ಉತ್ತರಪ್ರಭ ಸುದ್ದಿ
ಲಕ್ಷ್ಮೇಶ್ವರ:
ನಾಲ್ಕು ತಿಂಗಳಾದ್ಯಂತ ಹಗಲು ರಾತ್ರಿ ಎನ್ನದೆ ಕಷ್ಟ ಪಟ್ಟ ಬೆಳೆದ ಕಬ್ಬು ಬೆಳೆಗೆ ವಿದ್ಯುತ್ ಅವಘಡದಿಂದ ಸುಟ್ಟು ಕರಕಲಾದ ಘಟನೆ ಲಕ್ಷ್ಮೇಶ್ವರ ತಾಲೂಕಿನ ಆದರಹಳ್ಳಿ ಗ್ರಾಮದಲ್ಲಿ ನಡೆದಿದೆ.

ಆದರಹಳ್ಳಿ ಗ್ರಾಮದ ಶಂಕ್ರಪ್ಪ ಗಂಗಪ್ಪ ಲಮಾಣಿ ಸೇರಿದ್ದ ಜಮೀನಿನಲ್ಲಿ ಬೆಳೆಯಲಾದ 2.5 ಎಕರೆ ಪ್ರದೇಶದಲ್ಲಿ ಕಬ್ಬಿನ ಬೆಳೆಗೆ ವಿದ್ಯುತ್ ಅವಘಡದಿಂದ ಬೆಂಕಿ‌ ಬಿದ್ದ ಪರಿಣಾಮ ಕಬ್ಬು ಸುಟ್ಟು ಕರಕಲಾಗಿದೆ. ಪ್ರತಿ ಎಕರೆ 80 ಸಾವಿರ ರೂಪಾಯಿ ಖರ್ಚು ಮಾಡಿ 2.5 ಎಕರೆ ಪ್ರದೇಶದಲ್ಲಿ ಒಟ್ಟು 3,20,000 ವೆಚ್ಚದಲ್ಲಿ ಬೆಳೆಯಲಾದ ಪ್ರತಿ ಎಕರೆ ಪ್ರದೇಶಕ್ಕೆ 50ಟನ್ ಇಳುವರಿ ಮಟ್ಟಕ್ಕೆ ಬೆಳೆದಿತ್ತು. 3,70,000 ಮೌಲ್ಯ ಬೆಳೆ ಸುಟ್ಟು ಕರಕಲಾಗಿದೆ ಎಂದು ತಿಳಿದು ಬಂದಿದೆ. ಆಗೊಂದು ಈಗೊಂದು ಘಟನೆ ನಡೆದಾಗ ಹೋಗುವ ಅಗ್ನಿಶಾಮಕ ದಳದ ಸಿಬ್ಬಂದಿ ರೈತರು ಜಮೀನಿನಲ್ಲಿ ಬೆಂಕಿ ಕಾಣಿಸುತ್ತಿದ್ದಂತೆ ಕಚೇರಿಗೆ ಕರೆ ಮಾಡಿದರೆ, ಅಗ್ನಿಶಾಮಕದಳದ ಸಿಬ್ಬಂದಿ ಅಲ್ಲಿಗೆ ಬಂದರೆ ಚಾರ್ಜ ಅಗುತ್ತೆ ಎಂದು ತಾಸುಗಂಟಲೆ ಕಾದರು ರೈತರ ಹೊಲಕ್ಕೆ ಬಿದ್ದಿರುವ ಬೆಂಕಿಯನ್ನು ನಿಂದಿಸಲು ತಡವಾಗಿ ಬಂದರು. ಮತ್ತು ಸಂಬಂಧಿಸಿದ ಅಧಿಕಾರಿಗಳಿಗೆ ಕರೆ ಮಾಡಿದರೆ ಅವರಿಗೆ ಕೇಳಿ ಇವರಿಗೆ ಕೇಳಿ ಎಂದು ಉಡಾಫೆ ಮಾತುಗಳು ಆಡುತ್ತಿರುವುದು ಇದರಿಂದ ಗ್ರಾಮದ ರೈತರು ಅಧಿಕಾರಿಗಳಿಗೆ ಹಿಡಿಶಾಪ ಹಾಕಿದರು.

ಕಬ್ಬಿನ ಹೊಲದಲ್ಲಿ ಕಬ್ಬು ಅಷ್ಟೆ ಅಲ್ಲದೇ, ನೀರಾವರಿಗೆ ಬಳಿಸಲಾದ ಪೈಪ್ ಗಳು, ಕೋಳಿ ಪಾರ್ಮ ಕೂಡ ಇದ್ದು ನಾಲ್ಕು ಪೈಪ್ ಸುಟ್ಟು ಹೋಗಿವೆ, ಕೋಳಿ ಪಾರ್ಮ ಕೂಡ ಅರ್ಧದಷ್ಟು ಸುಟ್ಟಿದೆ.

