ಹೈದರಾಬಾದ್: ರಾಜಕೀಯ ಮತ್ತು ಸಿನಿಮಾಗಳನ್ನು  ಅತಿ ಹೆಚ್ಚು ಪೋಸಿಸುವ  ರಾಜ್ಯಗಳಲ್ಲಿ ಆಂಧ್ರ ಪ್ರದೇಶಒಂದಾಗಿದೆ.  ಹಿಂದಿನಿಂದಲೂ ಈ ಎರಡೂ ರಂಗಗಳ ನಡುವೆ ಬಿಡಿಸಲಾಗದ ನಂಟು. ಆಂಧ್ರ ಪ್ರದೇಶದಲ್ಲಿ ರಾಜಕಾರಣ, ಸಿನಿಮಾ ಮಾಡಿಕೊಂಡು ಜಯಿಸುವುದು ಅಷ್ಷು ಸುಲಭವಲ್ಲ .ಜಾತಿ ರಾಜಕಾರಣದಲ್ಲೂ ಹೆಸರಾಗಿರುವ ಆಂಧ್ರ ಪ್ರದೇಶದಲ್ಲಿ ಇತ್ತೀಚೆಗೆ ಬಿಡುಗಡೆಯಾದ ಪುಷ್ಪ ಸಿನಿಮಾ ಸದ್ದನ್ನು ಮಾಡುತ್ತಿದೆ. ಸಿನಿಮಾದ ಕಲೆಕ್ಷನ್ ನಿಂದ  ಈಗಾಗಲೇ ದೇಶವ್ಯಾಪಿ ಹೆಸರು ಮಾಡಿರುವ ಪುಷ್ಪ ಸಿನಿಮಾಗೆ ಜಾತಿ ರಾಜಕೀಯ ಅಂಟು ಕೊಂಡಿದೆ.

ಅಲ್ಲು ಅರ್ಜುನ್ ಪ್ರಮುಖ ಭೂಮಿಕೆಯಲ್ಲಿರುವ ಪುಷ್ಪ ಚಿತ್ರದ ನಿರ್ಮಾಪಕರು ಚೌಧುರಿ ಮತ್ತು ಪ್ರೊಡಕ್ಷನ್ ಹೌಸ್ ಮೈತ್ರಿ ಮೂವಿ ಮೇಕರ್ಸ್, ಮುಟ್ಟಂಶೆಟ್ಟಿ ಮಿಡಿಯಾ. ಚಿತ್ರದಲ್ಲಿ ಕೊಂಡ ರೆಡ್ಡಿ, ಜಾಲಿ ರೆಡ್ಡಿ (ಡಾಲಿ ಧನಂಜಯ್ ಪಾತ್ರಧಾರಿ), ಜಕ್ಕ ರೆಡ್ಡಿ ಮುಂತಾದ ಹಲವು ಪಾತ್ರಗಳಿವೆ. ವಿಲನ್ ಪಾತ್ರಧಾರಿಗಳಿಗೆ ರೆಡ್ಡಿ ಎನ್ನುವ ಉಪನಾಮ ಇಟ್ಟಿರುವುದು ವೈಎಸ್ಆರ್ ಕಾಂಗ್ರೆಸ್ ಪಕ್ಷದ ಮುಖಂಡರ ಸಿಟ್ಟಿಗೆ ಕಾರಣವಾಗಿದೆ. ಆಂಧ್ರ ಪ್ರದೇಶದ ಮುಖ್ಯಮಂತ್ರಿ ವೈಎಸ್ಆರ್ ಜಗನ್ ಸೇರಿದಂತೆ, ಸಂಪುಟದ ಹಲವರು ರೆಡ್ಡಿ ಸಮುದಾಯದವರಾಗಿದ್ದಾರೆ.  ಆದರೆ ವಿಶೇಷ ಏನೆಂದರೆ ಆ ಚಿತ್ರದ ನಿರ್ಮಾಪಕ ರೆಡ್ಡಿ ಜನಾಂಗಕ್ಕೆ ಸೇರಿದವರಲ್ಲ.

ರೆಡ್ಡಿ ಸಮುದಾಯವನ್ನು ಅವಮಾನಿಸಿದ್ದಾರೆ ಎಂಬ ಕಾರಣ

ಆಂಧ್ರ ಪ್ರದೇಶದ ಚಿತ್ತೂರು ಜಿಲ್ಲೆಯ ಶೇಷಾಚಲಂ ದಟ್ಟಾರಣ್ಯದಲ್ಲಿನ ರಕ್ತಚಂದನ ಕಳ್ಳಸಾಗಣಿ ಮಾಡುವ ತಂಡದ ಮಾಲೀಕ ಪಾತ್ರವನ್ನು ಪುಷ್ಪ ಚಿತ್ರದಲ್ಲಿ ಅಜಯ್ ಘೋಶ್ ನಿರ್ವಹಿಸಿದ್ದಾರೆ. ಚಿತ್ರದಲ್ಲಿ ಈ ಪಾತ್ರಕ್ಕೆ ಕೊಂಡ ರೆಡ್ಡಿ ಎಂದು ನಿರ್ದೇಶಕ ಸುಕುಮಾರ್ ಹೆಸರಿಟ್ಟಿದ್ದಾರೆ. ಇದು ಈಗ ಅಲ್ಲಿನ ಎರಡು ಪಕ್ಷಗಳ ನಡುವೆ ತಿಕ್ಕಾಟಕ್ಕೆ ಕಾರಣವಾಗಿದೆ. ರೆಡ್ಡಿ ಎಂದು ಖಳನಾಯಕನ ಪಾತ್ರಕ್ಕೆ ಹೆಸರಿಟ್ಟಿದ್ದು, ಆಡಳಿತಾರೂಢ ವೈಎಸ್ಆರ್ ಕಾಂಗ್ರೆಸ್ ಪಕ್ಷದ ನಾಯಕರ ಕೆಂಗಣ್ಣಿಗೆ ಕಾರಣವಾಗಿದೆ. ರೆಡ್ಡಿ ಸಮುದಾಯವನ್ನು ಅವಮಾನಿಸುವ ಉದ್ದೇಶ ಈ ಚಿತ್ರಕ್ಕಿದೆ ಎನ್ನುವುದು ಅವರ ಆರೋಪ.

