ಶಿರಹಟ್ಟಿ : ಸಂಕ್ರಾಂತಿ ಹಬ್ಬ ದಂದು ಸೂರಣಗಿ ಗ್ರಾಮದ ಬಾಲಕರ ಪಾಲಿಗೆ ಕರಾಳ ಅಷ್ಟೇ ಅಲ್ಲದೇ ರಾಜ್ಯಾದ್ಯಂತ ಅನೇಕ ಯುವಕರು ನೀರಿನಲ್ಲಿ ‌ ಮುಳುಗಿ ಜೀವ ಕಳೆದು ಕೊಂಡಿದ್ದಾರೆ .ಶನಿವಾರ ಮಧ್ಯಾಹ್ನ ಹೊಳೆಇಟಗಿ ಗ್ರಾಮಕ್ಕೆ ಹೊಂದಿಕೊಂಡಿರುವ ತುಂಗಭದ್ರಾ ನದಿಯಲ್ಲಿ ಸಂಕ್ರಮಣ ನಿಮಿತ್ತ ಸ್ನಾನಕ್ಕಾಗಿ ಹೋದಾಗ ನದಿಯಲ್ಲಿರುವ ಆಳದ ಗುಂಡಿಯಲ್ಲಿ ಮುಳಗಿ ಸೂರಣಗಿ ಗ್ರಾಮದ ಪ್ರಜ್ವಲ್ ಬಸವರಾಜ ಮಾಸ್ತಮ್ಮನವರ (14) ಹಾಗೂ ಹೊಳೆ ಇಟಗಿ ಗ್ರಾಮದ ನಾಗರಾಜ ಕರಬಸಪ್ಪ ಬುರಡಿ (13) ಎಂಬ ಬಾಲಕರಿಬ್ಬರು ಮರಣ ಹೊಂದಿದ್ದಾರೆ.

ಮರಳುಗಾರಿಕೆಯಿಂದ ದೊಡ್ಡ ಪ್ರಮಾಣದ ಗುಂಡಿಗಳು ಬಿದ್ದಿದ್ದು ,ಅವುಗಳ ಬಗ್ಗೆ ಯಾರಿಗೂ ಮಾಹಿತಿ ಇರುವುದಿಲ್ಲ ಅದರಲ್ಲೂ ಅಕ್ರಮ ಮರಳು ದಂದೆ ಕೊರರು ಎಲ್ಲೆಂದರಲ್ಲಿ ಗುಂಡಿಗಳನ್ನ ತೊಡಿ ಮರಳು ಸಾಗಾಣಿಕೆ ಮಾಡುತ್ತಾರೆ .ಅಕ್ರಮ ಮರಳು ಸಾಗಾಣಿಕೆ ಮಟ್ಟ ಹಾಕುವಲ್ಲಿ ತಾಲೂಕಾಡಳಿತ ವಿಫಲವಾಗಿದೆವೆಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದರು.

ಸುದ್ದಿ ತಿಳಿದು ಸ್ಥಳೀಯರು ಈಜುಗಾರರ ಸಹಾಯದಿಂದ ಮೃತ ದೇಹಗಳನ್ನು ಹೊರ ತೆಗೆಯಲಾಗಿದೆ. ಘಟನಾ ಸ್ಥಳಕ್ಕೆ ಸ್ಥಳಕ್ಕೆ ತಹಸೀಲ್ದಾರ್ , ಸಿಪಿಐ , ಪಿಎಸ್ಐ ಬೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.

Leave a Reply

Your email address will not be published. Required fields are marked *

You May Also Like

ಸಂಡೇ ಲಾಕ್ ಡೌನ್ ಸಂಕಟ: ಕಂಗಾಲಾದ ಕಾಗೆಗಳಿಗೆ ಖಾರಾ-ಡಾಣಿ ಊಟ

ಸಂಡೇ ಲಾಕ್ ಡೌನ್ ಸಂದರ್ಭದಲ್ಲಿ ಆಹಾರವಿಲ್ಲದೆ ಕಂಗಾಲಾಗಿದ್ದ ಕಾಗೆಗಳಿಗೆ ಗದಗ ನಗರದ ಹೊಟೆಲ್ ಮಾಲೀಕರೊಬ್ಬರು ಖಾರಾ-ಡಾಣಿ ನೀಡಿ ಮಾನವೀಯತೆ ಮೆರೆದಿದ್ದಾರೆ.