ಇದಕ್ಕೆ ಎಲ್ಲಾ ಕಾರಣ ಕೆ.ಇ.ಬಿ. ಇಲಾಖೆಯ ನೀರಲಕ್ಷ್ಯ ಎಂದು ಹೇಳುತ್ತಾರೆ

-ರೈತ ಶಂಕ್ರಪ್ಪ ಲಮಾಣಿ

ತುಂಬಾ ಸಾಲ ಮಾಡಿ ಕಬ್ಬು ಬೆಳೆದಿದ್ವಿ, ಅದರಲ್ಲಿ ನಮ್ಮ ಬೆಳೆಗಳು ಕಟಾವಿಗೆ ಬಂದಿತ್ತು ಗಂಗಾಪೂರ ಸುಗರ್ ಪ್ಯಾಕ್ಟರಿ ವಿಜಯಪುರ ಅವರಿಗೆ ಅಗ್ರಿಮೆಂಟ್ ಆಗಿತ್ತು ಅವರು ಇವತ್ತು ನಾಳೆ ಎಂದು ಕಟಾವು ಮಾಡಿತ್ತೆವೆ ಎಂದು ನಮಗೆ ಹೇಳುತ್ತಾ ಬಂದಿದ್ದಾರೆ ಕರೆ ಮಾಡಿದ್ರೆ ಸ್ವೀಕರಸಲ್ಲ ಅಷ್ಟರಲ್ಲಿ ಹೀಗೆ ಆಗಿದೆ ನಮಗೆ ಸರ್ಕಾರ ಪರಿಹಾರ ಒದಗಿಸಿಕೊಡಬೇಕು.

-ಶಂಕ್ರಪ್ಪ ಲಮಾಣಿ, ರೈತ.

Leave a Reply

Your email address will not be published. Required fields are marked *

You May Also Like

ಗದಗ ಜಿಲ್ಲಾ ಪಂಚಾಯತ ಸಿಇಓ ಭರತ್ ಎಸ್ ವರ್ಗಾವಣೆ, ಮುಂದಿನ ಆದೇಶದವರೆಗು ಕಾರ್ಯನಿರ್ವಹಿಸಲು ಡಾ. ಸುಶೀಲಾ.ಬಿ ರವರಿಗೆ ಸರ್ಕಾರದ ಆದೇಶ

ಉತ್ತರಪ್ರಭಗದಗ: ಗದಗ ಜಿಲ್ಲಾ ಪಂಚಾಯತ್ತಿನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭರತ್ ಎಸ್ ಅವರನ್ನ ದಿ: 06.04.2022…

ಶಿರಹಟ್ಟಿ ತಾಲೂಕಿನಲ್ಲಿ ಗಣರಾಜ್ಯೋತ್ಸವ ಆಚರಣೆ ಬಗ್ಗೆ ತಹಶೀಲ್ದಾರ ನೀಡಿದ ಮಾಹಿತಿ

ಶಿರಹಟ್ಟಿ: ಪ್ರಸ್ತುತ ವರ್ಷದಲ್ಲಿ ಕೊರೊನಾ ನಿಯಮಾನುಸಾರ ಸರಳವಾಗಿ ಗಣರಾಜ್ಯೋತ್ಸವ ಆಚರಣೆ ಮಾಡಲಾಗುತ್ತದೆ ಎಂದು ತಹಶೀಲ್ದಾರ ಯಲ್ಲಪ್ಪ…

ಚಿಲಝರಿ ಗ್ರಾಮದಲ್ಲಿ ಸಾಮೂಹಿಕ ವಿವಾಹ

ಸಾಮೂಹಿಕ ವಿವಾಹಗಳು ಸಮಾಜದಲ್ಲಿ ಸೌಹಾರ್ದತೆ ಗಟ್ಟಿಗೊಳಿಸಿ ಮಾನವೀಯ ಮೌಲ್ಯಗಳು ವೃದ್ದಿಸುತ್ತವೆ ಈ ನಿಟ್ಟಿನಲ್ಲಿ ದುಂದುವೆಚ್ಚಕ್ಕೆ ಕಡಿವಾಣ ಹಾಕಿ ಸಾಮೂಹಿಕ ವಿವಾಹಗಳಿಗೆ ಒತ್ತು ನೀಡಿ ಸ್ವಾಸ್ಥ್ಯೇಯ ಸಮಾಜ ನಿರ್ಮಾಣಕ್ಕೆ ಮುಂದಾಗಿ ಎಂದು ಅಕ್ಕನ ಬಳಗ ಅಧ್ಯಕ್ಷೆ ಸಂಯುಕ್ತಾ ಬಂಡಿ ಹೇಳಿದರು.

ಗಜೇಂದ್ರಗಡ ಮಾರುಕಟ್ಟೆಯಲ್ಲಿ ಜಮಜಂಗುಳಿ: ಕೋವಿಡ್ ಗೆ ಕ್ಯಾರೆ ಇಲ್ಲ..!

ಕೋವಿಡ್ 2ನೇ ಅಲೆಯ ಅಬ್ಬರ ದಿನದಿಂದ ದಿನಕ್ಕೆ ಏರುಗತಿಯಲ್ಲಿ ಸಾಗುತ್ತಿದೆ. ಆದರೆ ಕೋಟೆ ನಾಡಿನಲ್ಲಿ ಯಾವುದೇ ಮುಂಜಾಗ್ರತಾ ತೆಗೆದುಕೊಳ್ಳದೇ ಸಾರ್ವಜನಿಕರು ಗುಂಪು ಗುಂಪಾಗಿ ಮೈಮರೆತು ಓಡಾಡುತ್ತಿರುವ ದೃಶ್ಯ ಮಂಗಳವಾರ ಕಂಡು ಬಂದಿತು.