ಉತ್ತರಪ್ರಭ ಸುದ್ದಿ

ಕೊಪ್ಪಳ: ಅಂತಿಮ ವರ್ಷದ ವೈದ್ಯಕೀಯ ವಿದ್ಯಾರ್ಥಿಗಳಿಗೆ ಒಂದು ವರ್ಷ ಪಠ್ಯಕ್ರಮಗಳು ನಡೆಯಬೇಕಿತ್ತು. ಆದರೆ ಕೋವಿಡ್ ಹಿನ್ನೆಲೆ ಅವರಿಗೆ ಕೇವಲ ಏಳು ತಿಂಗಳುಗಳಷ್ಟೇ ತರಗತಿಗಳು ನಡೆದಿವೆ. ಒಂದೆಡೆ ಸಂಪೂರ್ಣವಾಗಿ ತರಗತಿಗಳು ನಡೆಯದ ಕಾರಣ ಪಠ್ಯಕ್ರಮ ಪೂರ್ಣಗೊಂಡಿಲ್ಲ. ಅವಶ್ಯಕ ಕ್ಲಿನಿಕಲ್ ಪೋಸ್ಟಿಂಗ್ ನಡೆದಿಲ್ಲ. ಅಲ್ಲದೇ ಈ ವಿದ್ಯಾರ್ಥಿಗಳು ಕೋವಿಡ್ 2ನೇ ಅಲೆಯ ಸಂದರ್ಭದಲ್ಲಿ ಕೋವಿಡ್ ಸೋಂಕಿತರಿಗೆ ಚಿಕಿತ್ಸೆ ನೀಡಿ ಸೇವೆ ಸಲ್ಲಿಸಿದ್ದಾರೆ. ಪ್ರಸ್ತುತ ಓಮೈಕ್ರಾನ್ ಸೋಂಕಿತರ ಸಂಖ್ಯೆ ತೀವ್ರಗತಿಯಲ್ಲಿ ಏರುತ್ತಿದೆ.

ಆದರೆ ಇದ್ಯಾವುದನ್ನು ಪರಿಗಣಿಸದ RGUHS ಇದೇ ಫೆಬ್ರವರಿ 22 ರಿಂದ ಪರೀಕ್ಷಾ ವೇಳಾಪಟ್ಟಿಯನ್ನು ಪ್ರಕಟಿಸಿರುವುದು ಅತ್ಯಂತ ಅಮಾನವೀಯ. ಇದು ಅಂತಿಮ ವರ್ಷದ ವೈದ್ಯಕೀಯ ವಿದ್ಯಾರ್ಥಿಗಳಲ್ಲಿ ಆತಂಕ ಮೂಡಿಸಿದ್ದು, ತೀವ್ರವಾದ ಒತ್ತಡಕ್ಕೊಳಗಾಗಿ ಭವಿಷ್ಯದ ಬಗ್ಗೆ ಆತಂಕಕ್ಕೀಡಾಗಿದ್ದಾರೆ. ಹಾಗಾಗಿ AIDSO ವಿದ್ಯಾರ್ಥಿ ಸಂಘಟನೆಯಿಂದ ರಾಜ್ಯದಾದ್ಯಂತ ಮೆಡಿಕಲ್ ವಿದ್ಯಾರ್ಥಿಗಳ ನಡುವೆ ಗೂಗಲ್ ಫಾರ್ಮ್ ಮೂಲಕ ಸರ್ವೆ ಮಾಡಲಾಗಿದೆ. ಸರ್ವೇ ಯಲ್ಲಿ 4500 ವಿದ್ಯಾರ್ಥಿಗಳು ಪಾಲ್ಗೊಂಡಿದ್ದು, ಈ ಪ್ರಕಾರ ಶೇಕಡಾ 95ರಷ್ಟು ವಿದ್ಯಾರ್ಥಿಗಳು ಪರೀಕ್ಷೆಗಳನ್ನು ಮುಂದೂಡಬೇಕೆಂದು ಆಗ್ರಹಿಸಿದ್ದಾರೆ. ಈ ಹಿನ್ನೆಲೆ ಆರೋಗ್ಯ ವ್ಯವಸ್ಥೆಗೆ ಬೆನ್ನೆಲುಬಾಗಿರುವ ವೈದ್ಯಕೀಯ ವಿದ್ಯಾರ್ಥಿಗಳ ಭವಿಷ್ಯದ ಕಾಳಜಿಯೊಂದಿಗೆ RGUHS ಅಂತಿಮ ವರ್ಷದ ಪರೀಕ್ಷೆಗೆ ಅಚ್ಚುಕಟ್ಟಾಗಿ ತಯಾರಾಗಲು ಅಗತ್ಯವಿರುವಷ್ಟು ಕಾಲಾವಕಾಶ ಒದಗಿಸಿ, ನಂತರದಲ್ಲಿ ಪರೀಕ್ಷೆಯ ವೇಳಾಪಟ್ಟಿಯನ್ನು ನಿಗದಿಪಡಿಸಬೇಕೆಂದು AIDSO ಈ ಮೂಲಕ ಆಗ್ರಹಿಸುತ್ತದೆ.

