ವರದಿ: ವಿಠಲ ಕೆಳೂತ್


ಮಸ್ಕಿ:
ಲಿಂಗಸ್ಗೂರು-ಮಸ್ಕಿ ‌ರಾಷ್ಟ್ರೀಯ ಹೆದ್ದಾರಿಯಲ್ಲಿ ಬಿದ್ದಿರುವ ತಗ್ಗು ಗುಂಡಿಗಳಿಗೆ ಬಿದ್ದು ವಾಹನ ಸವಾರರು ನರಳಾಡುತ್ತಿದ್ದಾರೆ. ತಗ್ಗು ಗುಂಡಿಗಳನ್ನು ಮುಚ್ಚಿಸುವಂತೆ ವಾಹನ ಸವಾರರು ಅಗ್ರಹಿಸಿದ್ದಾರೆ.

ಈಚೆಗೆ 150ಎ ಹೆದ್ದಾರಿಯ ಡಾಂಬರೀಕರಣ ಮಾಡಲಾಗಿದ್ದು, ಡಾಂಬರೀಕರಣ ಮಾಡಿದ‌ ಬಳಿಕ 5 ವರ್ಷಗಳ ಕಾಲ ಗುತ್ತಿಗೆದಾರರು ರಸ್ತೆಯ ಎರಡು ಕಡೆ ಬೆಳೆದಿರುವ ಜಾಲಿ‌ ಗಿಡ ತೆರವುಗೊಳಿಸಬೇಕು, ರಸ್ತೆ ಬದಿ ಮಣ್ಣು ಹಾಕಿಸಬೇಕು, ಬಿದ್ದಿರುವ ಗುಂಡಿಗಳನ್ನು ಮುಚ್ಚಿಸಬೇಕೆಂದು ಸರ್ಕಾರ ಗುತ್ತಿಗೆದಾರರಿಗೆ ಸೂಚನೆ‌ ನೀಡಿರುತ್ತಾರೆ. ಆದರೆ ಇದ್ಯಾವುದನ್ನು ಲೆಕ್ಕಿಸದೇ ಗುತ್ತಿದಾರರು, ಅಧಿಕಾರಿಗಳು ಕಣ್ಣು ಮುಚ್ಚಿಕೊಂಡು ಕುಳಿತ್ತಿದ್ದಾರೆ. ಇದರಿಂದ‌ ಸಾರ್ವಜನಿಕರಿಗೆ ಅಕ್ರೋಶಕ್ಕೆ‌ಕಾರಣವಾಗಿದೆ.

ಮಸ್ಕಿಯಿಂದ-ಲಿಂಗಸ್ಗೂರುಗೆ ಸಂಚರಿಸುವ ರಾಷ್ಟ್ರೀಯ ಹೆದ್ದಾರಿಯಲ್ಲಿ ತಗ್ಗು ಗುಂಡಿಗಳು ಬಿದ್ದಿವೆ. ಸುಗಮ‌ ಸಂಚಾರಕ್ಕೆ ತೊಂದರೆಯಾಗಿದೆ.‌ಅಂಕುಶದೊಡ್ಡಿ, ಸಂತೆಕೆಲ್ಲೂರು ತಿರುವಿನಲ್ಲಿ ಜಾಲಿ ಗಿಡ ಬೆಳೆದು ನಿಂತಿರುವ ಪರಿಣಾಮವಾಗಿ ಮುಂದೆ ಬರುವ ವಾಹನಗಳು ಕಾಣದೇ ರಸ್ತೆ ಬದಿಯಲ್ಲಿ ಬಿದ್ದಿರುವ ಗುಂಡಿಗಳಿಗೆ ಬಿದ್ದು ಪರದಾಡುವಂತಾಗಿದೆ‌. ಈ ಕುರಿತು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಗಮನಹರಿಸಬೇಕಿದೆ.


ಮಾಜಿ ತಾಪಂ‌ ಸದಸ್ಯ, ಗವಿಸಿದ್ದಪ್ಪ ಸಾಹುಕಾರ.


