ಗದಗ:ಜಿಲ್ಲೆಯಲ್ಲಿ ಕೂರೂನಾ ಸೋಂಕಿನ ಪ್ರಮಾಣ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದೆ. ಎರಡೇ ದಿನದಲ್ಲಿ ಬರೋಬ್ಬರಿ 37 ಜನರಿಗೆ ಸೋಂಕು ಕಾಣಿಸಿಕೊಂಡಿದೆ. ಅದರಲ್ಲಿ ಮಂಗಳವಾರ ಒಂದೇ ದಿನ 21 ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, ಸದ್ಯ ಜಿಲ್ಲೆಯಲ್ಲಿ 84 ಸಕ್ರಿಯ ಪ್ರಕರಣಗಳಿವೆ.

ಜಿಲ್ಲೆಯಲ್ಲಿ ಪತ್ತೆಯಾಗಿರುವ 84 ಸೋಂಕಿನ ಪ್ರಕರಣಗಳಲ್ಲಿ ಗದಗ ತಾಲ್ಲೂಕು ಒಂದರಲ್ಲೇ 51 ಸೋಂಕಿನ ಪ್ರಕರಣಗಳು ಪತ್ತೆಯಾಗಿದ್ದು, ಮುಂಡರಗಿಯಲ್ಲಿ 21, ನರಗುಂದದಲ್ಲಿ 01, ರೋಣದಲ್ಲಿ 06, ಶಿರಹಟ್ಟಿಯಲ್ಲಿ 04 ಪ್ರಕರಣಗಳು ಪತ್ತೆಯಾಗಿವೆ.

ಗದಗನ ವಿಎನ್‌ಟಿ ರೋಡ್, ಗಾಂಧಿನಗರ(ಸೆಟ್ಲಮೆಂಟ್), ಸಂಕಣ್ಣವರ ಬಡಾವಣೆ, ಇಮಾಮ್‌ಹುಸೇನ್ ಕಾಲನಿ, ಗದಗ ತಾಲ್ಲೂಕಿನ ಅಡವಿಸೋಮಾಪುರ ದೊಡ್ಡತಾಂಡಾ, ಮಲ್ಲಸಮುದ್ರ, ನೀರಲಗಿ, ಮುಂಡರಗಿಯ ಸ್ವಾಮಿ ವಿವೇಕಾನಂದ ನಗರ, ಕೋಟೆಭಾಗ, ಮಂಜುನಾಥ ನಗರ, ಮುಂಡರಗಿ ತಾಲ್ಲೂಕಿನ ಕೋರ್ಲಹಳ್ಳಿ, ಬೀಡನಾಳ, ಬಸಾಪುರ, ನರಗುಂದದ ಟಿಎಲ್‌ಎಚ್ ಕಚೇರಿ, ರೋಣ ತಾಲ್ಲೂಕಿನ ಪ್ರಾಥಮಿಕ ಆರೋಗ್ಯ ಕೇಂದ್ರ ಸವಡಿ, ರಾಂಪೂರ ಗ್ರಾಮದ ನಿವಾಸಿಗಳು ಸೇರಿದಂತೆ 21 ಜನರಿಗೆ ಕೋವಿಡ್ ಸೋಂಕು ದೃಢಪಟ್ಟಿದೆ.

