ಉತ್ತರ ಪ್ರಭ ಸುದ್ದಿ
ರೋಣ :
ರೈತರ ಬೆಳೆಗಳಿಗೆ ಲಾಭದಾಯಕ ಬೆಲೆ ಘೋಷಣೆ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಬೇಕು ಎಂದು ಒತ್ತಾಯಿಸಿ ರೋಣ ತಾಲೂಕಾ ಭಾರತೀಯ ಕಿಶಾನ್ ಸಂಘದವತಿಯಿಂದ ತಹಸೀಲ್ದಾರರ ಮುಖಾಂತರ ರಾಷ್ಟ್ರಪತಿಗಳಾದ ರಮಾನಾಥ್ ಕೊವಿಂದ್ ರಿಗೆ ಮನವಿ ಸಲ್ಲಿಸಿದರು.
ರೈತರ ಬೆಳೆದ ಉತ್ಪನ್ನಗಳಿಗೆ ಸರಿಯಾದ ಬೆಲೆ ನೀಡದೇ ಅನ್ನದಾತರನ್ನು ಸಾಲಗಾರನ್ನಾಗಿ ಮಾಡಿ ಆತ್ಮಹತ್ಯೆ ಮಾಡಿಕೊಳ್ಳುವಂತೆ ಮಾಡುತ್ತಿವೆ ಈಗಿನ ಸರ್ಕಾರಗಳು ಎಂದು ಆಕ್ರೋಶ ವ್ಯಕ್ತ ಪಡಿಸಿದರು.
ಎಷ್ಟೋ ಕಂಪನಿಗಳು ತಾವು ತಯಾರಿಸಿದ ಉತ್ಪನ್ನಗಳಿಗೆ ತಾವೇ ದರ ನಿಗಧಿ ಮಾಡಿಕೊಳ್ಳುತ್ತವೆ ಅವುಗಳಂತೆ ನಮ್ಮ ಕೃಷಿ ಉತ್ಪನ್ನಗಳಿಗೆ ಬೆಳೆದ ರೈತರೇ ಬೆಲೆ ನಿಗದಿಮಾಡುವಂತಹ ಕಾನೂನು ಜಾರಿ ಮಾಡಬೇಕು ಎಂದು ಒತ್ತಾಯಿಸಿ ಮನವಿ ಮಾಡಿದರು.
ಇಲ್ಲವಾದರೆ ಸರ್ಕಾರ ರೈತರ ಖರ್ಚು ವೆಚ್ಚ ಪರಿಶೀಲನೆ ಮಾಡಿ ದುಡಿಮೆಗೆ ತಕ್ಕ ಒಂದು ಒಳ್ಳೆಯ ಲಾಭದಾಯಕ ಬೆಲೆ ಘೋಷಣೆ ಮಾಡಬೇಕು, ಸರ್ಕಾರ ಘೋಷಣೆ ಮಾಡಿದ ಬೆಲೆಗಿಂತ ಕಡಿಮೆ ಬೆಲೆಗೆ ಕಡಿಮೆ ಕೊಂಡುಕೊಳ್ಳದಂತೆ ನಿಯಮ ಜಾರಿ ಮಾಡಬೇಕು ಎಂದು ಮನವಿಯಲ್ಲಿ ಉಲ್ಲೇಖ ಮಾಡಿ ಆಗ್ರಹ ಮಾಡಲಾಯಿತು.
ಈ ಸಂದರ್ಭದಲ್ಲಿ ಬಿ ಜಿ ಪಾಟೀಲ ಅಧ್ಯಕ್ಷರು ಭಾರತೀಯ ಕಿಶಾನ್ ಸಂಘ ರೋಣ ತಾಲೂಕ, ಬಿ ಎ ಅವಾರಿ, ಎಂ ಎಸ್ ಉದ್ದುರೂ, ಎಸ್ ಕೆ ಕಾಜಗಾರ್, ವಿ ಎಂ ಪಾಟೀಲ, ಎಂ ಸಿ ಅವಾರಿ.

