ವರದಿ:ವಿಠ್ಠಲ ಕೇಳುತ್

ಮಸ್ಕಿ: ಜಾತ್ಯತೀತ, ಸಮಾನತೆಯ ಸಮಾಜ ನಿರ್ಮಾಣ ಗಣರಾಜ್ಯದ ಆಶಯವಾಗಿದ್ದು, ಇದನ್ನು ಸಕಾರಗೊಳಿಸುವ ಜವಬ್ದಾರಿ ರಾಷ್ಟ್ರದ ಪ್ರತಿಯೊಬ್ಬ ಪ್ರಜೆಯ ಮೇಲಿದೆ ಎಂದು ಶಾಸಕ ಆರ್.‌ಬಸನಗೌಡ ತುರವಿಹಾಳ ಅವರು ಹೇಳಿದರು.
ಪಟ್ಟಣದ ಕೇಂದ್ರ ಶಾಲೆ ಆವರಣದಲ್ಲಿ‌ ನಡೆದ 73ನೇ ಗಣರಾಜ್ಯೋತ್ಸವ ದ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು,ಭಾರತ ದೇಶ ಸಂಯುಕ್ತ ರಾಜ್ಯಗಳ ಒಕ್ಕೂಟವಾಗಿದ್ದು, 1950 ಜನೆವರಿ 26ರಂದು ಜಾರಿಗೆ ತಂದ ಸಂವಿಧಾನ ಎಂಬ ಭದ್ರ ತಳಹದಿಯ ಮೇಲೆ ನಿಂತಿದೆ.ಸಂವಿಧಾನದ ಆಶಯಗಳನ್ನು ಕಾಪಾಡುವುದು ಪ್ರತಿಯೊಬ್ಬ ಪ್ರಜೆಯ ಮೂಲಭೂತ ಕರ್ತವ್ಯವಾಗಿದೆ ಎಂದರು.


ಡಾ. ಬಿ.ಆರ್ ಅಂಬೇಡ್ಕರ್ ಅವರ ನೇತೃತ್ವದ ಸಮಿತಿ ರಚಿಸಿದ ನಮ್ಮ ದೇಶದ ಸಂವಿಧಾನವನ್ನು ಸ್ಮರಿಸುವ ದಿನವಾಗಿದೆ. ಸಂವಿಧಾನದ ಸಮಗ್ರತೆಯನ್ನು ಎತ್ತಿ ಹಿಡಿಯುವ ಮೂಲಕ ಈ ದಿನದ ಗಣರಾಜ್ಯೋತ್ಸವನ್ನು ಆಚರಿಸೋಣ ಎಂದರು.
ಈ ಸಂದರ್ಭದಲ್ಲಿ ತಹಶೀಲ್ದಾರ್ ಕವಿತಾ.ಕೆ.ಆರ್. ಸಿಪಿಐ ಸಂಜೀವ್ ಬಳಿಗಾರ, ತಾಪಂ ಇಒ ಬಾಬು ರಾಠೋಡ್, ಪುರಸಭೆ ಮುಖ್ಯಾಧಿಕಾರಿ ಹನುಮಂತಮ್ಮ ನಾಯಕ, ಮುಖಂಡ ಶ್ರೀಶೈಲಪ್ಪ ಬ್ಯಾಳಿ, ಹೆಚ್. ಬಿ ಮುರಾರಿ, ಎಂ. ಅಮರೇಶ, ಬಿ.ಹೆಚ್ ದಿವಟರ್ ಸೇರಿದಂತೆ ಇನ್ನಿತರ ಗಣ್ಯರು ಇದ್ದರು.

Leave a Reply

Your email address will not be published. Required fields are marked *

You May Also Like

ವಿವಾದಕ್ಕೆ ಗುರಿಯಾದ ಪೊಗರು ಚಿತ್ರ

ರಾಜ್ಯಾದ್ಯಂತ ಯಶಸ್ವಿ ಪ್ರದರ್ಶನ ಕಾಣುತ್ತಿರುವ ಧ್ರುವ ಸರ್ಜಾ ಅಭಿನಯದ ಪೊಗರು ಚಿತ್ರ ವಿವಾದವೊಂದಕ್ಕೆ ಗುರಿಯಾಗಿದೆ.

ಸೇವಾಭಾಯಾ ಮಾಲಾಧಾರಿತ ಬಂಜಾರಾ ಪಡೆ ಭಾಯಾಗಡದತ್ತ ಪಯಣ

ಆಲಮಟ್ಟಿ : ಸಂತ ಸೇವಾಲಾಲ್ ಜನ್ಮಸ್ಥಳ ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲೂಕಿನ ಪುರಾತನ ಐತಿಹ್ಯವುಳ್ಳ ಧಾಮಿ೯ಕ…

ನಾಡಬಾಂಬ್‌ ; ಹಸುವಿನ ಬಾಯಿ ಛಿದ್ರ

ಜಮೀನಿನಲ್ಲಿ ಮೇಯುತ್ತಿದ್ದ ಸೀಮೆ ಹಸುವೊಂದು ನಾಡಬಾಂಬ್‌ ಜಿಗಿದ ಪರಿಣಾಮ ಅದರ ಬಾಯಿ ಛಿದ್ರಗೊಂಡಿರುವ ಘಟನೆ ತಾಲ್ಲೂಕಿನ ಕೆಬ್ಬಳ್ಳಿ ಗ್ರಾಮದಲ್ಲಿ ಭಾನುವಾರ ನಡೆದಿದೆ.

ಗೂಗಲ್ ನಿಂದ ನೀವು ಹಣ ಸಂಪಾದನೆ ಮಾಡಬಹುದು

ಗೂಗಲ್​ ಕಂಪನಿ ಟಾಸ್ಕ್​ ಮೇಟ್​ ಎಂಬ ಅಪ್ಲಿಕೇಶನ್​ ಒಂದರ ಟೆಸ್ಟಿಂಗ್​ ನಡೆಸುತ್ತಿದೆ. ಇದರ ಸಹಾಯದಿಂದ ಬಳಕೆದಾರರು ಹಣ ಸಂಪಾದನೆ ಮಾಡಬಹುದಾಗಿದೆ.