ಗದಗ:ಸಾಲಕ್ಕೆ ಹೆದರಿ ಗದಗ ತಾಲೂಕಿನ ಬೆಳದಡಿ ತಾಂಡಾದ ರೈತ ವೆಂಕಟೇಶ ಶಿವಪ್ಪ ಚವ್ಹಾಣ ವಯಸ್ಸು:32 ಆತ್ಮಹತ್ಯೆಗೆ ಯತ್ನ ಹುಬ್ಬಳ್ಳಿಯ ಕೆ ಎಮ್ ಸಿ ಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಇಂದು ಸಾವು. ವೆಂಕಟೇಶ ಶಿವಪ್ಪ ಚವ್ಹಾಣ 3ಎಕರೆ ಹೊಲವನ್ನು ಹೊಂದಿದ್ದು, ಬ್ಯಾಂಕಿನಲ್ಲಿ ಸೇರಿದಂತೆ ವಿವಿಧ ಕಡೆ ಹೊಲಕ್ಕಾಗಿ ಸಾಲವನ್ನು ಮಾಡಿದ್ದು ಹೊಲದಲ್ಲಿ ಸರಿಯಾಗಿ ಬೆಳೆ ಬರದ ಕಾರಣ ಸಾಲ ತೀರಿಸೋದು ಹೇಗೆ? ಎಂಬ ಚಿಂತೆಯಿಂದ ದಿನಾಂಕ:21.01.2022ರಂದು ತನ್ನ ಹೊಲದಲ್ಲಿ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ. ತಕ್ಷಣ ಕುಟುಂಬಸ್ಥರು ಗದಗನ ಜಿಲ್ಲಾ ಆಸ್ಪತ್ರೆಗೆ ದಾಖಲ ಮಾಡಲಾಗಿತ್ತು ಹೆಚ್ಚಿನ ಚಿಕಿತ್ಸೆಗಾಗಿ ಗದಗ ಚಿರಾಯು ಆಸ್ಪತ್ರೆಗೆ ದಾಖಲಾಗಿದ್ದರು ವೈದ್ಯರ ಸಲಹೆ ಮೇರೆಗೆ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು ಆದರೆ ಇಂದು ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.

ಸಾವನ್ನಪ್ಪಿದ ರೈತ ವೆಂಕಟೇಶ ಶಿವಪ್ಪ ಚವ್ಹಾಣ


ಸಾವನ್ನಪ್ಪಿದ ರೈತನಿಗೆ ಚಿಕ್ಕ ಚಿಕ್ಕ ಮಕ್ಕಳಿದ್ದು ಅದರಲ್ಲಿ ಮೂವರ ಹೆಣ್ಣುಮಕ್ಕಳು ಮತ್ತು ಒರ್ವ್ ಪುತ್ರನಿದ್ದು ಅತಿ ಕಡುಬಡತನದಿಂದ ಜೀವನ ಸಾಗಿಸುತ್ತಿದ್ದ ಕುಟುಂಬ. ಕುಟುಂದ ಆಧಾರ ಸ್ಥಂಭವಾಗಿದ್ದ ರೈತ ವೆಂಕಟೇಶನನ್ನು ಕಳೆದುಕೊಂಡ ಕುಟುಂಬ ವರ್ಗದ ಆಕ್ರಂದನ ಮುಗಿಲು ಮುಟ್ಟಿದೆ. ಅದರಲ್ಲಿ ಚಿಕ್ಕ ಮಕ್ಕಳು ಅಪ್ಪನನ್ನು ನೆನೆದು ಅಳುತ್ತಿರುವ ದ್ರಶ್ಯ ಎಲ್ಲರ ಮನಕಲಕುವಂತೆ ಮಾಡಿದೆ.
ಈ ಕುರಿತು ಗದಗ ಗ್ರಾಮೀಣ ಪೋಲಿಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಹೆಚ್ಚಿನ ತನಿಖೆಯನ್ನು ಪೋಲಿಸರು ನಡೆಸುತ್ತಿದ್ದಾರೆ.

