ಶಿರಹಟ್ಟಿ : ಸಂಕ್ರಾಂತಿ ಹಬ್ಬ ದಂದು ಸೂರಣಗಿ ಗ್ರಾಮದ ಬಾಲಕರ ಪಾಲಿಗೆ ಕರಾಳ ಅಷ್ಟೇ ಅಲ್ಲದೇ ರಾಜ್ಯಾದ್ಯಂತ ಅನೇಕ ಯುವಕರು ನೀರಿನಲ್ಲಿ ‌ ಮುಳುಗಿ ಜೀವ ಕಳೆದು ಕೊಂಡಿದ್ದಾರೆ .ಶನಿವಾರ ಮಧ್ಯಾಹ್ನ ಹೊಳೆಇಟಗಿ ಗ್ರಾಮಕ್ಕೆ ಹೊಂದಿಕೊಂಡಿರುವ ತುಂಗಭದ್ರಾ ನದಿಯಲ್ಲಿ ಸಂಕ್ರಮಣ ನಿಮಿತ್ತ ಸ್ನಾನಕ್ಕಾಗಿ ಹೋದಾಗ ನದಿಯಲ್ಲಿರುವ ಆಳದ ಗುಂಡಿಯಲ್ಲಿ ಮುಳಗಿ ಸೂರಣಗಿ ಗ್ರಾಮದ ಪ್ರಜ್ವಲ್ ಬಸವರಾಜ ಮಾಸ್ತಮ್ಮನವರ (14) ಹಾಗೂ ಹೊಳೆ ಇಟಗಿ ಗ್ರಾಮದ ನಾಗರಾಜ ಕರಬಸಪ್ಪ ಬುರಡಿ (13) ಎಂಬ ಬಾಲಕರಿಬ್ಬರು ಮರಣ ಹೊಂದಿದ್ದಾರೆ.

ಮರಳುಗಾರಿಕೆಯಿಂದ ದೊಡ್ಡ ಪ್ರಮಾಣದ ಗುಂಡಿಗಳು ಬಿದ್ದಿದ್ದು ,ಅವುಗಳ ಬಗ್ಗೆ ಯಾರಿಗೂ ಮಾಹಿತಿ ಇರುವುದಿಲ್ಲ ಅದರಲ್ಲೂ ಅಕ್ರಮ ಮರಳು ದಂದೆ ಕೊರರು ಎಲ್ಲೆಂದರಲ್ಲಿ ಗುಂಡಿಗಳನ್ನ ತೊಡಿ ಮರಳು ಸಾಗಾಣಿಕೆ ಮಾಡುತ್ತಾರೆ .ಅಕ್ರಮ ಮರಳು ಸಾಗಾಣಿಕೆ ಮಟ್ಟ ಹಾಕುವಲ್ಲಿ ತಾಲೂಕಾಡಳಿತ ವಿಫಲವಾಗಿದೆವೆಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದರು.

ಸುದ್ದಿ ತಿಳಿದು ಸ್ಥಳೀಯರು ಈಜುಗಾರರ ಸಹಾಯದಿಂದ ಮೃತ ದೇಹಗಳನ್ನು ಹೊರ ತೆಗೆಯಲಾಗಿದೆ. ಘಟನಾ ಸ್ಥಳಕ್ಕೆ ಸ್ಥಳಕ್ಕೆ ತಹಸೀಲ್ದಾರ್ , ಸಿಪಿಐ , ಪಿಎಸ್ಐ ಬೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.

Leave a Reply

Your email address will not be published. Required fields are marked *

You May Also Like

ಲಾರಿ ಡಿಕ್ಕಿ ಸ್ಥಳದಲ್ಲಿಯೇ ಯುವತಿ ಸಾವು

ದ್ವಿಚಕ್ರ ವಾಹನದಿಂದ ಗದುಗಿನ ರೈಲ್ವೆ ನಿಲ್ದಾಣಕ್ಕೆ ಬಿಟ್ಟು ಮರಳಿ ತನ್ನ ಊರಿಗೆ  ಬರುವ ಮಾರ್ಗ ಮದ್ಯದಲ್ಲಿ ಅಡವಿಸೋಮಾಪುರದ ಮಲ್ಲಿಕಾರ್ಜುನ ಮಠದ ಹತ್ತಿರ ರಬಸವಾಗಿ ಬಂದ ವಾಹನ ಡಿಕ್ಕಿ  ಹೊಡೆದು ಯುವತಿ  ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ರಾತ್ರಿ 10 ಘಂಟೆಗೆ ನಡೆದಿದೆ.

ಗದಗ ಜಿಲ್ಲೆಯ ಖಾಕಿ ಖದರ್ ಗೆ ಜನರು ಖುಷ್..!: ಕಳೆದ ವಸ್ತುಗಳು ಕೈಸೇರಿದ್ದಕ್ಕೆ ಜನ್ರು ಖುಷ್ !

ಖಾಕಿ ತನ್ನ ಖದರ್ ತೋರಿಸಿದರೆ ಏನೆಲ್ಲ ಮಾಡಬಹುದು ಎನ್ನುವುದಕ್ಕೆ ಗದಗ ಜಿಲ್ಲೆಯ ಪೊಲೀಸರು ತಾಜಾ ಉದಾಹರಣೆ. ಒಂದು ವರ್ಷದಿಂದ ಜಿಲ್ಲೆಯಲ್ಲಿ ಆದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳ್ಳತನ ಜಾಲ ಭೇದಿಸಿ ಕಳ್ಳರ ಹೆಡೆಮುರಿ ಕಟ್ಟಿ ಜನರು ಕಳೆದುಕೊಂಡ ವಸ್ತುಗಳನ್ನು ಮರಳಿಸುವ ಮೂಲಕ ಜಿಲ್ಲಾ ಪೊಲೀಸ್ ಇಂದು ಜನರ ಮೆಚ್ಚುಗೆಗೆ ಪಾತ್ರವಾಯಿತು.

ಕನ್ನಡ ನಾಡು ನುಡಿಗೆ ಜಕ್ಕಲಿ ಗ್ರಾಮದ ಕೊಡುಗೆ ಅಪಾರ :ವಿವೇಕಾನಂದಗೌಡ ಪಾಟೀಲ

ಉತ್ತರಪ್ರಭ ಸುದ್ದಿ ನರೆಗಲ್ಲ: ಕನ್ನಡ ನಾಡು ನುಡಿಗೆ ಗದಗ ಜಿಲ್ಲೆಯ ಜಕ್ಕಲಿ ಗ್ರಾಮ ಅಪಾರವಾದ ಕೊಡುಗೆ…

ಐಪಿಎಲ್ ಬೆಟ್ಟಿಂಗ್ : ಗದಗನಲ್ಲಿ ಕೆಲವರ ಬಂಧನ

ಐಪಿಎಲ್ ಆರಂಭವಾದರೆ ಜೊತೆಗೆ ಬೆಟ್ಟಿಂಗ್ ದಂಧೆಗೂ ರೆಕ್ಕೆ ಪುಕ್ಕ ಬರುತ್ತವೆ. ಗದಗ ನಗರದಲ್ಲಿ ಐಪಿಎಲ್ ಬೆಟ್ಟಿಂಗ್ ನಡೆಸುತ್ತಿದ್ದವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.