Leave a Reply

Your email address will not be published. Required fields are marked *

You May Also Like

ಸ್ವಾಮೀಜಿಯನ್ನು ಮನಸೋ ಇಚ್ಛೆ ಥಳಿಸಿದ ಪೊಲೀಸ್ ಪೇದೆ!

ಸ್ವಾಮೀಜಿಯೊಬ್ಬರಿಗೆ ಪೊಲೀಸ್ ಪೇದೆ ಥಳಿಸಿರುವ ಘಟನೆ ಅಫಜಲ್ ಪುರ ತಾಲೂಕಿನ ಅರ್ಜುಣಗಿ ತಾಂಡಾ ಚೆಕ್ ಪೋಸ್ಟ್ ಬಳಿ ನಡೆದಿದೆ.

ವಚನ ಸಾಹಿತ್ಯಕ್ಕಾಗಿ ಬೆಂದ ಜೀವ ಹಳಕಟ್ಟಿ ಶಾಸಕ ಎ.ಎಸ್.ಪಾಟೀಲ ನಡಹಳ್ಳಿ ಅಭಿಮತ

ಸಚಿತ್ರ ವರದಿ ಗುಲಾಬಚಂದ ಜಾಧವಆಲಮಟ್ಟಿ : ವಚನ ಸಾರ ಜಗತ್ತಿನಾದ್ಯಂತ ಫಸರಿಸಿದ ಡಾ.ಫ.ಗು.ಹಳಕಟ್ಟಿ ವಚನ ಸಾಹಿತ್ಯದ…

ಹೆಚ್ಚಿನ ದರದಲ್ಲಿ ಗೊಬ್ಬರ ಮಾರಾಟ: ಗದಗ ಜಿಲ್ಲೆಯ ಕೃಷಿ ಪರಿಕರ ಮಾರಾಟ ಮಳಿಗೆಗಳ ಪರವಾನಿಗೆ ಅಮಾನತು

ಕೃಷಿ ಪರಿಕರಗಳ ಮಾರಾಟ ಮಳಿಗೆಗಳಿಗೆ ಅನಿರೀಕ್ಷಿತ ಭೇಟಿ ನೀಡಿ ಪರಿಶೀಲಿಸಲಾಗಿ ಹೆಚ್ಚಿನ ದರಕ್ಕೆ ಯೂರಿಯಾ ರಸಗೊಬ್ಬರ ಮಾರಾಟ ಮಾಡಿರುವುದು ದೃಢಪಟ್ಟಿರುತ್ತದೆ.
ಹೂವಿನ ಹಡಗಲಿ: ಬಳ್ಳಾರಿ ಜಿಲ್ಲೆಯ ಹೂನಿನ ಹಡಗಲಿ ತಾಲೂಕಿನಲ್ಲಿ ಪರೀಕ್ಷೆ ಸುಸೂತ್ರವಾಗಿ ನಡೆದಿದ್ದು, ಒಟ್ಟು 9…