ಶಿರಹಟ್ಟಿ : ಸಂಕ್ರಾಂತಿ ಹಬ್ಬ ದಂದು ಸೂರಣಗಿ ಗ್ರಾಮದ ಬಾಲಕರ ಪಾಲಿಗೆ ಕರಾಳ ಅಷ್ಟೇ ಅಲ್ಲದೇ ರಾಜ್ಯಾದ್ಯಂತ ಅನೇಕ ಯುವಕರು ನೀರಿನಲ್ಲಿ ಮುಳುಗಿ ಜೀವ ಕಳೆದು ಕೊಂಡಿದ್ದಾರೆ .ಶನಿವಾರ ಮಧ್ಯಾಹ್ನ ಹೊಳೆಇಟಗಿ ಗ್ರಾಮಕ್ಕೆ ಹೊಂದಿಕೊಂಡಿರುವ ತುಂಗಭದ್ರಾ ನದಿಯಲ್ಲಿ ಸಂಕ್ರಮಣ ನಿಮಿತ್ತ ಸ್ನಾನಕ್ಕಾಗಿ ಹೋದಾಗ ನದಿಯಲ್ಲಿರುವ ಆಳದ ಗುಂಡಿಯಲ್ಲಿ ಮುಳಗಿ ಸೂರಣಗಿ ಗ್ರಾಮದ ಪ್ರಜ್ವಲ್ ಬಸವರಾಜ ಮಾಸ್ತಮ್ಮನವರ (14) ಹಾಗೂ ಹೊಳೆ ಇಟಗಿ ಗ್ರಾಮದ ನಾಗರಾಜ ಕರಬಸಪ್ಪ ಬುರಡಿ (13) ಎಂಬ ಬಾಲಕರಿಬ್ಬರು ಮರಣ ಹೊಂದಿದ್ದಾರೆ.
ಮರಳುಗಾರಿಕೆಯಿಂದ ದೊಡ್ಡ ಪ್ರಮಾಣದ ಗುಂಡಿಗಳು ಬಿದ್ದಿದ್ದು ,ಅವುಗಳ ಬಗ್ಗೆ ಯಾರಿಗೂ ಮಾಹಿತಿ ಇರುವುದಿಲ್ಲ ಅದರಲ್ಲೂ ಅಕ್ರಮ ಮರಳು ದಂದೆ ಕೊರರು ಎಲ್ಲೆಂದರಲ್ಲಿ ಗುಂಡಿಗಳನ್ನ ತೊಡಿ ಮರಳು ಸಾಗಾಣಿಕೆ ಮಾಡುತ್ತಾರೆ .ಅಕ್ರಮ ಮರಳು ಸಾಗಾಣಿಕೆ ಮಟ್ಟ ಹಾಕುವಲ್ಲಿ ತಾಲೂಕಾಡಳಿತ ವಿಫಲವಾಗಿದೆವೆಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದರು.
ಸುದ್ದಿ ತಿಳಿದು ಸ್ಥಳೀಯರು ಈಜುಗಾರರ ಸಹಾಯದಿಂದ ಮೃತ ದೇಹಗಳನ್ನು ಹೊರ ತೆಗೆಯಲಾಗಿದೆ. ಘಟನಾ ಸ್ಥಳಕ್ಕೆ ಸ್ಥಳಕ್ಕೆ ತಹಸೀಲ್ದಾರ್ , ಸಿಪಿಐ , ಪಿಎಸ್ಐ ಬೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.