ಮುಳಗುಂದ : ಮಕ್ಕಳ ಮತ್ತು ಯುವಕರಲ್ಲಿ ಕಂಡುಬರುವ ಸಾಂಕ್ರಾಮಿಕ ರೋಗ ತಡೆಗೆ ದೇಹದಲ್ಲಿ ರೋಗನಿರೋಧಕ ಶಕ್ತಿ ಹೆಚ್ಚಿಸುವದು ಮುಖ್ಯವಾಗಿದ್ದು, ಆಯುರ್ವೇದದಲ್ಲಿ ಉಲ್ಲೇಖಿಸಿರುವ ಅಮೃತ ಬಳ್ಳಿ, ಬೆಟ್ಟದ ನೆಲ್ಲಿ, ಹಿರೇಮದ್ದಿನ ಬೇರು ಸೇರಿದಂತೆ ಮನೆಯಲ್ಲಿ ಲಭ್ಯವಿರುವ ಆಯುರ್ವೇದ ಗುಣವುಳ್ಳ ಔಷಧಗಳನ್ನ ಬಳಸಿಕೊಳ್ಳಬೇಕು. ಎಂದು ಡಿ.ಜಿ.ಎಂ ಆಯುರ್ವೇದ ಮಹಾವಿದ್ಯಾಲಯದ ಉಪನ್ಯಾಸಕ ಡಾ. ಎಸ್.ಎನ್.ಬೆಳವಡಿ ಹೇಳಿದರು.
ಅವರು ಇಲ್ಲಿನ ಕೆ.ಎಸ್.ಎಸ್. ಪ್ರೌಢ ಶಾಲೆಯಲ್ಲಿ ಅಮೃತ ಕಾ ಆಜಾದಿ ಮಹೋತ್ಸವದ ಅಂಗವಾಗಿ ಗದಗ ಡಿ.ಜಿ.ಎಂ ಆಯುರ್ವೇದ ಮಹಾವಿದ್ಯಾಲಯ ಮತ್ತು ಆಸ್ಪತ್ರೆ, ಸ್ನಾತಕೋತ್ತರ ಸಂಶೋಧನಾ ಕೇಂದ್ರದ ವತಿಯಿಂದ ಸೋಮವಾರ ನಡೆದ ವಿದ್ಯಾರ್ಥಿಗಳ ಆರೋಗ್ಯ ತಪಾಸಣೆ, ಆಯುರ್ವೇದ ಸಸ್ಯಗಳ ಮಾಹಿತಿ ಮತ್ತು ಬಳಕೆ ವಿಧಾನ ಕುರಿತು ನಡೆದ ಕಾರ್ಯಕ್ರಮದಲ್ಲಿ ಉದ್ಘಾಟಿಸಿ ಮಾತನಾಡಿದರು.


ಡಾ. ಅಶ್ವಿನಿ ಸಜ್ಜನರ ಮಾತನಾಡಿ, ನಮ್ಮ ಸುತ್ತಮುತ್ತಲಿನ ಪರಿಸರ ಸ್ವಾಸ್ಥ್ಯವಾಗಿ ಇಟ್ಟುಕೊಳ್ಳಬೇಕು. ಸಾಂಕ್ರಾಮಿಕ ರೋಗ ಹರಡುವಿಕೆ ತಡೆಗೆÉ ವೈಯಕ್ತಿಕ ಶುಚಿತ್ವ ಕಾಪಾಡಿಕೊಳ್ಳಬೇಕು. ಎಂದರು. ನಂತರ ಆಯುರ್ವೇದ ಔಷಧ ಗುಣವುಳ್ಳ ಹತ್ತಾರು ಬಗೆಯ ಸಸ್ಯಗಳ ಪ್ರದರ್ಶನ ಹಾಗೂ ವಿದ್ಯಾರ್ಥಿಳ ಆರೋಗ್ಯ ತಪಾಸಣೆ ನಡೆಯಿತು.


ಈ ಸಂದರ್ಭದಲ್ಲಿ ಡಾ.ಎಂ.ಡಿ.ಸಮುದ್ರಿ, ಡಾ.ಕುಮಾರ ಚೌಡಪ್ಪನವರ, ಡಾ.ಯು.ವಿ.ಪುರದ, ಡಾ.ಮಮತಾ ಕಟಾವಕರ, ಪ್ರಾಚಾರ್ಯ ಡಿ.ವೈ.ಹುಡೆದ, ಶಿಕ್ಷಕರಾದ ಎಸ್.ವೈ.ಕುರಿ, ಎಸ್.ಎ.ಯಳವತ್ತಿ, ಜಿ.ಬಿ.ಮುಳಗುಂದ ಇದ್ದರು.

Leave a Reply

Your email address will not be published. Required fields are marked *

You May Also Like

ರಾಜ್ಯದಲ್ಲಿಂದು 176 ಪಾಸಿಟಿವ್: ಯಾವ ಜಿಲ್ಲೆಯಲ್ಲಿ ಎಷ್ಟು..?

ಬೆಂಗಳೂರು: ರಾಜ್ಯದಲ್ಲಿಂದು 176 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಸೋಂಕಿತರ ಸಂಖ್ಯೆ 7000…

ವಾಟ್ಸಾಪ್ ಬಗ್ಗೆ ಮುಖ್ಯ ಮಾಹಿತಿ ಇಲ್ಲಿದೆ ನೋಡಿ

ವಾಟ್ಸಾಪ್ ಬಳಕೆದಾರರಿಗೆ ಹೊಸ ಮಾಹಿತಿಯೊಂದು ಇಲ್ಲಿದೆ. ವಾಟ್ಸಾಪ್ ಬಳಕೆದಾರರು ಸ್ಮಾರ್ಟ ಫೋನ್ ಗಳಲ್ಲಿ ವಾಟ್ಸಾಪ್ ಲಾಗೌಟ್ ಮಾಡಬಹುದಾಗಿದೆ.

ಚಿನ್ನ, ಬೆಳ್ಳಿ ಮತ್ತಷ್ಟು ಇಳಿಕೆ

ಎರಡು ದಿನಗಳಿಂದ ಚಿನ್ನ ದರ ಇಳಿಕೆಯತ್ತ ಮುಖ ಮಾಡಿದೆ. ಹಾಗೆಯೇ ಎರಡು ದಿನಗಳಿಂದ ಸ್ಥಿರವಾಗಿದ್ದ ಬೆಳ್ಳಿ ದರ ಕೂಡಾ ಇಂದು ಇಳಿಕೆ ಕಂಡಿದೆ.

ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 512ಕ್ಕೆ ಏರಿಕೆ

ಕೊರೋನಾ ಸೊಂಕಿಗೆ ಸಾಕಷ್ಟು ಸಾವು ನೋವುಗಳು ಸಂಭವಿಸುತ್ತಿದ್ದು, ರಾಜ್ಯ-ದೇಶ-ರಾಷ್ಟ್ರದಲ್ಲಿ ಕೊರೋನಾ ಸೋಂಕಿತರ ಅಪ್ಡೇಟ್ ಮಾಹಿತಿ..