ಕೋವಿಡ್ ಹಾವಳಿಯ ನಡುವೆಯೂ ಪುಷ್ಪ ಸಿನಿಮಾ ಭರ್ಜರಿ ಕಲೆಕ್ಷನ್ ಅನ್ನು ಮಾಡಿತ್ತು. ಸಿನಿಮಾ ಬಗ್ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದ್ದರು ಕೂಡಾ, ಸಿನಿಮಾ ಬಾಲಿವುಡ್ ಸಿನಿಮಾಗಳನ್ನು ಮೂಲೆಗೆ ತಳ್ಳಿ ಮುನ್ನೂರು ಕೋಟಿಗೂ ಅಧಿಕ ಬ್ಯೂಸಿನೆಸ್ ಮಾಡಿತ್ತು. ಚಿತ್ರದಲ್ಲಿನ ಖಳನಾಯಕನ ಪಾತ್ರಕ್ಕೆ ಇಟ್ಟ ಹೆಸರು ಈಗ ವಿವಾದಕ್ಕೆ ಕಾರಣವಾಗಿದೆ.

Leave a Reply

Your email address will not be published. Required fields are marked *

You May Also Like

ಎಡಗೈ ಆಟಗಾರರು ನಿಜವಾಗಿಯೂ ಪ್ರತಿಭಾವಂತರೆ?

ಭಾರತ ತಂಡದ ಪ್ರತಿಭಾವಂತೆ ಹಾಗೂ ಸ್ಟೈಲಿಷ್ಟ್ ಆಟಗಾರ್ತಿ ಸ್ಮೃತಿ ಮಂಧನಾ ಅವರು ಶನಿವಾರ ತಮ್ಮ 24ನೇ ಹುಟ್ಟು ಹಬ್ಬದ ಸಂಭ್ರಮ ಆಚರಿಸಿಕೊಂಡಿದ್ದಾರೆ. ಅವರಿಗೆ ಖ್ಯಾತ ಆಟಗಾರರು ಹಾಗೂ ಅಭಿಮಾನಿ

ಇಪ್ಪತ್ನಾಲ್ಕು ಗಂಟೆಯಲ್ಲಿ ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಎಷ್ಟು?

ದೇಶದಲ್ಲಿ 24 ಗಂಟೆಯಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಗಣನೀಯವಾಗಿ ಏರಿಕೆಯಾಗುತ್ತಿದೆ. ಇದರಲ್ಲಿ ಅರ್ಧದಷ್ಟು ಪ್ರಕರಣಗಳಿಗೆ ಮಹರಾಷ್ಟ್ರವೇ ಮೂಲವಾಗಿದೆ.

ಕೋವಿಡ್ ಲಸಿಕೆ: ಆಕ್ಸ ಫರ್ಡ್ ವಿವಿಯಿಂದ ಇಂದು ಪಾಸಿಟಿವ್ ಸುದ್ದಿ?

ನವದೆಹಲಿ: ಅಸ್ಟ್ರೋಜೆನಿಕಾ ಕಂಪನಿಯ ಸಹಯೋಗದೊಂದಿಗೆ ಬ್ರಿಟನ್ನಿನ ಆಕ್ಸ್ ಫರ್ಡ್ ವಿಶ್ವವಿದ್ಯಾಲಯ ಸಂಶೋಧಿಸುತ್ತಿರುವ ಕೋವಿಡ್ ಲಸಿಕೆಯ ಕುರಿತು ಇಂದು ಒಂದು ಒಳ್ಳೆಯ ಸುದ್ದಿ ಹೊರ ಬೀಳಲಿದೆ ಎನ್ನಲಾಗಿದೆ.

ರಾಜಸ್ತಾನ್ ರಾಜಕೀಯ: ಕ್ಲೈಮಾಕ್ಸ್ ಗೆ ಕ್ಷಣಗಣನೆ:ಡಿಸಿಎಂ, ರಾಜ್ಯಾಧ್ಯಕ್ಷ ಹುದ್ದೆಯಿಂದ ಪೈಲಟ್ ಡ್ರಾಪ್

ಎರಡನೆ ಶಾಸಕಾಂಗೀಯ ಪಕ್ಷದ ಸಭೆಗೂ ಗೈರು ಹಾಜರಾದ ಸಚಿನ್ ಪೈಲಟ್ ಅವರನ್ನು ಡಿಸಿಎಂ ಮತ್ತು ಪಕ್ಷದ…