ಉತ್ತರಪ್ರಭ

ಗದಗ: ಪ್ರವಾಸೋದ್ಯಮ ಇಲಾಖೆಯಿಂದ ಕರ್ನಾಟಕ ಪ್ರವಾಸೋದ್ಯಮ ವ್ಯಾಪಾರ ಕಾಯ್ದೆ-2015 ಜಾರಿಯಲ್ಲಿದ್ದು ಪ್ರವಾಸೋದ್ಯಮ ಕ್ಷೇತ್ರದಲ್ಲಿ ತೊಡಗಿಸಿಕೊಂಡಿರುವ ಉದ್ಯಮಗಳು ಸರ್ಕಾರವು ಪ್ರವಾಸೋದ್ಯಮ ಕ್ಷೇತ್ರದಲ್ಲಿ ನೀಡುವ ರಿಯಾಯತಿಗಳನ್ನು (ತೆರಿಗೆ) ಪಡೆಯಲು ಕೆಟಿಟಿಎಫ್ ನೊಂದಣಿ ಕಡ್ಡಾಯವಾಗಿರುತ್ತದೆ. ಗದಗ ಜಿಲ್ಲೆಯ ಹೋಟೆಲ್, ರೆಸ್ಟೋರೆಂಟ್, ರೆಸಾರ್ಟ, ಟ್ರಾವೆಲ್ಸ್ ಏಜೆನ್ಸಿ ಮತ್ತು ಟೂರ್ ಆಪರೇಟರ್‌ಗಳು ಮನರಂಜನಾ ಪಾರ್ಕ ಹಾಗೂ ಇತರೆ ಪ್ರವಾಸೋದ್ಯಮ ಕ್ಷೇತ್ರದಲ್ಲಿ ತೊಡಗಿಸಿಕೊಂಡಿರುವವರು https://kttfkarnatakatourism.org/  ಅಥವಾ https://www.karantakatourism.org ವೆಬ್‌ಸೈಟ್ ಗೆ ಭೇಟಿ ನೀಡಿ ತಮ್ಮ ಸಂಸ್ಥೆ ಉದ್ಯಮವನ್ನು ನೋಂದಣಿ ಮಾಡಬೇಕಾಗಿದೆ.

ಈಗಾಗಲೇ ಪ್ರವಾಸೋದ್ಯಮ ಇಲಾಖೆಯಲ್ಲಿ ಅನುಮೋದನೆ ಪಡೆದ ಹೋಟೆಲ್ ಮತ್ತು ರೆಸ್ಟಾರ್ಟಗಳು ಸಹ ಕೆ.ಟಿ.ಟಿ.ಎಫ್ ನೋಂದಣಿ ಮಾಡಲು ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿ ಸದಸ್ಯ ಕಾರ್ಯದರ್ಶಿ ಹಾಗೂ ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ಅಂಗನವಾಡಿ ಕಾರ್ಯಕರ್ತೆಯರಿಗೆ ಪ್ಯಾಕೇಜ್: ಸಿಎಂಗೆ ಜೊಲ್ಲೆ ಅಭಿನಂದನೆ

ರಾಜ್ಯದಲ್ಲಿ ಕೊರೊನಾ ಮುಂಚೂಣಿ ವಾರಿಯರ್ಸ್ಗಳಾಗಿ ಕರ್ತವ್ಯ ನಿರ್ವಹಿಸುತ್ತಿರುವ ಅಂಗನವಾಡಿ ಕಾರ್ಯಕರ್ತೆಯರ ಸೇವೆಯನ್ನು ಪರಿಗಣಿಸಿ ಸಿಎಂ ಬಿ.ಎಸ್.ಯಡಿಯೂರಪ್ಪ ಅಂಗನವಾಡಿ ಕಾರ್ಯಕರ್ತೆಯರಿಗೆ ತಲಾ 2000 ರೂ. ನೆರವು ಘೋಷಿಸಿದ್ದು, ಅಂಗನವಾಡಿ ಕಾರ್ಯಕರ್ತೆಯರ ಪರವಾಗಿ ಅಭಿನಂದನೆಗಳನ್ನು ಸಲ್ಲಿಸುವುದಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆ ತಿಳಿಸಿದ್ದಾರೆ.

ಆದುನಿಕತೆಯಲ್ಲಿ ಜಾನಪದ ಸಾಹಿತ್ಯ ಮರೆಯಾಗದಿರಲಿ: ದೊಡ್ಡಮನಿ

ಜಾನಪದ ಸಾಹಿತ್ಯ ಇಂದಿನ ಆಧುನಿಕ ಸ್ಪರ್ಶದಿಂದ ಕಣ್ಮರೆಯಾಗುತ್ತಿದ್ದು, ವೈಶಿಷ್ಟಪೂರ್ಣವಾದ ಈ ಸಾಹಿತ್ಯವನ್ನು ಉಳಿಸಿ ಬೆಳೆಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದು ಮಾಜಿ ಶಾಸಕ ರಾಮಕೃಷ್ಣ ದೊಡ್ಡಮನಿ ಹೇಳಿದರು.

ಜಾನುವಾರುಗಳ ಚಿಕಿತ್ಸೆಗೆ ಮನೆ ಬಾಗಿಲಿಗೆ ಬರಲಿದೆ ವಾಹನ: ಯೋಜನೆ ಬಗ್ಗೆ ಇಲ್ಲಿದೆ ಮಾಹಿತಿ

ಜಾನುವಾರುಗಳಿಗೆ ಚಿಕಿತ್ಸೆ ಕೊಡಿಸಲು ರೈತರು ಇನ್ನಿಲ್ಲದ ಹರಸಾಹಸ ಪಡಬೇಕಾಗಿತ್ತು. ಆದರೆ ರಾಜ್ಯದಲ್ಲಿ ಇಂದಿನಿಂದ ಪಶುಸಂಜೀವಿನಿ ಯೋಜನೆಯನ್ನು…

ಸಿಎಂ ಯೋಗಿ ಆದಿತ್ಯನಾಥ್ ವಿರುದ್ಧ ಗುಡುಗಿದ ತೇಜಸ್ವಿ ಯಾದವ್!

ಪಾಟ್ನಾ : ಸಿಎಂ ಯೋಗಿ ಆದಿತ್ಯನಾಥ್ ಅವರ ಭಾಷಣದ ವಿರುದ್ಧ ಆರ್ ಜೆಡಿ ಮುಖಂಡ ತೇಜಸ್ವಿ ಯಾದವ್ ತೀವ್ರ ವಾಗ್ದಾಳಿ ನಡೆಸಿದ್ದಾರೆ.