ಮಂಗಳವಾರದವರೆಗೆ ಜಿಲ್ಲೆಯಲ್ಲಿ ಸೋಂಕಿನ ಪರೀಕ್ಷೆಗಾಗಿ 6,97,019 ಮಾದರಿ ಸಂಗ್ರಹಿಸಿದ್ದು 6,70,857 ನಕಾರಾತ್ಮಕವಾಗಿವೆ. ಮಂಗಳವಾರದ 21 ಪ್ರಕರಣ ಸೇರಿ ಒಟ್ಟು 26,164 ಜನರಿಗೆ ಸೋಂಕು ದೃಢಪಟ್ಟಿದೆ. ಇದುವರೆಗೂ ಸೋಂಕಿನಿಂದ 319 ಜನ ಮೃತಪಟ್ಟಿದ್ದಾರೆ. ಇಂದಿನ ಮೂವರು ಸೇರಿ ಒಟ್ಟು 25,761 ಸೋಂಕಿನಿಂದ ಗುಣಮುಖರಾಗಿದ್ದಾರೆ. ಸದ್ಯ 84 ಸಕ್ರಿಯ ಪ್ರಕರಣಗಳಿದ್ದು, ಗದಗನ ಜಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಜಿಲ್ಲಾಧಿಕಾರಿ ಎಂ.ಸುಂದರೇಶ್ ಬಾಬು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ಗದಗ ಜಿಲ್ಲೆಯಲ್ಲಿಂದು 05 ಪಾಸಿಟಿವ್!

ಗದಗ: ಜಿಲ್ಲೆಯಲ್ಲಿಂದು 5 ಕೊರೊನಾ ಪಾಸಿಟಿವ್ ಪತ್ತೆಯಾಗಿವೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 237…

ಗೃಹ ರಕ್ಷಕ ದಳದ ಸದಸ್ಯ ಸ್ಥಾನಗಳ ನೋಂದಣಿಗೆ ಅರ್ಜಿ ಆಹ್ವಾನ

ಜಿಲ್ಲೆಯ ಗೃಹ ರಕ್ಷಕದಳದ ವಿವಿಧ ಘಟಕಗಳಲ್ಲಿ ಖಾಲಿ ಇರುವ 194 ಸ್ವಯಂ ಸೇವಕ ಗೃಹ ರಕ್ಷಕ ಸದಸ್ಯ ಸ್ಥಾನಗಳಿಗೆ ನೋಂದಣಿ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಿದೆ. ಜಿಲ್ಲೆಯ ಎಲ್ಲಾ ತಾಲೂಕಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅರ್ಹ ಅಭ್ಯರ್ಥಿಗಳು ಜಿಲ್ಲಾ ಗೃಹ ರಕ್ಷಕ ದಳದ ಕಚೇರಿಯಲ್ಲಿ ಅರ್ಜಿ ನಮೂನೆ ಪಡೆದು ಭರ್ತಿ ಮಾಡಿದ ಅರ್ಜಿಯನ್ನು ಅಕ್ಟೋಬರ್ 9 ರಂದು ಸಂಜೆ 4 ಗಂಟೆಯೊಳಗೆ ಸಲ್ಲಿಸಬೇಕು.

ಗದಗ ನಗರದ ಹುಡ್ಕೋ ಕಾಲನಿ ಕಂಟೇನ್ಮೆಂಟ್ ಝೋನ್ ಘೋಷಣೆ

ಇಲ್ಲಿನ ವಾರ್ಡ 35ರ ಹುಡ್ಕೋ ಕಾಲನಿ 2ನೇ ಕ್ರಾಸ್ ಇದರ ಸುತ್ತಲಿನ 100 ಮೀ. ಪ್ರದೇಶವನ್ನು ತಕ್ಷಣದಿಂದ ಕೊವಿಡ್-19 ಸೋಂಕು ನಿಯಂತ್ರಿತ (ಕಂಟೇನ್ಮೆಂಟ) ಪ್ರದೇಶವೆಂದು

ಹೊಸ ಶಿಕ್ಷಣ ನೀತಿಯಲ್ಲಿ ಅಂತಃಸತ್ವ ಅಡಗಿದೆ-ಸಿಂಧನಕೇರಾ

ಗುಲಾಬಚಂದ ಜಾಧವಆಲಮಟ್ಟಿ :(ವಿಜಯಪುರ ಜಿಲ್ಲೆ) ಸಂಪನ್ಮೂಲ ಭರಿತ ನಮ್ಮ ದೇಶದಲ್ಲಿ ಪರಿಸರ ಸಂರಕ್ಷಣೆ ಅಷ್ಟೊಂದು ಪರಿಣಾಕಾರಿಯಾಗಿ…