ರಾಯಚೂರು:ಮಕರ ಸಂಕ್ರಾಂತಿಯ ಪುಣ್ಯಸ್ನಾನ ಮಾಡುವುದಕ್ಕಾಗಿ ತೆರಳಿದ ರಾಯಚೂರಿನ ಇಬ್ಬರು ಯುವಕರು ಕೃಷ್ಣಾ ನದಿಯ ಪಾಲಾಗಿದ್ದಾರೆ.ಸಂಕ್ರಾಂತಿ ಪೀಡೆ ಕಳೆಯುವುದಕ್ಕಾಗಿ ನದಿಯಲ್ಲಿ ಸ್ನಾನ ಮಾಡಲು ಹೋಗುವುದು ವಾಡಿಕೆ. ಸ್ನಾನ ಮಾಡುವುದಕ್ಕಾಗಿ ರಾಯಚೂರಿನ ಆರೇಳು ಯುವಕರು ಕೃಷ್ಣಾ ನದಿಗೆ ತೆರಳಿದ್ದಾರೆ. ಇದರಲ್ಲಿ ಗಣೇಶ್ ಮತ್ತು ಉದಯ್‌ಕುಮಾರ್ ಎಂಬ ಯುವಕರು ಮೃತಪಟ್ಟಿದ್ದಾರೆ. ಗಣೇಶ್ ಮೃತದೇಹ ದೊರೆತಿದ್ದರೆ, ಉದಯ್‌ಕುಮಾರ್ ಮೃತದೇಹಕ್ಕಾಗಿ ಶೋಧ ನಡೆಸಲಾಗುತ್ತದೆ.

ಮೃತ ಗಣೇಶ್ ರಾಯಚೂರಿನ ನಿಜಲಿಂಗಪ್ಪ ಕಾಲೋನಿಯ ನಿವಾಸಿ ಆಗಿದ್ದಾರೆ. ಉದಯ್‌ಕುಮಾರ್ ಸಹ ರಾಯಚೂರಿನ ಕೆಇಬಿ ಕಾಲೋನಿಯ ನಿವಾಸಿ ಆಗಿದ್ದಾರೆ ಎಂದು ತಿಳಿದು ಬಂದಿದೆ.ನದಿಯಲ್ಲಿ ಸದ್ಯ ನೀರಿನ ರಭಸವೇನೂ ಇಲ್ಲ. ಜನರು ಸ್ನಾನ ಮಾಡಲು ನಿಗದಿಪಡಿಸಿದಂತಹ ಸ್ಥಳ ಬಿಟ್ಟು ಈ ಯುವಕರು ದೂರ ತೆರಳಿದ್ದಾರೆ. ಆಳವಾದ ಪ್ರದೇಶದಲ್ಲಿ ಈಜಾಡಲು ಹೋಗಿ ಮೃತಪಟ್ಟಿರಬಹುದು ಎಂದು ಸ್ಥಳೀಯರು ಸಂಶಯ ವ್ಯಕ್ತಪಡಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ಶಿಕ್ಷಕರ ವರ್ಗಾವಣೆ : ಗಣಕೀಕೃತ ಕೌನ್ಸಿಲಿಂಗ್

2021-21ನೇ ಸಾಲಿನ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರ ವರ್ಗಾವಣೆಯನ್ನು ಗಣಕೀಕೃತ ಕೌನ್ಸಲಿಂಗ್ ಮೂಲಕ ನಡೆಸಲಾಗುತ್ತಿದೆ.

ಬಾಗಲಕೋಟೆ ಜಿಲ್ಲೆಯಲ್ಲಿಂದು 18 ಕೊರೊನಾ ಪಾಸಿಟಿವ್!

ಜಿಲ್ಲೆಯಲ್ಲಿಂದು ಮತ್ತೆ 18 ಕೊರೊನಾ ಪಾಸಿಟಿವ್ ಪ್ರಕರಣ ದೃಡಪಟ್ಟಿದ್ದು ಸೋಂಕಿತರ ಸಂಖ್ಯೆ 155ಕ್ಕೆ ಏರಿಕೆಯಾಗಿದೆ.

ಬ್ಲೇಡ್‌ನಿಂದ ಇರಿದುಕೊಂಡು ಅತ್ಮಹತ್ಯೆಗೆ ಯತ್ನ

ಓರ್ವ ವ್ಯಕ್ತಿ ದೇಹಕ್ಕೆ ಎಲ್ಲೆಂದರಲ್ಲಿ ಬ್ಲೇಡ್‌ನಿಂದ ಇರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಮಂಗಳವಾರ ನಡೆದಿದೆ.

ಬ್ಯೂಟಿ ಪಾರ್ಲರ್ ಸೇಲ್ಸ್ ಗರ್ಲ್ ಹುಡುಗಿಯ ಭಯಾನಕ ಕತೆ!

ಕಳೆದ ನಾಲ್ಕು ವರ್ಷಗಳ ಹಿಂದೆ ನಾಗಾಲ್ಯಾಂಡ್‌ನಿಂದ ಬ್ಯೂಟಿ ಪಾರ್ಲರ್ ಸೇಲ್ಸ್ ಗರ್ಲ್ ಆಗಿ ಬಂದವಳು ಬೆಂಗಳೂರಿಗೆ ಬಂದವಳು ಆಪ್ತರೊಂದಿಗೆ ಜೈಲು ಪಾಲಾಗಿದ್ದಾರೆ.