ಲಕ್ಷ್ಮೇಶ್ವರ ; ರೈತರು ತಂತ್ರಜ್ಞಾನ ಬಳಸಿಕೊಂಡು ಆದಾಯ ಹೆಚ್ಚಿಸಿಕೊಳ್ಳಲಿ

ಪಟ್ಟಣ ತೋಟಗಾರಿಕಾ ಇಲಾಖೆಯ ಮಹಾಂತಿನಮಠದಲ್ಲಿ ಬುದವಾರ ತೋಟಗಾರಿಕಾ ಇಲಾಖೆ ವತಿಯಿಂದ ತಾಲೂಕ ಪಂಚಾಯತಿ ಯೋಜನೆಯಡಿ ರೈತ ಮತ್ತು ರೈತ ಮಹಿಳೆಯರಿಗೆ ತರಬೇತಿ ಕಾರ್ಯಕ್ರಮ ಬುಧವಾರ ಜರುಗಿತು.

ಕನ್ನಡ ಜಾನಪದ ರಾಜ್ಯೋತ್ಸವ ಹಾಗೂ ಸಾಧಕರಿಗೆ ಸನ್ಮಾನ

ಗದಗ: ಕನ್ನಡ ಜಾನಪದ ಪರಿಷತ ಬೆಂಗಳೂರು ಜಿಲ್ಲಾ ಘಟಕ ಗದಗ ಇವರ ಆಶ್ರಯದಲ್ಲಿ ನವೆಂಬರ 17 ರಂದು ಸಾಯಂಕಾಲ 5-30 ಗಂಟೆಗೆ ಗದಗ ನಗರದ ಬಣ್ಣದ ಮನೆ ಆರ್ಟ ಅಡ್ಡಾದ ಸಾಂಸ್ಕೃತಿಕ ಭವನದಲ್ಲಿ ಕನ್ನಡ ಜಾನಪದ ರಾಜ್ಯೋತ್ಸವ ಹಾಗೂ ಸಾಧಕರಿಗೆ ಸನ್ಮಾನ,

ಅಬ್ಬಿಗೇರಿ: ಕಠಿಣ ಲಾಕ್ಡೌನ್ ಮನೆ ಮನೆಗೆ ಪಡಿತರ

ನರೇಗಲ್: ಕೊರೊನಾ ಎರಡನೇ ಅಲೆಯನ್ನು ತಡೆಗಟ್ಟಲು ಜಿಲ್ಲಾಡಳಿತ 5 ದಿನದವರೆಗೂ ಕಠಿಣ ಲಾಕ್ಡೌನ್ ವಿಧಿಸಿದ ಪರಿಣಾಮ, ಸಮೀಪದ ಅಬ್ಬಿಗೇರಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಪಡಿತರನ್ನು ಮನೆ ಮನೆಗೆ ತಲುಪಿಸುವ ಕಾರ್ಯ ಕೈಗೊಂಡರು. ಗ್ರಾಮದಲ್ಲಿನ ಸಂಘದ ಪಡಿತರ ಚೀಟಿ ಇರುವ ಮನೆಮನೆಗೆ ತೆರಳಿ ಗ್ರಾಹಕರ ಪಡಿತರವನ್ನು ಸ್ಥಳದಲ್ಲಿಯೇ ತೂಕ ಮಾಡಿ ಹಂಚಿಕೆ ಮಾಡಲಾಗುತ್ತಿದೆ,ಕಠಿಣ ಲಾಕ್ಡೌನ್ ನಿಂದ ಜನರು ಹೊರಗಡೆ ಬರಲು ಆಗದ ಕಾರಣ ಗ್ರಾಮ ಪಂಚಾಯತಿ ಯವರು ಪಡಿತರವನ್ನು ಮನೆ ಮನೆಗೆ ಹಂಚುತ್ತಿರುವುದು ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದರು.