ವರದಿ: ವಿಠಲ ಕೆಳೂತ್


ಮಸ್ಕಿ:
ಲಿಂಗಸ್ಗೂರು-ಮಸ್ಕಿ ‌ರಾಷ್ಟ್ರೀಯ ಹೆದ್ದಾರಿಯಲ್ಲಿ ಬಿದ್ದಿರುವ ತಗ್ಗು ಗುಂಡಿಗಳಿಗೆ ಬಿದ್ದು ವಾಹನ ಸವಾರರು ನರಳಾಡುತ್ತಿದ್ದಾರೆ. ತಗ್ಗು ಗುಂಡಿಗಳನ್ನು ಮುಚ್ಚಿಸುವಂತೆ ವಾಹನ ಸವಾರರು ಅಗ್ರಹಿಸಿದ್ದಾರೆ.

ಈಚೆಗೆ 150ಎ ಹೆದ್ದಾರಿಯ ಡಾಂಬರೀಕರಣ ಮಾಡಲಾಗಿದ್ದು, ಡಾಂಬರೀಕರಣ ಮಾಡಿದ‌ ಬಳಿಕ 5 ವರ್ಷಗಳ ಕಾಲ ಗುತ್ತಿಗೆದಾರರು ರಸ್ತೆಯ ಎರಡು ಕಡೆ ಬೆಳೆದಿರುವ ಜಾಲಿ‌ ಗಿಡ ತೆರವುಗೊಳಿಸಬೇಕು, ರಸ್ತೆ ಬದಿ ಮಣ್ಣು ಹಾಕಿಸಬೇಕು, ಬಿದ್ದಿರುವ ಗುಂಡಿಗಳನ್ನು ಮುಚ್ಚಿಸಬೇಕೆಂದು ಸರ್ಕಾರ ಗುತ್ತಿಗೆದಾರರಿಗೆ ಸೂಚನೆ‌ ನೀಡಿರುತ್ತಾರೆ. ಆದರೆ ಇದ್ಯಾವುದನ್ನು ಲೆಕ್ಕಿಸದೇ ಗುತ್ತಿದಾರರು, ಅಧಿಕಾರಿಗಳು ಕಣ್ಣು ಮುಚ್ಚಿಕೊಂಡು ಕುಳಿತ್ತಿದ್ದಾರೆ. ಇದರಿಂದ‌ ಸಾರ್ವಜನಿಕರಿಗೆ ಅಕ್ರೋಶಕ್ಕೆ‌ಕಾರಣವಾಗಿದೆ.

ಮಸ್ಕಿಯಿಂದ-ಲಿಂಗಸ್ಗೂರುಗೆ ಸಂಚರಿಸುವ ರಾಷ್ಟ್ರೀಯ ಹೆದ್ದಾರಿಯಲ್ಲಿ ತಗ್ಗು ಗುಂಡಿಗಳು ಬಿದ್ದಿವೆ. ಸುಗಮ‌ ಸಂಚಾರಕ್ಕೆ ತೊಂದರೆಯಾಗಿದೆ.‌ಅಂಕುಶದೊಡ್ಡಿ, ಸಂತೆಕೆಲ್ಲೂರು ತಿರುವಿನಲ್ಲಿ ಜಾಲಿ ಗಿಡ ಬೆಳೆದು ನಿಂತಿರುವ ಪರಿಣಾಮವಾಗಿ ಮುಂದೆ ಬರುವ ವಾಹನಗಳು ಕಾಣದೇ ರಸ್ತೆ ಬದಿಯಲ್ಲಿ ಬಿದ್ದಿರುವ ಗುಂಡಿಗಳಿಗೆ ಬಿದ್ದು ಪರದಾಡುವಂತಾಗಿದೆ‌. ಈ ಕುರಿತು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಗಮನಹರಿಸಬೇಕಿದೆ.


ಮಾಜಿ ತಾಪಂ‌ ಸದಸ್ಯ, ಗವಿಸಿದ್ದಪ್ಪ ಸಾಹುಕಾರ.


ತಾಲೂಕಿನ ಅಂಕುಶದೊಡ್ಡಿ, ಸಂತೆಕೆಲ್ಲೂರು ಬಳಿಯ ತಿರುವಿನಲ್ಲಿ ರಸ್ತೆಯ ಎರಡು ಬದಿಯಲ್ಲಿ ಜಾಲಿ ಗಿಡಗಳು ಬೆಳೆದು ನಿಂತಿದೆ. ಮುಂದೆ ಬರುವ ವಾಹನಗಳು ಸರಿಯಾಗಿ ಕಾಣದೇ ರಸ್ತೆ ಬದಿಯಲ್ಲಿ ಬಿದ್ದಿರುವ ಗುಂಡಿಗಳಿಗೆ ವಾಹನ ಬಿದ್ದು, ಗಾಯಗೊಳ್ಳುತ್ತಿದ್ದಾರೆ.‌ಕೆಲ ವಾಹನ ಸವಾರರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಕುರಿತು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಿದ ಅಧಿಕಾರಿಗಳು ಎಚ್ಚೇತ್ತುಕೊಂಡು ರಾಷ್ಟ್ರೀಯ ಹೆದ್ದಾರಿಯಲ್ಲಿ ಬಿದ್ದಿರುವ ಗುಂಡಿಗಳನ್ನು ಮುಚ್ಚಿಸುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.

