ಉತ್ತರ ಪ್ರಭ ಸುದ್ದಿ
ರೋಣ :
ರೈತರ ಬೆಳೆಗಳಿಗೆ ಲಾಭದಾಯಕ ಬೆಲೆ ಘೋಷಣೆ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಬೇಕು ಎಂದು ಒತ್ತಾಯಿಸಿ ರೋಣ ತಾಲೂಕಾ ಭಾರತೀಯ ಕಿಶಾನ್ ಸಂಘದವತಿಯಿಂದ ತಹಸೀಲ್ದಾರರ ಮುಖಾಂತರ ರಾಷ್ಟ್ರಪತಿಗಳಾದ ರಮಾನಾಥ್ ಕೊವಿಂದ್ ರಿಗೆ ಮನವಿ ಸಲ್ಲಿಸಿದರು.
ರೈತರ ಬೆಳೆದ ಉತ್ಪನ್ನಗಳಿಗೆ ಸರಿಯಾದ ಬೆಲೆ ನೀಡದೇ ಅನ್ನದಾತರನ್ನು ಸಾಲಗಾರನ್ನಾಗಿ ಮಾಡಿ ಆತ್ಮಹತ್ಯೆ ಮಾಡಿಕೊಳ್ಳುವಂತೆ ಮಾಡುತ್ತಿವೆ ಈಗಿನ ಸರ್ಕಾರಗಳು ಎಂದು ಆಕ್ರೋಶ ವ್ಯಕ್ತ ಪಡಿಸಿದರು.
ಎಷ್ಟೋ ಕಂಪನಿಗಳು ತಾವು ತಯಾರಿಸಿದ ಉತ್ಪನ್ನಗಳಿಗೆ ತಾವೇ ದರ ನಿಗಧಿ ಮಾಡಿಕೊಳ್ಳುತ್ತವೆ ಅವುಗಳಂತೆ ನಮ್ಮ ಕೃಷಿ ಉತ್ಪನ್ನಗಳಿಗೆ ಬೆಳೆದ ರೈತರೇ ಬೆಲೆ ನಿಗದಿಮಾಡುವಂತಹ ಕಾನೂನು ಜಾರಿ ಮಾಡಬೇಕು ಎಂದು ಒತ್ತಾಯಿಸಿ ಮನವಿ ಮಾಡಿದರು.
ಇಲ್ಲವಾದರೆ ಸರ್ಕಾರ ರೈತರ ಖರ್ಚು ವೆಚ್ಚ ಪರಿಶೀಲನೆ ಮಾಡಿ ದುಡಿಮೆಗೆ ತಕ್ಕ ಒಂದು ಒಳ್ಳೆಯ ಲಾಭದಾಯಕ ಬೆಲೆ ಘೋಷಣೆ ಮಾಡಬೇಕು, ಸರ್ಕಾರ ಘೋಷಣೆ ಮಾಡಿದ ಬೆಲೆಗಿಂತ ಕಡಿಮೆ ಬೆಲೆಗೆ ಕಡಿಮೆ ಕೊಂಡುಕೊಳ್ಳದಂತೆ ನಿಯಮ ಜಾರಿ ಮಾಡಬೇಕು ಎಂದು ಮನವಿಯಲ್ಲಿ ಉಲ್ಲೇಖ ಮಾಡಿ ಆಗ್ರಹ ಮಾಡಲಾಯಿತು.
ಈ ಸಂದರ್ಭದಲ್ಲಿ ಬಿ ಜಿ ಪಾಟೀಲ ಅಧ್ಯಕ್ಷರು ಭಾರತೀಯ ಕಿಶಾನ್ ಸಂಘ ರೋಣ ತಾಲೂಕ, ಬಿ ಎ ಅವಾರಿ, ಎಂ ಎಸ್ ಉದ್ದುರೂ, ಎಸ್ ಕೆ ಕಾಜಗಾರ್, ವಿ ಎಂ ಪಾಟೀಲ, ಎಂ ಸಿ ಅವಾರಿ.

Leave a Reply

Your email address will not be published. Required fields are marked *

You May Also Like

ಪಕ್ಷಾಂತರಿಶಾಸಕರ ವಜಾ: ಸ್ಪೀಕರ್ ಗೆ ಅಧಿಕಾರ ಕೊಡಿ ಎಂದ ಸಿದ್ದು

ಪಕ್ಷಾಂತರ ನಿಷೇಧ ಕಾಯಿದೆ ಅನ್ವಯ ಶಾಸಕರನ್ನು ಸದಸ್ಯತ್ವದಿಂದ ಅನರ್ಹಗೊಳಿಸುವ ಅಧಿಕಾರ ವಿಧಾನಸಭೆಯ ಅಧ್ಯಕ್ಷರಿಗೆ ಇರಬೇಕು.

ಸಿಡಿಲು: ಮುಂಡವಾಡದಲ್ಲಿ ಬಣವಿಗೆ ಬೆಂಕಿ..!

ಗದಗ: ಬಣವಿಗೆ ಸಿಡಿಲು ಬಡಿದ ಪರಿಣಾಮ ಮೂರು ಬಣವಿಗಳು ಸಂಪೂರ್ಣ ಭಸ್ಮಗೊಂಡ ಘಟನೆ ಗದಗ ಜಿಲ್ಲೆಯ…

ಯಲಹಂಕ ಮೇಲ್ಸೇತುವೆ ಸಾವರ್ಕರ್ ಹೆಸರು: ವಿಪಕ್ಷಗಳ ವಿರೋಧ

ಯಲಹಂಕ ಮೇಲ್ಸೇತುವೆಗೆ ವಿನಾಯಕ ದಾಮೋದರ ಸಾವರ್ಕರ್ ಹೆಸರಿಡಲು ನಿರ್ಧರಿಸಲಾಗಿದೆ. ಆದರೆ, ಇದು ವಿಪಕ್ಷಗಳ ನಾಯಕರ ಕೆಂಗಣ್ಣಿಗೆ ಗುರಿಯಾಗಿದ್ದು, ಹೊಸ ವಿವಾದಕ್ಕೆ ನಾಂದಿ ಹಾಡಿದೆ.

ಆಯಾ ರಾಜ್ಯಗಳ ಭಾಷೆಯಲ್ಲಿ ನೇಮಕಾತಿ ಪರೀಕ್ಷೆ ನಡೆಸಲು ಕಪ್ರವೇ: ಮನವಿ

ಕೇಂದ್ರ ಸರ್ಕಾರ ವಿವಿಧ ಹುದ್ದೆಗಳಿಗೆ ನಡೆಸುವ ನೇಮಕಾತಿ ಪರೀಕ್ಷೆಗಳನ್ನು ಆಯಾ ರಾಜ್ಯದ ಮಾತೃ ಭಾಷೆಯಲ್ಲಿ ನಡೆಸಬೇಕೆಂದು ಒತ್ತಾಯಿಸಿ ಕರ್ನಾಟಕ ಪ್ರಜಾಪರ ವೇದಿಕೆಯ ತಾಲೂಕು ಘಟಕದ ವತಿಯಿಂದ ತಹಶೀಲ್ದಾರರ ಮೂಲಕ ಪ್ರಧಾನಮಂತ್ರಿ ಮೋದಿಯವರಿಗೆ ಶನಿವಾರ ಮನವಿ ಸಲ್ಲಿಸಲಾಯಿತು.