Leave a Reply

Your email address will not be published. Required fields are marked *

You May Also Like

ಕೆಂಪುರಾಜನಿಗೆ ಡಿಮ್ಯಾಂಡಪ್ಪೂ..ಡಿಮ್ಯಾಂಡು! ಬೆಳೆ ಇತ್ತು ಬೆಲೆ ಇರಲಿಲ್ಲ, ಈಗ ಬೆಳೆ ಇಲ್ಲ ಬೆಲೆ ಇದೆ…!

ಸುರೇಶ್ ಎಸ್.ಲಮಾಣಿ ಲಕ್ಷ್ಮೇಶ್ವರ: ಅತಿವೃಷ್ಟಿ ಮತ್ತು ಅನಾವೃಷ್ಟಿ ರೈತರ ಬದುಕಿನೊಂದಿಗೆ ಚೆಲ್ಲಾಟವಾಡುತ್ತಿದೆ. ಜೀವನದುದ್ದಕ್ಕೂ ಕಂಬದ ಪೆಟ್ಟು…

ಬೈಕ ಕಳ್ಳನನ್ನು ಬಂದನ ಮಾಡಿದ ಪೊಲೀಸರು

ಲಕ್ಷ್ಮೇಶ್ವರ.ಬೈಕ್ ಕಳ್ಳನನ್ನು ಪತ್ತೆ ಹಚ್ಚುವಲ್ಲಿ ಲಕ್ಷ್ಮೇಶ್ವರ ಪೊಲೀಸ್ ಠಾಣೆಯ ಠಾಣೆ ಪೊಲೀಸರು ಯಶಸ್ಸಿಯಾಗಿದ್ದಾರೆ.ನಾಲ್ಕು ಬೈಕಗಳನ್ನು ಕಳ್ಳತನ…

ಟೀಕಾಕಾರರಿಗೆ ಉತ್ತರ ಸಿಕ್ಕಿದೆ ಎಂದು ಭಾವಿಸುತ್ತೇನೆ: ಕೆ.ಸುಧಾಕರ್

ನಮ್ಮ ಬಗ್ಗೆ ವ್ಯಂಗ್ಯದ ಮಾತುಗಳನ್ನು ಆಡಿದ್ದವರಿಗೆ ಕ್ರಿಯಾಶೀಲ ಕಾರ್ಯ ಚಟುವಟಿಕೆಗಳ ಮೂಲಕ ಪ್ರತ್ಯುತ್ತರ ನೀಡಿದ್ದೇವೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ ಕೆ ಸುಧಾಕರ್ ಹೇಳಿದ್ದಾರೆ. ಎಂಟು ತಿಂಗಳ ರಾಜಕೀಯ ಗ್ರಹಣದ ಬಳಿಕ ಸಚಿವರಾದ ನಮ್ಮನ್ನು ಪ್ರತಿಪಕ್ಷದ ಕೆಲವರು ಲೇವಡಿ ಮಾಡಿದ್ದರು. ಇವರು ಏನು ಮಾಡುತ್ತಾರೋ ನಾವು ನೋಡುತ್ತೇವೆ ಎಂದು ಟೀಕೆಗಳ ಸುರಿಮಳೆ ಗೈದಿದ್ದರು. ಈಗ ಅವರಿಗೆಲ್ಲ ಉತ್ತರ ಸಿಕ್ಕಿರಬೇಕು ಎಂದು ಭಾವಿಸಿದ್ದೇನೆ ಎಂದರು.

ಲಾಕ್ ಡೌನ್ ವಿಸ್ತರಣೆ ಬಗ್ಗೆ ಗೃಹ ಸಚಿವರು ಹೇಳಿದ್ದೇನು?

ಬೆಂಗಳೂರು: ಇನ್ನು ಲಾಕ್ಡೌನ್ ವಿಸ್ತರಣೆ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, ಪರಿಸ್ಥಿತಿ ನೋಡಿಕೊಂಡು ಈ ಕುರಿತಾಗಿ ನಿರ್ಧಾರ ಕೈಗೊಳ್ಳುವುದಾಗಿ ತಿಳಿಸಿದರು.