ಉತ್ತರ ಪ್ರಭ ಸುದ್ದಿ
ರೋಣ :
ರೈತರ ಬೆಳೆಗಳಿಗೆ ಲಾಭದಾಯಕ ಬೆಲೆ ಘೋಷಣೆ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಬೇಕು ಎಂದು ಒತ್ತಾಯಿಸಿ ರೋಣ ತಾಲೂಕಾ ಭಾರತೀಯ ಕಿಶಾನ್ ಸಂಘದವತಿಯಿಂದ ತಹಸೀಲ್ದಾರರ ಮುಖಾಂತರ ರಾಷ್ಟ್ರಪತಿಗಳಾದ ರಮಾನಾಥ್ ಕೊವಿಂದ್ ರಿಗೆ ಮನವಿ ಸಲ್ಲಿಸಿದರು.
ರೈತರ ಬೆಳೆದ ಉತ್ಪನ್ನಗಳಿಗೆ ಸರಿಯಾದ ಬೆಲೆ ನೀಡದೇ ಅನ್ನದಾತರನ್ನು ಸಾಲಗಾರನ್ನಾಗಿ ಮಾಡಿ ಆತ್ಮಹತ್ಯೆ ಮಾಡಿಕೊಳ್ಳುವಂತೆ ಮಾಡುತ್ತಿವೆ ಈಗಿನ ಸರ್ಕಾರಗಳು ಎಂದು ಆಕ್ರೋಶ ವ್ಯಕ್ತ ಪಡಿಸಿದರು.
ಎಷ್ಟೋ ಕಂಪನಿಗಳು ತಾವು ತಯಾರಿಸಿದ ಉತ್ಪನ್ನಗಳಿಗೆ ತಾವೇ ದರ ನಿಗಧಿ ಮಾಡಿಕೊಳ್ಳುತ್ತವೆ ಅವುಗಳಂತೆ ನಮ್ಮ ಕೃಷಿ ಉತ್ಪನ್ನಗಳಿಗೆ ಬೆಳೆದ ರೈತರೇ ಬೆಲೆ ನಿಗದಿಮಾಡುವಂತಹ ಕಾನೂನು ಜಾರಿ ಮಾಡಬೇಕು ಎಂದು ಒತ್ತಾಯಿಸಿ ಮನವಿ ಮಾಡಿದರು.
ಇಲ್ಲವಾದರೆ ಸರ್ಕಾರ ರೈತರ ಖರ್ಚು ವೆಚ್ಚ ಪರಿಶೀಲನೆ ಮಾಡಿ ದುಡಿಮೆಗೆ ತಕ್ಕ ಒಂದು ಒಳ್ಳೆಯ ಲಾಭದಾಯಕ ಬೆಲೆ ಘೋಷಣೆ ಮಾಡಬೇಕು, ಸರ್ಕಾರ ಘೋಷಣೆ ಮಾಡಿದ ಬೆಲೆಗಿಂತ ಕಡಿಮೆ ಬೆಲೆಗೆ ಕಡಿಮೆ ಕೊಂಡುಕೊಳ್ಳದಂತೆ ನಿಯಮ ಜಾರಿ ಮಾಡಬೇಕು ಎಂದು ಮನವಿಯಲ್ಲಿ ಉಲ್ಲೇಖ ಮಾಡಿ ಆಗ್ರಹ ಮಾಡಲಾಯಿತು.
ಈ ಸಂದರ್ಭದಲ್ಲಿ ಬಿ ಜಿ ಪಾಟೀಲ ಅಧ್ಯಕ್ಷರು ಭಾರತೀಯ ಕಿಶಾನ್ ಸಂಘ ರೋಣ ತಾಲೂಕ, ಬಿ ಎ ಅವಾರಿ, ಎಂ ಎಸ್ ಉದ್ದುರೂ, ಎಸ್ ಕೆ ಕಾಜಗಾರ್, ವಿ ಎಂ ಪಾಟೀಲ, ಎಂ ಸಿ ಅವಾರಿ.

Leave a Reply

Your email address will not be published. Required fields are marked *

You May Also Like

ಮಾ.4 ರಿಂದ ರಾಜ್ಯ ಬಜೆಟ್ ಅಧಿವೇಶನ: ಮೀಸಲಾತಿ ವಿಚಾರ ಸಂಪುಟ ಸಭೆಯಲ್ಲಿ ಚರ್ಚೆ!

ಮಾರ್ಚ್ ತಿಂಗಳ ಕೊನೆಯವರೆಗೂ ಬಜೆಟ್ ಅಧಿವೇಶನ ನಡೆಸಲಾಗುತ್ತಿದ್ದು, ಮಾರ್ಚ್ 4 ಮತ್ತು 5 ಎರಡು ದಿನ ಒಂದು ದೇಶ ಒಂದು ಚುನಾವಣೆ ಬಗ್ಗೆ ಚರ್ಚೆ ನಡೆಸಲಾಗುವುದು ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ತಿಳಿಸಿದರು.

ಕುಡಿಯುವ ನೀರಿಗಾಗಿ ಆಹೋರಾತ್ರಿ ಧರಣಿ : ಕೆರೆಗಳನ್ನು ತುಂಬಿಸಿ ಪುಣ್ಯಕಟ್ಟಿಕೊಳ್ಳಿ- ಸಂಗನಬಸವ ಶ್ರೀ

ಉತ್ತರಪ್ರಭ ಆಲಮಟ್ಟಿ: ರಾಷ್ಟ್ರದ ಅಭಿವೃದ್ಧಿಗಾಗಿ ತ್ಯಾಗ ಮಾಡಿದ ಅಖಂಡ ವಿಜಯಪುರ ಜಿಲ್ಲೆಯ ರೈತರಿಗೆ, ಜನ-ಜಾನುವಾರುಗಳ ಕುಡಿಯುವ…

ಕೆಪಿಎಸ್ಇ ಪರೀಕ್ಷೆ ಬರೆಯುವವರಿಗೆ ಇಲ್ಲಿದೆ ಮುಖ್ಯ ಮಾಹಿತಿ

ಈಗಾಗಲೇ ಜನೇವರಿ ತಿಂಗಳಲ್ಲೆ ನಡೆಯಬೇಕಿದ್ದ ಪ್ರಥಮ ದರ್ಜೆ ಸಹಾಯ (ಕೆಪಿಎಸ್ಇ) ಪರೀಕ್ಷೆಯನ್ನು ಫೆ.28ಕ್ಕೆ ನಿಗಧಿ ಪಡಿಸಲಾಗಿದೆ.

ಎಸ್.ಎಸ್.ಎಲ್.ಸಿ ಪರೀಕ್ಷೆ ವಿದ್ಯಾರ್ಥಿಗಳು ಪಾಲಿಸಬೇಕಾದ ನಿಯಮಗಳೇನು..?

ಎಸ್.ಎಸ್.ಎಲ್.ಸಿ ಪರೀಕ್ಷೆ ವಿದ್ಯಾರ್ಥಿಗಳು ಪಾಲಿಸಬೇಕಾದ ನಿಯಮಗಳೇನು..? ಪರೀಕ್ಷೆ ನಡೆಯುವ 1 ಗಂಟೆ 30 ನಿಮಿಷ ಮೊದಲೇ ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಗಳಲ್ಲಿ ಹಾಜರಿರಬೇಕು.