Leave a Reply

Your email address will not be published. Required fields are marked *

You May Also Like

ಹೀಗೆ ಮುಂದುವರೆದರೆ ಸೋಂಕಿತರ ಸಂಖ್ಯೆ ಆಗಷ್ಟ್ ನಲ್ಲಿ ಎಷ್ಟಾಗಲಿದೆ ಗೊತ್ತಾ?

ಬೆಂಗಳೂರು : ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಇದು ಹೀಗೆ ಮುಂದುವರೆದರೆ ಆಗಸ್ಟ್ 15ರ ವೇಳೆಗೆ ಸೋಂಕಿತರ ಸಂಖ್ಯೆ 25 ಸಾವಿರಕ್ಕೆ ಏರಿಕೆಯಾಗುವ ಸಾಧ್ಯತೆ ಇದೆ ಎಂದು ಕೋವಿಡ್-19 ವಾರ್ ರೂಂ ಮುಖ್ಯಸ್ಥ ಮುನೀಶ್ ಮೌದ್ಗಿಲ್ ಅಂದಾಜಿಸಿದ್ದಾರೆ.

ಹಳೆ ವಿದ್ಯಾರ್ಥಿಯಿಂದ ಸರಕಾರಿ ಶಾಲೆಗೆ ಆರ್ಥಿಕ ಸಹಾಯ

ಯಾವ ಮಕ್ಕಳು ಕೂಡಾ ಶಿಕ್ಷಣದಿಂದ ವಂಚಿತರಾಗಬಾರದು ಎಂದು ಸರಕಾರ ಶಾಲೆಗಳಿಗೆ ಹಲವಾರು ಸೌಲಭ್ಯಗಳನ್ನು ನೀಡುತ್ತಿದ್ದು ಇದನ್ನು ಉಪಯೋಗ ಪಡಿಸಿಕೊಂಡು ಶಿಕ್ಷಣ ಪಡೆದು ಶಿಕ್ಷಣವಂತರಾಗಬೇಕು ಎಂದು ಮಹಾಂತೇಶ ಜಕ್ಕಲಿ ಹೇಳಿದರು.

ಮುಳಗುಂದದಲ್ಲಿ ರಸ್ತೆ ಸುರಕ್ಷತೆ ಸಪ್ತಾಹ

ಎಸ್.ಜೆ.ಜೆ.ಎಂ ಸಂಯುಕ್ತ ಪದವಿಪೂರ್ವ ಮಹಾವಿದ್ಯಾಲಯ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಗದಗ ಜಿಲ್ಲಾ ಪೋಲಿಸ್ ಹಾಗೂ ಸ್ಥಳಿಯ ಪೋಲಿಸ್ ಠಾಣೆ ವತಿಯಿಂದ ರಸ್ತೆ ಸುರಕ್ಷತೆ ಸಪ್ತಾಹ ನಡೆಯಿತು.

ಜಿಲೆಟಿನ್‌ ಸ್ಫೋಟ ದುರಂತ: ಗ್ರಾಮಸ್ಥರಿಂದ ಆಕ್ರೋಶ

ಜಿಲ್ಲೆಯ ಹುಣಸೋಡು ಅಕ್ರಮ ಕಲ್ಲು ಕ್ವಾರೆ ಪ್ರದೇಶದಲ್ಲಿ ಜಿಲೆಟಿನ್‌ ಸ್ಪೋಟಗೊಂಡ ಘಟನೆ ಮಾಸುವ ಮೊದಲೇ ರಾಜ್ಯದಲ್ಲಿ ಮತ್ತೊಂದು ಜಿಲೆಟಿನ್ ಸ್ಪೋಟ ದುರಂತ ಸಂಭವಿಸಿದೆ. ಚಿಕ್ಕಬಳ್ಳಾಪುರ ಜಿಲ್ಲೆಯ ಹಿರೇನಾಗವಳ್ಳಿ ಗ್ರಾಮದ ಬಳಿ ಜಿಲೆಟಿನ್ ಸ್ಫೋಟಗೊಂಡಿದೆ.