ಮುಳಗುಂದ : ಇಲ್ಲಿನ ದಿ.ಮುಳಗುಂದ ಅರ್ಬನ್ ಸೌಹಾರ್ದ ಕೋ-ಆಪ್ ಬ್ಯಾಂಕನ ನಿರ್ದೇಶಕ ಮಂಡಳಿಯ 2 ಸ್ಥಾನಗಳಿಗೆ ನಡೆಯುತ್ತಿರುವ ಉಪ ಚುನಾವಣೆಗೆ ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದ್ದ ಶನಿವಾರ ಒಟ್ಟು 7 ಜನ ನಾಮಪತ್ರ ಸಲ್ಲಿಸಿದರು.


ಅರ್ಬನ್ ಬ್ಯಾಂಕ್ ನ ಹಾಲಿ ಅಧ್ಯಕ್ಷರಾಗಿದ್ದ ಸಿ.ಬಿ.ಬಡ್ನಿ ಹಾಗೂ ನಿರ್ದೇಕರಾಗಿದ್ದ ಆರ್.ಎನ್.ದೇಶಪಾಂಡೆ ಅವರ ಅಕಾಲಿಕ ನಿಧನದಿಂದ ತೆರವಾದ ಸ್ಥಾನಕ್ಕೆ ಚುನಾವಣೆ ನಡೆಯುತ್ತಿದೆ.


2 ಸ್ಥಾನಗಳ ಪೈಕಿ ಸಾಮಾನ್ಯ ಕ್ಷೇತ್ರದಿಂದ ಮುರಳಿಧರ ದುರ್ಗಿಗುಡಿ, ಎಂ.ಡಿ.ಬಟ್ಟೂರ, ಅಶೋಕ ಹುಣಸಿಮರದ, ಎನ್.ಆರ್.ದೇಶಪಾಂಡೆ ನಾಮಪತ್ರ ಸಲ್ಲಿಸಿದ್ದಾರೆ. ಹಿಂದುಳಿದ ಅ ವರ್ಗದ ಮೀಸಲಿರುವ ಕ್ಷೇತ್ರಕ್ಕೆ ಹೊನ್ನಪ್ಪ ನೀಲಗುಂದ, ಎಸ್.ಸಿ. ಬಡ್ನಿ, ಮಹಾಂತಪ್ಪ ಬಡ್ನಿ ಸೇರಿ ಒಟ್ಟು 7 ನಾಮಪತ್ರಗಳು ಸಲ್ಲಿಕೆ ಆಗಿವೆ.


ಜ.9 ರಂದು ಪರಿಶೀಲನೆ, ಜ.10 ರಂದು ನಾಮಪತ್ರ ಹಿಂದಕ್ಕೆ ಪಡೆಯಲು ಅವಕಾಶವಿದ್ದು, ಜ.16 ರಂದು ಮತದಾನ ನಡೆದು ಆವತ್ತೇ ಫಲಿತಾಂಶ ಪ್ರಕಟವಾಗಲಿದೆ. ಎಂದು ಚುನಾವಣಾಧಿಕಾರಿ ಪ್ರಶಾಂತ ಮುಧೋಳ ತಿಳಿಸಿದರು.

ಮುಳಗುಂದ ಅರ್ಬನ್ ಬ್ಯಾಂಕನ ಉಪ ಚುನಾವಣೆಗೆ ಹೊನ್ನಪ್ಪ ನೀಲಗುಂದ ಅವರು ಚುನಾವಣಾಧಿಕಾರಿ ಪ್ರಶಾಂತ ಮುಧೋಳ ಅವರಿಗೆ ನಾಮಪತ್ರ ಸಲ್ಲಿಸಿದರು.

Leave a Reply

Your email address will not be published. Required fields are marked *

You May Also Like

ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ಆಯ್ಕೆ

ಬೆಂಗಳೂರು: ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಒಪ್ಪಿಗೆಯ ಮೇರೆಗೆ ವಿಧಾನ ಪರಿತ್ತಿಗೆ ಕಾಂಗ್ರೆಸ್ ಪಕ್ಷ…

ಕೋವಿಡ್ ತಪಾಸಣೆ: ಹುಬ್ಬಳ್ಳಿಯ ಮಾಧ್ಯಮ ಪ್ರತಿನಿಧಿಗಳ ವರದಿ ನೆಗೆಟಿವ್.

ಮಾದ್ಯಮ ಪ್ರತಿನಿಧಿಗಳ ಪ್ರಯೋಗಾಲಯದ ವರದಿ ನೆಗೆಟಿವ್ ಬಂದಿde. ಇದರಿಂದ ಮಾಧ್ಯಮ ಮಿತ್ರರು ಹಾಗೂ ಅವರ ಕುಟುಂಬಸ್ಥರು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ.

ನಕಲಿ ಜಾತಿ ಪ್ರಮಾಣ ಪತ್ರ ಆರೋಪ: ಪಟ್ಟಣ ಪಂಚಾಯ್ತಿ ಸದಸ್ಯ ಸ್ಥಾನದಿಂದ ಅನರ್ಹಗೊಳಿಸಲು ಜಿಲ್ಲಾಧಿಕಾರಿಗಳಿಗೆ ಮನವಿ

ಸ್ಥಳೀಯ ಪಟ್ಟಣ ಪಂಚಾಯತಿಗೆ 2018 ರ ಚುನಾವಣೆಯಲ್ಲಿ ಎಸ್‌.ಸಿ ಮೀಸಲಿದ್ದ 11ನೇ ವಾರ್ಡನಿಂದ ಆಯ್ಕೆಯಾಗಿರುವ ಬಸವಂತಪ್ಪ ಶಿ. ಹಾರೋಗೇರಿ ಅವರ ಜಾತಿ ಪ್ರಮಾಣ ಪತ್ರ ನಕಲಿ ಇದ್ದು ತನಿಖೆ ನಡೆಸಿ ಪಪಂ ಸದಸ್ಯತ್ವ ಸ್ಥಾನದಿಂದ ಅನರ್ಹಗೊಳಿಸಬೇಕು ಎಂದು ಪ್ರತಿಸ್ಪರ್ದಿ ಮರಿಯಪ್ಪ ನೀ. ನಡಗೇರಿ ಆಗ್ರಹಿಸಿದರು.

ಗದಗ ಜಿಲ್ಲೆಯಲ್ಲಿ ಒಂದೇ ದಿನ 105 ಬೈಕ್ ಸೀಜ್: 71 ಕೇಸ್ ದಾಖಲು

ಗದಗ: ಜಿಲ್ಲೆಯಾದ್ಯಂತ ಐದು ದಿನಗಳ ಕಾಲ ಲಾಕ್ ಡೌನ್ ಘೋಷಣೆ ಮಾಡಿದಾಗ್ಯೂ ಜಿಲ್ಲೆಯಲ್ಲಿ ನಿಯಮ ಉಲ್ಲಂಘಿಸಿ ರಸ್ತೆಗಿಳಿದ 105 ವಾಹನಗಳನ್ನು ಸೀಜ್ ಮಾಡಿ, ಕೋವಿಡ್ ನಿಯಮ ಉಲ್ಲಂಘಿಸಿದ ಆರೋಪದ ಮೇಲೆ 71 ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ಎಸ್ಪಿ ಯತೀಶ್ ಎನ್ ತಿಳಿಸಿದ್ದಾರೆ.