ಮನಸೊರೆಗೊಂಡ ಮಲ್ಲಕಂಬ ಪ್ರದರ್ಶನ

ಉತ್ತರಪ್ರಭ

ನರೆಗಲ್ಲ: ನೆಲದ ಮೇಲೆ ಮಾಡುವ ಯೋಗಾಸನವನ್ನು ಕಂಬದ ಮೇಲೆ ಚಾಕಚಕ್ಯತೆಯಿಂದ ಮಾಡುವ ಕಲೆಯೇ ಮಲ್ಲಕಂಬ ಎಂದು ಶಾಸಕ ಹಾಗೂ ಕಾಲೇಜು ಅಭಿವೃದ್ಧಿ ಸಮಿತಿ ಅಧ್ಯಕ್ಷ ಕಳಕಪ್ಪ ಜಿ,ಬಂಡಿ ಹೇಳಿದರು.

ಪಟ್ಟಣದ ಮರಿಯಪ್ಪ ಬಾಳಪ್ಪ ಕಳಕೊಣ್ಣವರ ಸರ್ಕಾರಿ ಪ್ರಥಮ ದರ್ಜೆ ಮಹಾವಿದ್ಯಾಲಯ ಆವರಣದಲ್ಲಿ ಗುರುವಾರ ನಡೆದ ಕರ್ನಾಟಕ ವಿಶ್ವವಿದ್ಯಾಲಯ ಮಟ್ಟದ ಅಂತರ್ ಮಹಾವಿದ್ಯಾಲಯಗಳ ಬಾಲಕರ ಹಾಗೂ ಬಾಲಕಿಯರ ಮಲ್ಲಕಂಬ ಸ್ಪರ್ಧೆಗೆ ಚಾಲನೆ ನೀಡಿ ಮಾತನಾಡಿದರು.

ನಶಿಸಿ ಹೋಗುತ್ತಿರುವ ಗ್ರಾಮೀಣ ಭಾಗದ ಆಟಗಳಲ್ಲಿ ಮಲ್ಲಕಂಬ ಒಂದಾಗಿದ್ದು, ಮಲ್ಲಕಂಬವನ್ನು ಬಾಲ್ಯದಿಂದ ಆಡುತ್ತಾ ಬಂದ ವ್ಯಕ್ತಿಗೆ ಯಾವುದೇ ರೀತಿಯ ರೋಗಗಳು ಬರುವುದಿಲ್ಲ ಹಾಗೂ ಎಷ್ಟೇ ಊಟ ಮಾಡಿದರು ಕರಗಿಸಿಕೊಳ್ಳುವ ಶಕ್ತಿ ಇರುತ್ತದೆ ಎಂದರು.

ಪದ್ಮಾಸನ, ಮಯೂರಾಸನ, ವಜ್ರಾಸನ, ಬದ್ಧಕೋನಾಸನ, ಚಕ್ರಾಸನ ಹೀಗೆ ಹತ್ತಾರು ಆಸನಗಳನ್ನು ನೆಲದ ಮೇಲೆ ಮಾಡುವುದು ಸುಲಭ ಆದರೆ ಮಕ್ಕಳು ಕಂಬ, ಹಗ್ಗದ ಮೇಲೆ ಯೋಗ­ಸನ ಪ್ರದರ್ಶಿಸಿ ಮನಸೂರೆಗೊಂಡರು ಬಾಲಕಿಯರು ಹಗ್ಗದ ಮೇಲೆ ವಿವಿಧ ಆಸನಗಳನ್ನು ಲೀಲಾಜಾಲವಾಗಿ ಮಾಡು­­ತ್ತಿರುವುದನ್ನು ನೋಡುತ್ತಿದ್ದ ಸಾವಿರಾರು ಪ್ರೇಕ್ಷಕರು ಸಿಳ್ಳೆ ಹಾಕಿ ಕ್ರೀಡಾಳುಗಳಲ್ಲಿ ಹುರುಪು ತುಂಬು­ತ್ತಿದ್ದರು. ಇನ್ನು ಒಂಟಿ ಕಂಬದ ಮೇಲೆ ಬಾಲಕರು ಆಸನ ಪ್ರದರ್ಶನ ಮಾಡಿ ತಮ್ಮ ಸಾಹಸ ಮೆರೆದರು. ದೇಹ­ದಲ್ಲಿ ಮೂಳೆ ಇಲ್ಲವೇನೊ ಎಂಬಂತೆ ಬಾಲ­ಕರು ದೇಹ ಬಾಗಿಸಿ ಬಳುಕಿಸಿ ಕಂಬ ಏರಿ ಆಸನ ಪ್ರದರ್ಶಿಸಿದರು.ಎಂದು ಹರ್ಷ ವ್ಯಕ್ತಪಡಿಸಿದರು.

ಆರ್ಥಿಕವಾಗಿ ಹಿಂದುಳಿದ ಬಡ ಮಕ್ಕಳಿಗೆ ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ಹೆಚ್ಚಿನ ಪ್ರಮಾಣ ದುಡ್ಡು ಕೊಟ್ಟು ಶಿಕ್ಷಣ ಪಡೆಯಲು ಆಗುವುದಿಲ್ಲ ಎನ್ನುವ ಕಾರಣಕ್ಕಾಗಿ 25 ಸರ್ಕಾರಿ ಪ್ರೌಢಶಾಲೆ 6 ವಸತಿ ಶಾಲೆಗಳನ್ನು 1 ಡಿಪ್ಲೊಮಾ ಕಾಲೆಜು,ಅದರಂತೆ ಸರ್ಕಾರಿ ಪಿ,ಯು,ಕಾಲೆಜುಗಳನ್ನು ತೆರೆಯಲಾಗಿದೆ ಹಾಗೂ ಈಚೆಗೆ ಮಹಾವಿದ್ಯಾಲಯದ ಅಭಿವೃದ್ಧಿಗೆ 25 ಲಕ್ಷ ಅನುದಾನ ನಿಡಲಾಗಿದೆ ಎಂದರು.

