ಉತ್ತರಪ್ರಭ ಸುದ್ದಿ

ಕೊಪ್ಪಳ: ಅಂತಿಮ ವರ್ಷದ ವೈದ್ಯಕೀಯ ವಿದ್ಯಾರ್ಥಿಗಳಿಗೆ ಒಂದು ವರ್ಷ ಪಠ್ಯಕ್ರಮಗಳು ನಡೆಯಬೇಕಿತ್ತು. ಆದರೆ ಕೋವಿಡ್ ಹಿನ್ನೆಲೆ ಅವರಿಗೆ ಕೇವಲ ಏಳು ತಿಂಗಳುಗಳಷ್ಟೇ ತರಗತಿಗಳು ನಡೆದಿವೆ. ಒಂದೆಡೆ ಸಂಪೂರ್ಣವಾಗಿ ತರಗತಿಗಳು ನಡೆಯದ ಕಾರಣ ಪಠ್ಯಕ್ರಮ ಪೂರ್ಣಗೊಂಡಿಲ್ಲ. ಅವಶ್ಯಕ ಕ್ಲಿನಿಕಲ್ ಪೋಸ್ಟಿಂಗ್ ನಡೆದಿಲ್ಲ. ಅಲ್ಲದೇ ಈ ವಿದ್ಯಾರ್ಥಿಗಳು ಕೋವಿಡ್ 2ನೇ ಅಲೆಯ ಸಂದರ್ಭದಲ್ಲಿ ಕೋವಿಡ್ ಸೋಂಕಿತರಿಗೆ ಚಿಕಿತ್ಸೆ ನೀಡಿ ಸೇವೆ ಸಲ್ಲಿಸಿದ್ದಾರೆ. ಪ್ರಸ್ತುತ ಓಮೈಕ್ರಾನ್ ಸೋಂಕಿತರ ಸಂಖ್ಯೆ ತೀವ್ರಗತಿಯಲ್ಲಿ ಏರುತ್ತಿದೆ.

ಆದರೆ ಇದ್ಯಾವುದನ್ನು ಪರಿಗಣಿಸದ RGUHS ಇದೇ ಫೆಬ್ರವರಿ 22 ರಿಂದ ಪರೀಕ್ಷಾ ವೇಳಾಪಟ್ಟಿಯನ್ನು ಪ್ರಕಟಿಸಿರುವುದು ಅತ್ಯಂತ ಅಮಾನವೀಯ. ಇದು ಅಂತಿಮ ವರ್ಷದ ವೈದ್ಯಕೀಯ ವಿದ್ಯಾರ್ಥಿಗಳಲ್ಲಿ ಆತಂಕ ಮೂಡಿಸಿದ್ದು, ತೀವ್ರವಾದ ಒತ್ತಡಕ್ಕೊಳಗಾಗಿ ಭವಿಷ್ಯದ ಬಗ್ಗೆ ಆತಂಕಕ್ಕೀಡಾಗಿದ್ದಾರೆ. ಹಾಗಾಗಿ AIDSO ವಿದ್ಯಾರ್ಥಿ ಸಂಘಟನೆಯಿಂದ ರಾಜ್ಯದಾದ್ಯಂತ ಮೆಡಿಕಲ್ ವಿದ್ಯಾರ್ಥಿಗಳ ನಡುವೆ ಗೂಗಲ್ ಫಾರ್ಮ್ ಮೂಲಕ ಸರ್ವೆ ಮಾಡಲಾಗಿದೆ. ಸರ್ವೇ ಯಲ್ಲಿ 4500 ವಿದ್ಯಾರ್ಥಿಗಳು ಪಾಲ್ಗೊಂಡಿದ್ದು, ಈ ಪ್ರಕಾರ ಶೇಕಡಾ 95ರಷ್ಟು ವಿದ್ಯಾರ್ಥಿಗಳು ಪರೀಕ್ಷೆಗಳನ್ನು ಮುಂದೂಡಬೇಕೆಂದು ಆಗ್ರಹಿಸಿದ್ದಾರೆ. ಈ ಹಿನ್ನೆಲೆ ಆರೋಗ್ಯ ವ್ಯವಸ್ಥೆಗೆ ಬೆನ್ನೆಲುಬಾಗಿರುವ ವೈದ್ಯಕೀಯ ವಿದ್ಯಾರ್ಥಿಗಳ ಭವಿಷ್ಯದ ಕಾಳಜಿಯೊಂದಿಗೆ RGUHS ಅಂತಿಮ ವರ್ಷದ ಪರೀಕ್ಷೆಗೆ ಅಚ್ಚುಕಟ್ಟಾಗಿ ತಯಾರಾಗಲು ಅಗತ್ಯವಿರುವಷ್ಟು ಕಾಲಾವಕಾಶ ಒದಗಿಸಿ, ನಂತರದಲ್ಲಿ ಪರೀಕ್ಷೆಯ ವೇಳಾಪಟ್ಟಿಯನ್ನು ನಿಗದಿಪಡಿಸಬೇಕೆಂದು AIDSO ಈ ಮೂಲಕ ಆಗ್ರಹಿಸುತ್ತದೆ.

