ಶಿರಹಟ್ಟಿ : ಸಂಕ್ರಾಂತಿ ಹಬ್ಬ ದಂದು ಸೂರಣಗಿ ಗ್ರಾಮದ ಬಾಲಕರ ಪಾಲಿಗೆ ಕರಾಳ ಅಷ್ಟೇ ಅಲ್ಲದೇ ರಾಜ್ಯಾದ್ಯಂತ ಅನೇಕ ಯುವಕರು ನೀರಿನಲ್ಲಿ ‌ ಮುಳುಗಿ ಜೀವ ಕಳೆದು ಕೊಂಡಿದ್ದಾರೆ .ಶನಿವಾರ ಮಧ್ಯಾಹ್ನ ಹೊಳೆಇಟಗಿ ಗ್ರಾಮಕ್ಕೆ ಹೊಂದಿಕೊಂಡಿರುವ ತುಂಗಭದ್ರಾ ನದಿಯಲ್ಲಿ ಸಂಕ್ರಮಣ ನಿಮಿತ್ತ ಸ್ನಾನಕ್ಕಾಗಿ ಹೋದಾಗ ನದಿಯಲ್ಲಿರುವ ಆಳದ ಗುಂಡಿಯಲ್ಲಿ ಮುಳಗಿ ಸೂರಣಗಿ ಗ್ರಾಮದ ಪ್ರಜ್ವಲ್ ಬಸವರಾಜ ಮಾಸ್ತಮ್ಮನವರ (14) ಹಾಗೂ ಹೊಳೆ ಇಟಗಿ ಗ್ರಾಮದ ನಾಗರಾಜ ಕರಬಸಪ್ಪ ಬುರಡಿ (13) ಎಂಬ ಬಾಲಕರಿಬ್ಬರು ಮರಣ ಹೊಂದಿದ್ದಾರೆ.

ಮರಳುಗಾರಿಕೆಯಿಂದ ದೊಡ್ಡ ಪ್ರಮಾಣದ ಗುಂಡಿಗಳು ಬಿದ್ದಿದ್ದು ,ಅವುಗಳ ಬಗ್ಗೆ ಯಾರಿಗೂ ಮಾಹಿತಿ ಇರುವುದಿಲ್ಲ ಅದರಲ್ಲೂ ಅಕ್ರಮ ಮರಳು ದಂದೆ ಕೊರರು ಎಲ್ಲೆಂದರಲ್ಲಿ ಗುಂಡಿಗಳನ್ನ ತೊಡಿ ಮರಳು ಸಾಗಾಣಿಕೆ ಮಾಡುತ್ತಾರೆ .ಅಕ್ರಮ ಮರಳು ಸಾಗಾಣಿಕೆ ಮಟ್ಟ ಹಾಕುವಲ್ಲಿ ತಾಲೂಕಾಡಳಿತ ವಿಫಲವಾಗಿದೆವೆಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದರು.

ಸುದ್ದಿ ತಿಳಿದು ಸ್ಥಳೀಯರು ಈಜುಗಾರರ ಸಹಾಯದಿಂದ ಮೃತ ದೇಹಗಳನ್ನು ಹೊರ ತೆಗೆಯಲಾಗಿದೆ. ಘಟನಾ ಸ್ಥಳಕ್ಕೆ ಸ್ಥಳಕ್ಕೆ ತಹಸೀಲ್ದಾರ್ , ಸಿಪಿಐ , ಪಿಎಸ್ಐ ಬೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.

Leave a Reply

Your email address will not be published. Required fields are marked *

You May Also Like

ಗ್ರಾಮದಲ್ಲಿ ಮೂವರು ಕೋವಿಡ್ ಗೆ ಬಲಿ..! : ಕೊಣ್ಣೂರು ಗ್ರಾಮದಲ್ಲಿ ಆತಂಕ..!

ಕೊಣ್ಣೂರ: ಕೋವಿಡ್ 19 ಮಹಾಮಾರಿಯ ಎರಡನೇ ಅಲೆಯು ಗ್ರಾಮೀಣ ಪ್ರದೇಶಕ್ಕೂ ಆವರಿಸಿದ್ದು ತಿಳಿದಿರುವ ವಿಷಯ, ಗ್ರಾಮದಲ್ಲಿ ಮಹಾಮಾರಿ ತನ್ನ ಅಟ್ಟಹಾಸ ಮೆರದಿದ್ದು ಸುಮಾರು ಪ್ರಕರಣಗಳು ದಾಖಲಾಗಿದ್ದು, ಅದರಲ್ಲಿ ಕೆಲವರು ಗುಣಮುಖರಾಗಿದ್ದಾರೆ.

ಗದಗ ಜಿಲ್ಲೆಯಲ್ಲಿಂದು 04 ಪಾಸಿಟಿವ್!

ಗದಗ: ಜಿಲ್ಲೆಯಲ್ಲಿಂದು 4 ಕೊರೊನಾ ಪಾಸಿಟಿವ್ ಪತ್ತೆಯಾಗಿವೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 232…

ಎಮ್ಎಲ್ಎ ಸಾಹೇಬ್ರಿಗೆ ಹೇಳಿ ಹೇಳಿ ಸಾಕಾಗಿ ಹೋಯ್ತು!: ರೈತರ…, ರೊಕ್ಕಾ ಹಾಕಿ ರಸ್ತೆ ರಿಪೇರಿ ಮಾಡಸಾಕತ್ತಾರ..!

ಸಾಕಷ್ಟು ರೈತರು ತಮ್ಮ ಹೊಲಗಳಿಗೆ ದಾರಿ ಇಲ್ಲದೆ ಪರದಾಡುವ ಪರಿಸ್ಥಿತಿಯಲ್ಲಿ, ದಾರಿ ಸರಿಪಡಿಸುವಂತೆ ಪರಿ ಪರಿಯಾಗಿ ಬೇಡಿದರೂ ಸ್ಥಳೀಯ ಶಾಸಕರು ಮಾತ್ರ ಸ್ಪಂದಿಸದೆ ಇರುವುದು ಶಾಸಕರು ಬೇಜವ್ದಾರಿಗೆ ಹಿಡಿದ ಕೈಗನ್ನಡಿಯಂತಾಗಿದೆ.

ಡಾ.ಸಂಕನಗೌಡರ ಸಾಹಿತ್ಯದಿಂದ ಸಮಾಜ ಸುಧಾರಣೆ

ಸಾಮಾನ್ಯವಾಗಿ ವೈದ್ಯ, ವಕೀಲ, ಪೋಲೀಸ ಮೊದಲಾದ ಒತ್ತಡಭರಿತ ವೃತ್ತಿಯಲ್ಲಿ ಇರುವವರು ಕಥೆ, ಕಾದಂಬರಿ, ಕವಿತೆ, ನಾಟಕ, ಸಂಗೀತ, ಸಾಹಿತ್ಯ ಮೊದಲಾದವುಗಳಿಂದ ದೂರವಿರುತ್ತಾರೆ. ದೈನಂದಿನ ವೃತ್ತಿಯ ಒತ್ತಡ ಹಾಗೂ ಮತ್ತಿತರ ಕಾರಣಗಳಿಂದ ಸಾಹಿತ್ಯಾಭ್ಯಾಸದಿಂದ ದೂರವಿರುತ್ತಾರೆ ಅಥವಾ ಸಾಹಿತ್ಯವನ್ನು ಕಡೆಗಣಿಸಿರುತ್ತಾರೆ.