Leave a Reply

Your email address will not be published. Required fields are marked *

You May Also Like

ಜಿಲ್ಲೆಯಲ್ಲಿಂದು 6 ಪಾಸಿಟಿವ್, ಎರಡಂಕಿ ತಲುಪಿದ ಸಾವಿನ ಸಂಖ್ಯೆ: ಯಾವ ಊರಲ್ಲಿ ಎಷ್ಟು?

ಗದಗ: ಜಿಲ್ಲೆಯಲ್ಲಿ ಸೋಮವಾರ ದಿ.13 ರಂದು 6 ಜನರಿಗೆ ಕೊವಿಡ್-19 ಸೋಂಕು ದೃಢ ಪಟ್ಟಿದೆ. ರೋಣ ತಾಲ್ಲೂಕಿನ ಹುಲ್ಲೂರು ಗ್ರಾಮದ ನಿವಾಸಿ 26 ವರ್ಷದ ಪುರುಷ ಪಿ-38890 ಸೋಂಕು ದೃಢಪಟ್ಟಿದ್ದು ಸೋಂಕು ತಗುಲಿರುವ ಕುರಿತು ಪತ್ತೆ ಕಾರ್ಯ ನಡೆದಿದೆ.

ಪಡಿತರ ಚೀಟಿದಾರರಿಗೆ ರಾಗಿ, ಜೋಳ, ತೊಗರಿ, ಹೆಸರುಕಾಳು ವಿತರಣೆ

ಪಡಿತರ ಚೀಟಿದಾರರಿಗೆ ಸರ್ಕಾರ ಮತ್ತೊಂದು ಸಿಹಿ ಸುದ್ದಿ ನೀಡಿದೆ. ಇನ್ಮುಂದೆ ರಾಗಿ, ಜೋಳ, ತೊಗರಿ ಹಾಗೂ ಹೆಸರು ಕಾಳುಗಳನ್ನು ಖರೀದಿಸಿ ನ್ಯಾಯಬೆಲೆ ಅಂಗಡಿ ಮೂಲಕ ವಿತರಿಸಲು ಕ್ರಮಕೈಗೊಳ್ಳಲು ಸರ್ಕಾರ ಮುಂದಾಗಿದೆ ಎಂದು ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವ ಉಮೇಶ್ ವಿ. ಕತ್ತಿ ತಿಳಿಸಿದ್ದಾರೆ.

ನಾಳೆ ಗದಗನಲ್ಲಿ ವಿದ್ಯುತ್ ವ್ಯತ್ಯಯ

ಗದಗ: ಬೆಟಗೇರಿ ಶಾಖೆಯಲ್ಲಿ ಜುಲೈ 07 ರಂದು 11 ಕೆ.ವ್ಹಿ. ಮಾರ್ಗದ ತುರ್ತು ನಿರ್ವಹಣಾ ಕೆಲಸ…

ಶಿರಹಟ್ಟಿ ಕಟ್ಟಿಗೆ ಅಡ್ಡೆ ಪ್ರಕರಣ: ಡಿಸಿ ಆದೇಶಕ್ಕೂ ಕಿಮ್ಮತ್ತು ಕೊಡದ ಶಿರಹಟ್ಟಿ ತಹಶೀಲ್ದಾರ್..!

ಈಗಾಗಲೇ ನಿಮ್ಮ ಉತ್ತರಪ್ರಭ ಶಿರಹಟ್ಟಿಯಲ್ಲಿನ ಕಟ್ಟಿಗೆ ಅಡ್ಡಗಳ ಕುರಿತು ಹಾಗೂ ಅಧಿಕಾರಿಗಳ ನಡೆ ಕುರಿತು 6 ಸರಣಿ ಲೇಖನವನ್ನು ಪ್ರಕಟಿಸಿದೆ.