ಗದಗ : ಜಿಲ್ಲೆಯಲ್ಲಿ ದಿನದ ಲೆಕ್ಕದಲ್ಲಿ ಪತ್ತೆಯಾಗುತ್ತಿರುವ ಕೋವಿಡ್-19 ಸೋಂಕಿನ ಪ್ರಕರಣಗಳು ನೂರರ ಗಡಿಯ ಆಸುಪಾಸಿನಲ್ಲೇ ಇದೆ. ಬುಧವಾರ ಮತ್ತೆ 100 ಮಂದಿಗೆ ಸೋಂಕು ದೃಢಪಟ್ಟಿದೆ. ಇದರಲ್ಲಿ 16 ಜನ 18 ವರ್ಷದೊಳಗಿನ ಮಕ್ಕಳಿದ್ದಾರೆ. ಜೊತೆಗೆ ಸೋಂಕಿಗೆ ಓರ್ವ ಮಹಿಳೆ ಸಾವನ್ನಪ್ಪಿದ್ದು, ಈ ಮೂಲಕ ಮೂರನೇ ಅಲೆಯ ಮೊದಲ ಸಾವು ಇದಾಗಿದೆ.

ಬುಧವಾರವರೆಗೆ ಗದಗ ಜಿಲ್ಲೆಯಲ್ಲಿ ನಿಗಾಕ್ಕೆ ಒಳಗಾದವರ ಒಟ್ಟು ಸಂಖ್ಯೆ : 658850. ಸೋಂಕಿನ ಪರೀಕ್ಷೆಗಾಗಿ ಸಂಗ್ರಹಿಸಿದ ಒಟ್ಟು ಮಾದರಿ : 710766. ನಕಾರಾತ್ಮಕವಾಗಿವೆ (ನೆಗೇಟಿವ್) ಎಂದು ವರದಿಯಾದ ಸಂಖ್ಯೆ : 685808. ಒಟ್ಟು ಕೊವಿಡ್-19 ಪಾಸಿಟಿವ್ ದೃಢಪಟ್ಟ ಪ್ರಕರಣಗಳು : 26958 (ಇಂದಿನ 100 ಸೇರಿ). ಈವರೆಗೆ ಕೋವಿಡ್ ನಿಂದ ಮೃತಪಟ್ಟವರು : 320 (ಇಂದಿನ 1 ಸೇರಿ). ಸೋಂಕಿನಿಂದ ಗುಣಮುಖರಾದವರು : ಒಟ್ಟು 25898 ಜನ (ಇಂದಿನ 36 ಸೇರಿ) ಸಕ್ರಿಯ ಪ್ರಕರಣಗಳು : 740

ತಾಲೂಕುವಾರು ಒಟ್ಟು ಸೋಂಕಿತರ ವಿವರ : ಗದಗ-53, ಮುಂಡರಗಿ-25, ನರಗುಂದ-00, ರೋಣ-17, ಶಿರಹಟ್ಟಿ-05, ಹೊರಜಿಲ್ಲೆಯ ಪ್ರಕರಣಗಳು-00

ಸೋಂಕಿತ ಮಹಿಳೆ ಸಾವು: ಗದಗ ರಾಜೀವ ಗಾಂಧೀ ನಗರದ ನಿವಾಸಿ 60 ವರ್ಷದ ಮಹಿಳೆ (ಪಿ-3368146) ಇವರು ನಗರದ ಖಾಸಗಿ ಆಸ್ಪತ್ರೆಯಲ್ಲಿ ಮಧುಮೇಹ ಹಾಗೂ ಅಧಿಕ ರಕ್ತದೊತ್ತಡ ಕಾಯಿಲೆ ಚಿಕಿತ್ಸೆಗಾಗಿ ದಾಖಲಾಗಿದ್ದರು. ನಂತರ ಇವರನ್ನು ಕೋವಿಡ್ ಸೋಂಕು ತಪಾಸಣೆಗೆ ಒಳಪಡಿಸಿದಾಗ ಸೋಂಕು ದೃಢಪಟ್ಟಿತ್ತು. ಇವರು ಬಹು ಅಂಗಾಂಗ ವೈಫಲ್ಯದಿಂದಾಗಿ ದಿ 18 01-2022 ರಂದು ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿರುತ್ತಾರೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Leave a Reply