ಈ ಸಂಧರ್ಭದಲ್ಲಿ ರೋಣ ಮಂಡಳ ಬಿಜೆಪಿ ಅಧ್ಯಕ್ಷ ಮುತ್ತಣ್ಣ ಕಡಗದ,ಪಟ್ಟಣ ಪಂಚಾಯತಿ ಅಧ್ಯಕ್ಷೆ,ಅಕ್ಕಮ್ಮ ಮಣ್ಣೋಡ್ಡರ, ಉಪಾಧ್ಯಕ್ಷ ಕುಮಾರಸ್ವಾಮಿ ಕೋರಧಾನ್ಯಮಠ, ಬಸವರಾಜ ವಂಕಲಕುಂಟಿ,ಉಮೇಶ ಸಂಗನಾಳಮಠ,ಜ್ಯೋತಿ ಪಾಯಪ್ಪಗೌಡ್ರ,ಅಶೋಕ ಕಳಕೊಣ್ಣವರ,ಶಿವನಗೌಡ ಸೋಮನಗೌಡ್ರ,ಡಾ:ಆರ್,ಕೆ,ಗಚ್ಚಿನಮಠ,ಶ್ರೀ ಶೈಲಪ್ಪ ಬಂಡಿಹಾಳ,ಮಲ್ಲಿಕಾರ್ಜುನಗೌಡ ಭೂಮನಗೌಡ್ರ,ಯಲ್ಲಪ್ಪ ಮಣ್ಣೋಡ್ಡರ, ಇದ್ದರು

Leave a Reply

Your email address will not be published. Required fields are marked *

You May Also Like

ಕಸಾಪ ರಾಜ್ಯಾಧ್ಯಕ್ಷ ಮನು ಬಳಿಗಾರ ಹೇಳಿಕೆ: ಭವನ ನಿರ್ಮಾಣಕ್ಕೆ ಅಗತ್ಯ ಅನುದಾನಕ್ಕಾಗಿ ಸರ್ಕಾರದ ಗಮನ ಸೆಳೆಯಲಾಗುವುದು

ಕಸಾಪ ರಾಜ್ಯಾಧ್ಯಕ್ಷ ನಾಡೋಜ ಡಾ.ಮನು ಬಳಿಗಾರ ಅವರು ಶನಿವಾರ ಪಟ್ಟಣದಲ್ಲಿ ನಿರ್ಮಣ ಹಂತದಲ್ಲಿರುವ ಕನ್ನಡ ಸಾಹಿತ್ಯ ಭವನ ನಿರ್ಮಾಣ ಕಾಮಗಾರಿ ಪರಿಶೀಲಿಸಿದರು.

ನಾಳೆ ದ್ವಿತೀಯ ಪಿಯುಸಿ ಫಲಿತಾಂಶ: ಸಚಿವ ಸುರೇಶ ಕುಮಾರ್

ನಿರೀಕ್ಷೆಗಿಂತ ಮೊದಲೇ ಪಿಯುಸಿ ದ್ವಿತೀಯ ಪರೀಕ್ಷೆ ಫಲಿತಾಂಶ ಪ್ರಕಟವಾಗಲಿದೆ. ನಾಳೆ ಮಂಗಳವಾರ ಫಲಿತಾಂಶ ಪ್ರಕಟವಾಗಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ ಕುಮಾರ್ ಫೇಸ್ಬುಕ್ ಮೂಲಕ ತಿಳಿಸಿದ್ದಾರೆ.

ಬೆಳೆ ರಕ್ಷಣೆಗೊಬ್ಬ ಆಪ್ತ: ನೇತಾಡುವ ಖಾಲಿ ಬಿಯರ್ ಬಾಟಲ್ಲು!

ನರೇಗಲ್ಲ: ಖಾಲಿ ಕ್ವಾಟರು ಬಾಟ್ಲಿ ಯಾವುದಕ್ಕೂ ಬರಂಗಿಲ್ಲ ಅನ್ನೋ ತರಹ ಯೋಗರಾಜ್ ಭಟ್ರು ಹಾಡು ಬರದಿದ್ರು.…

ಕಮಿಶನ್ ಗೆ ಒಳಗಾಗಿ ಗಣಿಗಾರಿಕೆಗೆ ಅವಕಾಶ ಬೇಡ: ತೋಂಟದ ಶ್ರೀಗಳು

ಗದಗ: ಕಪ್ಪತ್ತಗುಡ್ಡ ನಾಶವಾದರೆ ಈ ಭಾಗ ಮರಭೂಮಿಯಾಗುತ್ತದೆ. ಬಲ್ದೋಟದಂತಹ ಕಂಪನಿ ಸರ್ಕಾರದ ಮೇಲೆ ಪ್ರಭಾವ ಬೀರುತ್ತವೆ.…