Leave a Reply

Your email address will not be published. Required fields are marked *

You May Also Like

ಹುಚ್ಚ ವೆಂಕಟ್ ಗೆ ಸಹಾಯ ಹಸ್ತ ಚಾಚಿದ ಕಿಚ್ಚ ಸುದೀಪ್..!

ಬೆಂಗಳೂರು: ಹುಚ್ಚ ವೆಂಕಟ್ ಮಾನಸಿಕ ಸಮತೋಲನ ಕಳೆದುಕೊಂಡ ಕಾರಣ ರಸ್ತೆಯಲ್ಲಿ ಬಾಯಿಗೆ ಬಂದಂತೆ ಮಾತನಾಡಿ ಓಡಾಡುತ್ತಿದ್ದಾರೆ.…

ಕ್ವಾರಂಟೈನ್ ನಲ್ಲಿದ್ದ ವ್ಯಕ್ತಿ ಆತ್ಮಹತ್ಯೆಗೆ ಶರಣು!

ಬೀದರ್: ಕ್ವಾರಂಟೈನ್ ನಲ್ಲಿದ್ದ ಯುವಕನೊಬ್ಬ ಇಂದು ಬೆಳಗ್ಗಿನ ಜಾವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಔರಾದ್…

ನರೇಗಲ್ಲ್ ನಲ್ಲಿ ಸಹಾಯಧನ ಬಾರದೆ ಅರ್ಧಕ್ಕೆ ನಿಂತ ಮನೆಗಳು!

ನರೇಗಲ್‌: ಪಟ್ಟಣ ಪಂಚಾಯತಿ ವ್ಯಾಪ್ತಿಯಲ್ಲಿ ವಿವಿಧ ಯೋಜನೆಯ ಅಡಿಯಲ್ಲಿ 2013/14,2017/18, ಹಾಗೂ 2018/19 ಪಿ.ಎಮ್.ವೈ ಪ್ರಧಾನ ಮಂತ್ರಿ ಆವಾಸ್ ಯೋಜನೆ, ವಾಜಪೇಯಿ ವಸತಿ ಯೋಜನೆ, ಅಂಬೇಡ್ಕರ್ ಆವಾಸ್ ಯೋಜನೆ, ಅಡಿಯಲ್ಲಿ ಐದು ನೂರಕ್ಕೂ ಹೆಚ್ಚು ಫಲಾನುಭವಿಗಳು ಆಯ್ಕೆ ಆಗಿದ್ದು ಹಲವು ವರ್ಷಗಳು ಕಳೆದರು ಯಾವುದೇ ಫಲಾನುಭವಿಗಳಿಗೆ ಸಂಪೂರ್ಣ ಸಹಾಯಧನ ಬಂದಿಲ್ಲ. ಇದರಲ್ಲಿ ಅರ್ಧ ಮನೆಗಳು ಕಟ್ಟಡ ಸಂಪೂರ್ಣ ಮುಗಿದಿದ್ದು ಇನ್ನುಳಿದ ಮನೆಗಳು ಅರ್ಧಕ್ಕೆ ನಿಂತಿವೆ. ಸೂರು ಇಲ್ಲದವರಿಗೆ ಸೂರು ಒದಗಿಸಲು ಅರ್ಜಿ ಆಹ್ವಾನ ಮಾಡಿದ್ದು ಅದರಂತೆ ಅರ್ಜಿಯನ್ನು ಹಾಕಿದ ಫಲಾನುಭವಿಗಳಿಗೆ ಒಂದೊ-ಎರಡು ಕಂತು ಹಣ ಬಂದಿದ್ದು ಇನ್ನುಳಿದ ಕಂತುಗಳ ಸಹಾಯಧನ ಬಾರದೆ ಅರ್ಧಕ್ಕೆ ನಿಂತ ಮನೆಗಳ ಫಲಾನುಭವಿಗಳ ಗೋಳು ಕೇಳೋರು ಯಾರು? ಎನ್ನುವಂತಾಗಿದೆ.

ಗ್ರಾ.ಪಂ. ಚುನಾವಣೆ ಮುಂದೂಡಿಕೆ: ಸಿದ್ದರಾಮಯ್ಯ ಅಸಮಾಧಾನ

ಬೆಂಗಳೂರು: ಗ್ರಾಮಪಂಚಾಯತ್ಗಳ ಚುನಾವಣೆಯನ್ನು ರಾಜ್ಯ ಚುನಾವಣಾ ಆಯೋಗ ಮುಂದೂಡಿರುವುದು ಕರ್ನಾಟಕ ಪಂಚಾಯತ್ ರಾಜ್ ಕಾಯ್ದೆ 1993ಕ್ಕೆ…