ತಾಲೂಕಿನ ಅಂಕುಶದೊಡ್ಡಿ, ಸಂತೆಕೆಲ್ಲೂರು ಬಳಿಯ ತಿರುವಿನಲ್ಲಿ ರಸ್ತೆಯ ಎರಡು ಬದಿಯಲ್ಲಿ ಜಾಲಿ ಗಿಡಗಳು ಬೆಳೆದು ನಿಂತಿದೆ. ಮುಂದೆ ಬರುವ ವಾಹನಗಳು ಸರಿಯಾಗಿ ಕಾಣದೇ ರಸ್ತೆ ಬದಿಯಲ್ಲಿ ಬಿದ್ದಿರುವ ಗುಂಡಿಗಳಿಗೆ ವಾಹನ ಬಿದ್ದು, ಗಾಯಗೊಳ್ಳುತ್ತಿದ್ದಾರೆ.‌ಕೆಲ ವಾಹನ ಸವಾರರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಕುರಿತು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಿದ ಅಧಿಕಾರಿಗಳು ಎಚ್ಚೇತ್ತುಕೊಂಡು ರಾಷ್ಟ್ರೀಯ ಹೆದ್ದಾರಿಯಲ್ಲಿ ಬಿದ್ದಿರುವ ಗುಂಡಿಗಳನ್ನು ಮುಚ್ಚಿಸುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.

Leave a Reply

Your email address will not be published. Required fields are marked *

You May Also Like

ಪೋಷಕರ ಕಣ್ಣ ಮುಂದೆಯೇ ಆತ್ಮಹತ್ಯೆಗೆ ಶರಣಾದ ಯುವತಿ!

ವಿಜಯಪುರ : ಪೋಷಕರ ಎದುರೇ ಯುವತಿ ಭೀಮಾ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಕರುಳು ಹಿಂಡುವ ಘಟನೆ ಜಿಲ್ಲೆಯಲ್ಲಿ ನಡೆದಿದೆ.

ಗದಗ ಸಮಾಜ ಕಲ್ಯಾಣ ಇಲಾಖೆಯ ವಿವಿಧ ವಸತಿ ನಿಲಯಗಳಲ್ಲಿ ಸಂತ ಶ್ರೀ ಸೇವಾಲಾಲ್ ಮಹಾರಾಜರ 283 ನೇ ಜಯಂತಿಯ ಆಚರಣೆ

ಗದಗ:PPG SC/ST ವಸತಿ ನಿಲಯ ಗದಗದಲ್ಲಿ ವಿಶೇಷ ಪೂಜೆ ಸಲ್ಲಿಸುವ ಮೂಲಕ ಜಯಂತಿ ಆಚರಿಸಲಾಯಿತು.ಈ ಸಂದರ್ಭದಲ್ಲಿ…

ವೀರಪ್ಪನ್ ಸಹಚರ ಸಾವು!

ಚಾಮರಾಜನಗರ ಜಿಲ್ಲೆಯ ಗಡಿಭಾಗದ ಪಾಲಾರ್ ಸಮೀಪದ ಸೋರೆಕಾಯಿಮಡುವು ಬಳಿ ನೆಲಬಾಂಬ್ ಸ್ಪೋಟಿಸಿ 22 ಜನರ ಸಾವಿಗೆ ಕಾರಣರಾಗಿ ಮರಣದಂಡನೆ ಶಿಕ್ಷೆಗೆ ಗುರಿಯಾಗಿದ್ದ ಕಾಡುಗಳ್ಳ ವೀರಪ್ಪನ್ ಸಹಚರ ಬಿಲವೇಂದ್ರನ್ ಮೈಸೂರಿನ ಕೆ.ಆರ್.ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ.

ಹರ್ಷ ಕೊಲೆ ಖಂಡಿಸಿ ನಿಡಗುಂದಿಯಲ್ಲಿ ಪ್ರತಿಭಟನೆ: ಮನವಿ ಅರ್ಪಣೆ

ನಿಡಗುಂದಿ (ವಿಜಯಪುರ ಜಿಲ್ಲೆ): ಶಿವಮೊಗ್ಗದಲ್ಲಿ ನಡೆದ ಹರ್ಷ ಝಿಂಗಾಡೆ ಕೊಲೆ ಖಂಡಿಸಿ ಭಾವಸಾರ ಕ್ಷತ್ರೀಯ ಸಮಾಜದ…