ವರದಿ: ವಿಠಲ ಕೆಳೂತ್


ಮಸ್ಕಿ:
ಲಿಂಗಸ್ಗೂರು-ಮಸ್ಕಿ ‌ರಾಷ್ಟ್ರೀಯ ಹೆದ್ದಾರಿಯಲ್ಲಿ ಬಿದ್ದಿರುವ ತಗ್ಗು ಗುಂಡಿಗಳಿಗೆ ಬಿದ್ದು ವಾಹನ ಸವಾರರು ನರಳಾಡುತ್ತಿದ್ದಾರೆ. ತಗ್ಗು ಗುಂಡಿಗಳನ್ನು ಮುಚ್ಚಿಸುವಂತೆ ವಾಹನ ಸವಾರರು ಅಗ್ರಹಿಸಿದ್ದಾರೆ.

ಈಚೆಗೆ 150ಎ ಹೆದ್ದಾರಿಯ ಡಾಂಬರೀಕರಣ ಮಾಡಲಾಗಿದ್ದು, ಡಾಂಬರೀಕರಣ ಮಾಡಿದ‌ ಬಳಿಕ 5 ವರ್ಷಗಳ ಕಾಲ ಗುತ್ತಿಗೆದಾರರು ರಸ್ತೆಯ ಎರಡು ಕಡೆ ಬೆಳೆದಿರುವ ಜಾಲಿ‌ ಗಿಡ ತೆರವುಗೊಳಿಸಬೇಕು, ರಸ್ತೆ ಬದಿ ಮಣ್ಣು ಹಾಕಿಸಬೇಕು, ಬಿದ್ದಿರುವ ಗುಂಡಿಗಳನ್ನು ಮುಚ್ಚಿಸಬೇಕೆಂದು ಸರ್ಕಾರ ಗುತ್ತಿಗೆದಾರರಿಗೆ ಸೂಚನೆ‌ ನೀಡಿರುತ್ತಾರೆ. ಆದರೆ ಇದ್ಯಾವುದನ್ನು ಲೆಕ್ಕಿಸದೇ ಗುತ್ತಿದಾರರು, ಅಧಿಕಾರಿಗಳು ಕಣ್ಣು ಮುಚ್ಚಿಕೊಂಡು ಕುಳಿತ್ತಿದ್ದಾರೆ. ಇದರಿಂದ‌ ಸಾರ್ವಜನಿಕರಿಗೆ ಅಕ್ರೋಶಕ್ಕೆ‌ಕಾರಣವಾಗಿದೆ.

ಮಸ್ಕಿಯಿಂದ-ಲಿಂಗಸ್ಗೂರುಗೆ ಸಂಚರಿಸುವ ರಾಷ್ಟ್ರೀಯ ಹೆದ್ದಾರಿಯಲ್ಲಿ ತಗ್ಗು ಗುಂಡಿಗಳು ಬಿದ್ದಿವೆ. ಸುಗಮ‌ ಸಂಚಾರಕ್ಕೆ ತೊಂದರೆಯಾಗಿದೆ.‌ಅಂಕುಶದೊಡ್ಡಿ, ಸಂತೆಕೆಲ್ಲೂರು ತಿರುವಿನಲ್ಲಿ ಜಾಲಿ ಗಿಡ ಬೆಳೆದು ನಿಂತಿರುವ ಪರಿಣಾಮವಾಗಿ ಮುಂದೆ ಬರುವ ವಾಹನಗಳು ಕಾಣದೇ ರಸ್ತೆ ಬದಿಯಲ್ಲಿ ಬಿದ್ದಿರುವ ಗುಂಡಿಗಳಿಗೆ ಬಿದ್ದು ಪರದಾಡುವಂತಾಗಿದೆ‌. ಈ ಕುರಿತು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಗಮನಹರಿಸಬೇಕಿದೆ.


ಮಾಜಿ ತಾಪಂ‌ ಸದಸ್ಯ, ಗವಿಸಿದ್ದಪ್ಪ ಸಾಹುಕಾರ.


ತಾಲೂಕಿನ ಅಂಕುಶದೊಡ್ಡಿ, ಸಂತೆಕೆಲ್ಲೂರು ಬಳಿಯ ತಿರುವಿನಲ್ಲಿ ರಸ್ತೆಯ ಎರಡು ಬದಿಯಲ್ಲಿ ಜಾಲಿ ಗಿಡಗಳು ಬೆಳೆದು ನಿಂತಿದೆ. ಮುಂದೆ ಬರುವ ವಾಹನಗಳು ಸರಿಯಾಗಿ ಕಾಣದೇ ರಸ್ತೆ ಬದಿಯಲ್ಲಿ ಬಿದ್ದಿರುವ ಗುಂಡಿಗಳಿಗೆ ವಾಹನ ಬಿದ್ದು, ಗಾಯಗೊಳ್ಳುತ್ತಿದ್ದಾರೆ.‌ಕೆಲ ವಾಹನ ಸವಾರರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಕುರಿತು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಿದ ಅಧಿಕಾರಿಗಳು ಎಚ್ಚೇತ್ತುಕೊಂಡು ರಾಷ್ಟ್ರೀಯ ಹೆದ್ದಾರಿಯಲ್ಲಿ ಬಿದ್ದಿರುವ ಗುಂಡಿಗಳನ್ನು ಮುಚ್ಚಿಸುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.

Leave a Reply

Your email address will not be published. Required fields are marked *

You May Also Like

ಕಂಡಕ್ಟರ್, ಡ್ರೈವರ್ ಗಳನ್ನು ಟಾರ್ಗೇಟ್ ಮಾಡಿದ್ರಾ ಡಿಪೋ ಮ್ಯಾನೇಜರ್..?

ಇದೀಗ ಡಿಪೋ ಮ್ಯಾನೇಜರ್ ಬಸಪ್ಪ ಪೂಜಾರ್ ಅವರ ವರ್ತನೆ ಮತ್ತೊಂದು ಯಡವಟ್ಟಿಗೆ ಕಾರಣವಾಗಿದೆ. ನಿನ್ನೆ ಘಟನೆ ನಂತರ ಇದೀಗ ಸಿಬ್ಬಂಧಿಗಳನ್ನು ಡಿಪೋ ಮ್ಯಾನೇಜರ್ ಟಾರ್ಗೆಟ್ ಮಾಡಿದ್ದಾರೆಯೇ? ಎನ್ನುವ ಪ್ರಶ್ನೆ ಉದ್ಭವವಾಗಿದೆ.

ಉತ್ತರದಲ್ಲಿ ರಣ ಬಿಸಿಲು….ದಕ್ಷಿಣದಲ್ಲಿ ಭರ್ಜರಿ ಮಳೆ!

ಬೆಂಗಳೂರು: ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಭರ್ಜರಿ ಮಳೆಯಾಗುತ್ತಿದ್ದು, ಉತ್ತರ ಕರ್ನಾಟಕದಲ್ಲಿ ರಣ ಬಿಸಿಲು ಮುಂದುವರೆದಿದೆ. ವಿಜಯಪುರ…

ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾಗಿ ರಾಮಣ್ಣ ಕಮಾಜಿ ಆಯ್ಕೆ

ಮುಳಗುಂದ : ಇಲ್ಲಿನ ವೀರರಾಣಿ ಕಿತ್ತೂರ ಚನ್ನ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾಗಿ ರಾಮಣ್ಣ ಕಮಾಜಿ,…