುವ ಯಶ್, ಯಶ್ ಅಭಿಮಾನಿಗಳಿಗೂ ಖುಷಿ ತಂದಿದೆ.