ಮುಳಗುಂದ ಅರ್ಬನ್ ಬ್ಯಾಂಕ ಚುನಾವಣೆ 7 ನಾಮಪತ್ರ ಸಲ್ಲಿಕೆ

ಮುಳಗುಂದ : ಇಲ್ಲಿನ ದಿ.ಮುಳಗುಂದ ಅರ್ಬನ್ ಸೌಹಾರ್ದ ಕೋ-ಆಪ್ ಬ್ಯಾಂಕನ ನಿರ್ದೇಶಕ ಮಂಡಳಿಯ 2 ಸ್ಥಾನಗಳಿಗೆ ನಡೆಯುತ್ತಿರುವ ಉಪ ಚುನಾವಣೆಗೆ ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದ್ದ ಶನಿವಾರ ಒಟ್ಟು 7 ಜನ ನಾಮಪತ್ರ ಸಲ್ಲಿಸಿದರು.


ಅರ್ಬನ್ ಬ್ಯಾಂಕ್ ನ ಹಾಲಿ ಅಧ್ಯಕ್ಷರಾಗಿದ್ದ ಸಿ.ಬಿ.ಬಡ್ನಿ ಹಾಗೂ ನಿರ್ದೇಕರಾಗಿದ್ದ ಆರ್.ಎನ್.ದೇಶಪಾಂಡೆ ಅವರ ಅಕಾಲಿಕ ನಿಧನದಿಂದ ತೆರವಾದ ಸ್ಥಾನಕ್ಕೆ ಚುನಾವಣೆ ನಡೆಯುತ್ತಿದೆ.


2 ಸ್ಥಾನಗಳ ಪೈಕಿ ಸಾಮಾನ್ಯ ಕ್ಷೇತ್ರದಿಂದ ಮುರಳಿಧರ ದುರ್ಗಿಗುಡಿ, ಎಂ.ಡಿ.ಬಟ್ಟೂರ, ಅಶೋಕ ಹುಣಸಿಮರದ, ಎನ್.ಆರ್.ದೇಶಪಾಂಡೆ ನಾಮಪತ್ರ ಸಲ್ಲಿಸಿದ್ದಾರೆ. ಹಿಂದುಳಿದ ಅ ವರ್ಗದ ಮೀಸಲಿರುವ ಕ್ಷೇತ್ರಕ್ಕೆ ಹೊನ್ನಪ್ಪ ನೀಲಗುಂದ, ಎಸ್.ಸಿ. ಬಡ್ನಿ, ಮಹಾಂತಪ್ಪ ಬಡ್ನಿ ಸೇರಿ ಒಟ್ಟು 7 ನಾಮಪತ್ರಗಳು ಸಲ್ಲಿಕೆ ಆಗಿವೆ.


ಜ.9 ರಂದು ಪರಿಶೀಲನೆ, ಜ.10 ರಂದು ನಾಮಪತ್ರ ಹಿಂದಕ್ಕೆ ಪಡೆಯಲು ಅವಕಾಶವಿದ್ದು, ಜ.16 ರಂದು ಮತದಾನ ನಡೆದು ಆವತ್ತೇ ಫಲಿತಾಂಶ ಪ್ರಕಟವಾಗಲಿದೆ. ಎಂದು ಚುನಾವಣಾಧಿಕಾರಿ ಪ್ರಶಾಂತ ಮುಧೋಳ ತಿಳಿಸಿದರು.

ಮುಳಗುಂದ ಅರ್ಬನ್ ಬ್ಯಾಂಕನ ಉಪ ಚುನಾವಣೆಗೆ ಹೊನ್ನಪ್ಪ ನೀಲಗುಂದ ಅವರು ಚುನಾವಣಾಧಿಕಾರಿ ಪ್ರಶಾಂತ ಮುಧೋಳ ಅವರಿಗೆ ನಾಮಪತ್ರ ಸಲ್ಲಿಸಿದರು.

Exit mobile version