Your email address will not be published. Required fields are marked *

You May Also Like

ಕೊರೊನಾ ಕಾರಣದಿಂದ ಅಭಿವೃದ್ಧಿ ಕಾರ್ಯಗಳಿಗೆ ಹಿನ್ನಡೆ- ಸಿ.ಸಿ.ಪಾಟೀಲ್

ಕೊರೋನಾದ ಪರಿಣಾಮದಿಂದ ಕಂಗಾಲಾದ ನಾವು ನೀವೆಲ್ಲರೂ ಇದೀಗ ಹೊರಗಡೆ ಬಂದಂತಾಗಿದೆ, ಸುಮಾರು ದಿನಗಳಿಂದ ಯಾವುದೇ ಅಭಿವೃದ್ಧಿ ಕಾಮಗಾರಿಗಳ ಪೂಜೆ ಮಾಡದೇ ಇರುವುದಕ್ಕೆ ಕಾರಣ ಈ ಮಹಾಮಾರಿ ಕರೋನ. ಇದರಿಂದ ದೇಶದ ಬೊಕ್ಕಸ, ರಾಜ್ಯದ ಬೊಕ್ಕಸ, ವ್ಯಾಪಾರಸ್ಥರಿಗೆ ಹಿನ್ನೆಡೆ ಮತ್ತು ಉದ್ಯಮಿಗಳಿಗೆ ಭಾರೀ ತೊಂದರೆ ಉಂಟಾಗಿದೆ ಎಂದು ಸಚಿವ ಸಿ.ಸಿ.ಪಾಟೀಲ್ ಹೇಳಿದರು.

ಸರ್ಕಾರದ ಮಾರ್ಗಸೂಚಿ ಬದುಕಿನ ಭಾಗವಾಗಬೇಕು: ಸುಧಾಕರ್

ಕೋವಿಡ್ ರೋಗಕ್ಕೆ ಲಸಿಕೆ ಸಿಗುವತನಕ ಸರ್ಕಾರ ಪ್ರಕಟಿಸಿರುವ ಮಾರ್ಗಸೂಚಿಗಳನ್ನು ಜನರು ಚಾಚೂ ತಪ್ಪದೆ ತಮ್ಮಬದುಕಿನ ಭಾಗವಾಗಿಸಿಕೊಳ್ಳಬೇಕು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಹೇಳಿದ್ದಾರೆ.

ಜ್ಞಾನಗಿರಿಯಲ್ಲಿ ಡಿ.5 ರಂದು ದಿವ್ಯ ದೀಫೋತ್ಸವ

ಸಮೀಪದ ನೀಲಗುಂದ ಗ್ರಾಮದ ಜ್ಞಾನಗಿರಿ ಗುದ್ನೇಶ್ವರ ಮಠದ ದಿವ್ಯ ಚೇತನ ಶಾಲಾ ಆವರಣದಲ್ಲಿ ಡಿ.5 ಶನಿವಾರ ಸಂಜೆ 2 ನೇ ವರ್ಷದ ದಿವ್ಯ ದೀಪೋತ್ಸವ ಕಾರ್ಯಕ್ರಮವನ್ನ ಆಯೋಜಿಸಲಾಗಿದೆ.

ಮನನೊಂದು ಆತ್ಮಹತ್ಯೆಗೆ ಯತ್ನಿಸಿದ ಬಿಗ್‌ಬಾಸ್ ಚೈತ್ರಾ

ಚೈತ್ರಾ ಮಾರ್ಚ್ 28 ರಂದು ಮಂಡ್ಯ ಮೂಲದ ನಾಗಾರ್ಜುನ್ ಎಂಬುವರೊAದಿಗೆ ಮದುವೆಯಾಗಿದ್ದರು. ಮದುವೆ ದಿನವೆ ವಿವಾದಕ್ಕೀಡಾಗಿದ್ದ ಚೈತ್ರಾ ಪೊಲೀಸ್ ಠಾಣೆಯ ಮಟ್ಟಿಲೇರಿದ್ದರು. ಮದುವೆ ವಿಚಾರವಾಗಿ ಮನನೊಂದ ನಟಿ, ಕವಯಿತ್ರಿ ಬಿಗ್ ಬಾಸ್ ಖ್ಯಾತಿಯ ಚೈತ್ರಾ ಕೋಟೂರ್ ಕೋಲಾರದ ಕುರುಬರ ಪೇಟೆ ಮನೆಯಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಅವರನ್ನು ಕೋಲಾರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.