ಮುಳಗುಂದ : ಮಕ್ಕಳ ಮತ್ತು ಯುವಕರಲ್ಲಿ ಕಂಡುಬರುವ ಸಾಂಕ್ರಾಮಿಕ ರೋಗ ತಡೆಗೆ ದೇಹದಲ್ಲಿ ರೋಗನಿರೋಧಕ ಶಕ್ತಿ ಹೆಚ್ಚಿಸುವದು ಮುಖ್ಯವಾಗಿದ್ದು, ಆಯುರ್ವೇದದಲ್ಲಿ ಉಲ್ಲೇಖಿಸಿರುವ ಅಮೃತ ಬಳ್ಳಿ, ಬೆಟ್ಟದ ನೆಲ್ಲಿ, ಹಿರೇಮದ್ದಿನ ಬೇರು ಸೇರಿದಂತೆ ಮನೆಯಲ್ಲಿ ಲಭ್ಯವಿರುವ ಆಯುರ್ವೇದ ಗುಣವುಳ್ಳ ಔಷಧಗಳನ್ನ ಬಳಸಿಕೊಳ್ಳಬೇಕು. ಎಂದು ಡಿ.ಜಿ.ಎಂ ಆಯುರ್ವೇದ ಮಹಾವಿದ್ಯಾಲಯದ ಉಪನ್ಯಾಸಕ ಡಾ. ಎಸ್.ಎನ್.ಬೆಳವಡಿ ಹೇಳಿದರು.
ಅವರು ಇಲ್ಲಿನ ಕೆ.ಎಸ್.ಎಸ್. ಪ್ರೌಢ ಶಾಲೆಯಲ್ಲಿ ಅಮೃತ ಕಾ ಆಜಾದಿ ಮಹೋತ್ಸವದ ಅಂಗವಾಗಿ ಗದಗ ಡಿ.ಜಿ.ಎಂ ಆಯುರ್ವೇದ ಮಹಾವಿದ್ಯಾಲಯ ಮತ್ತು ಆಸ್ಪತ್ರೆ, ಸ್ನಾತಕೋತ್ತರ ಸಂಶೋಧನಾ ಕೇಂದ್ರದ ವತಿಯಿಂದ ಸೋಮವಾರ ನಡೆದ ವಿದ್ಯಾರ್ಥಿಗಳ ಆರೋಗ್ಯ ತಪಾಸಣೆ, ಆಯುರ್ವೇದ ಸಸ್ಯಗಳ ಮಾಹಿತಿ ಮತ್ತು ಬಳಕೆ ವಿಧಾನ ಕುರಿತು ನಡೆದ ಕಾರ್ಯಕ್ರಮದಲ್ಲಿ ಉದ್ಘಾಟಿಸಿ ಮಾತನಾಡಿದರು.


ಡಾ. ಅಶ್ವಿನಿ ಸಜ್ಜನರ ಮಾತನಾಡಿ, ನಮ್ಮ ಸುತ್ತಮುತ್ತಲಿನ ಪರಿಸರ ಸ್ವಾಸ್ಥ್ಯವಾಗಿ ಇಟ್ಟುಕೊಳ್ಳಬೇಕು. ಸಾಂಕ್ರಾಮಿಕ ರೋಗ ಹರಡುವಿಕೆ ತಡೆಗೆÉ ವೈಯಕ್ತಿಕ ಶುಚಿತ್ವ ಕಾಪಾಡಿಕೊಳ್ಳಬೇಕು. ಎಂದರು. ನಂತರ ಆಯುರ್ವೇದ ಔಷಧ ಗುಣವುಳ್ಳ ಹತ್ತಾರು ಬಗೆಯ ಸಸ್ಯಗಳ ಪ್ರದರ್ಶನ ಹಾಗೂ ವಿದ್ಯಾರ್ಥಿಳ ಆರೋಗ್ಯ ತಪಾಸಣೆ ನಡೆಯಿತು.


ಈ ಸಂದರ್ಭದಲ್ಲಿ ಡಾ.ಎಂ.ಡಿ.ಸಮುದ್ರಿ, ಡಾ.ಕುಮಾರ ಚೌಡಪ್ಪನವರ, ಡಾ.ಯು.ವಿ.ಪುರದ, ಡಾ.ಮಮತಾ ಕಟಾವಕರ, ಪ್ರಾಚಾರ್ಯ ಡಿ.ವೈ.ಹುಡೆದ, ಶಿಕ್ಷಕರಾದ ಎಸ್.ವೈ.ಕುರಿ, ಎಸ್.ಎ.ಯಳವತ್ತಿ, ಜಿ.ಬಿ.ಮುಳಗುಂದ ಇದ್ದರು.

Leave a Reply

Your email address will not be published. Required fields are marked *

You May Also Like

ಕಣ್ಣಿಗೆ ಖಾರದ ಪುಡಿ ಎರಚಿ ರೌಡಿಶೀಟರ್ ಹತ್ಯೆ!

ಮಂಡ್ಯ : ಕಣ್ಣಿಗೆ ಖಾರದ ಪುಡಿ ಎರಚಿ ರೌಡಿ ಶೀಟರ್ ನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ.

ಲಾಟರಿಯಿಂದ ಕಾಂಗ್ರೆಸ್ ಬೆಂಬಲಿತರಿಗೆ ಒಲಿದು ಬಂದ ಕುರ್ಚಿ!

ಚಾಮರಾಜನಗರ – ತಾಲೂಕಿನ ಜ್ಯೋತಿಗೌಡನಪುರ ಗ್ರಾಪಂನ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳು ಕಾಂಗ್ರೆಸ್ ಬೆಂಬಲಿಗರಿಗೆ ಲಾಟರಿ ಮೂಲಕ ಒಲಿದು ಬಂದಿದೆ.

ದುಷ್ಕರ್ಮಿಗಳ ದುಷ್ಕೃತ್ಯಕ್ಕೆ ಕೈಸೇರಬೇಕಿದ್ದ ಲಕ್ಷಾಂತರ ಆದಾಯದ ಬೆಳೆ ನಾಶ ನಾಶ!

ರೈತರಿಗೆ ಭೂತಾಯಿಯೇ ಎಲ್ಲವೂ. ಆದರೆ ಭೂತಾಯಿಯನ್ನು ನಂಬಿ ಇನ್ನೇನು ಮೆಣಸಿನಕಾಯಿ, ಈರುಳ್ಳಿ ಬೆಳೆ ಕೈಸೇರುತ್ತೆ ಎನ್ನುವ ಲೆಕ್ಕಾಚಾರದಲ್ಲಿದ್ದ ಅನ್ನದಾತನಿಗೆ ಬುಧುವಾರದ ಬೆಳಕು ಆಘಾತದ ಸುದ್ದಿಯನ್ನು ಹೊತ್ತು ತಂದಿತ್ತು.

ಜನರು ಎಚ್ಚರ ತಪ್ಪಿದರೆ, ದೊಡ್ಡ ಅಪಾಯ ಸಂಭವಿಸಬಹುದು!!

ಜನರು ಎಚ್ಚರ ತಪ್ಪಿದರೆ, ದೊಡ್ಡ ಅಪಾಯ ಸಂಭವಿಸಬಹುದು!! ಬೆಂಗಳೂರು : ಕೊರೊನಾ ಲಾಕ್ ಡೌನ್ ನ್ನು…