ಗದಗ:  ಆತ್ಮನಿರ್ಭರ ಭಾರತ ಅಭಿಯಾನದ ಅಂಗವಾಗಿ ಭಾರತ ಸರ್ಕಾರವು ಪ್ರಧಾನಮಂತ್ರಿಗಳ ಕಿರು ಆಹಾರ ಸಂಸ್ಕರಣ ಉದ್ಯಮಗಳ ನಿಯಮಬದ್ಧಗೊಳಿಸುವಿಕೆ ಯೋಜನೆ ಜಾರಿಗೆ ತಂದಿದೆ.
     ಒಂದು ಜಿಲ್ಲೆಗೆ ಒಂದು ಉತ್ಪನ್ನ ಆಧಾರದ ಮೇಲೆ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ 80 ಘಟಕಗಳಿಗೆ ಗುರಿಯನ್ನು ನಿಗದಿಪಡಿಸಲಾಗಿದ್ದು, ಪ್ರತಿ ಘಟಕಕ್ಕೆ ಶೇ. 50 ರಷ್ಟು ಕ್ರೆಡಿಟ್ ಲಿಂಕ್ ಆಧಾರದ ಮೇಲೆ ಧನಸಹಾಯ ಒದಗಿಸಲಾಗುವುದು. ಬ್ಯಾಡಗಿ ಮೆಣಸಿನಕಾಯಿ ಸಂಸ್ಕರಣಾ ಘಟಕಗಳಿಗೆ ಬೆಳೆಯ ವರ್ಗಿಕರಣ, ಶ್ರೇಣಿಕರಣ, ಬ್ರ್ಯಾಂಡಿಂಗ್, ಲೆಬಲಿಂಗ್ ಮಾರುಕಟ್ಟೆಯ ಬೆಂಬಲ ಮತ್ತು ರಪ್ತಿಗೆ ಪ್ರೋತ್ಸಾಹ ನೀಡುವ ಮೂಲಕ ಅಂತಹ ವ್ಯಕ್ತಿ ಅಥವಾ ಸಂಸ್ಥೆಗಳನ್ನು ಉದ್ಯಮೆದಾರರಾಗಿ ರೂಪಿಸಲು ಯೋಜಿಸಲಾಗಿದೆ.


            ಜಿಲ್ಲೆಯಲ್ಲಿ ಬ್ಯಾಡಗಿ ಮೆಣಸಿನಕಾಯಿ ಸಂಸ್ಕರಣ ಕಾರ್ಯದಲ್ಲಿ ನಿರತವಾಗಿರುವ ಸಹಕಾರ ಸಂಘಗಳು, ರೈತ ಉತ್ಪಾದಕ ಸಂಸ್ಥೆಗಳು, ಸ್ವಸಹಾಯ ಸಂಘಗಳು ಮತ್ತು ಸಾಮಾನ್ಯ ಸೌಕರ್ಯ ಒದಗಿಸುವ ಸಂಸ್ಥೆಗಳು ಇದರ ಪ್ರಯೋಜನವನ್ನು ಪಡೆಯಲು   http://pmfme.mofpi.gov.in   ವೆಬ್‌ಸೈಟ್‌ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಹೆಚ್ಚಿನ ವಿವರಗಳಿಗಾಗಿ ಸಮೀಪದ ಜಂಟಿ ಕೃಷಿ ನಿರ್ದೇಶಕರು, ಉಪ ನಿರ್ದೇಶಕರು, ತೋಟಗಾರಿಕೆ ಇಲಾಖೆ, ಉಪ ಕೃಷಿ ನಿರ್ದೇಶಕರ ಕಚೇರಿ ಹಾಗೂ ಸಹಾಯಕ ಕೃಷಿ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ.  ಹೆಚ್ಚಿನ ಮಾಹಿತಿಗಾಗಿ ಸಂಪನ್ಮೂಲ ವ್ಯಕ್ತಿಗಳಾದ ಎಸ್.ವ್ಹಿ. ಘಳಗಿ (9663579897), ಮತ್ತು ಶ್ರೀನಿವಾಸ ರಾಠೋಡ (9686641134) ಇವರನ್ನು ಸಂಪರ್ಕಿಸಲು ಕೋರಿದೆ.

Leave a Reply

Your email address will not be published. Required fields are marked *

You May Also Like

25ನೇ ವಾರ್ಡಿನ ಮಾನವಿ ಮತ್ತು 8ನೇ ವಾರ್ಡ ಕಾಂಗ್ರೆಸ್ ಅಭ್ಯರ್ಥಿ ಪೂರ್ಣಿಮಾ ಮತ್ತು 13ಮತ್ತು 19ನೇ ವಾರ್ಡ ಬಿಜೆಪಿ ಗೆ ಜಯ

ಗದಗ:: ಗದಗ ಬೆಟಗೇರಿ ನಗರ ಸಭೆ ಚುನಾವಣೆ ಮತ ಎಣಿಕೆ ಗದಗ ನಗರದ ಗುರು ಬಸವ…

ಕಲ್ಯಾಣ ಕರ್ನಾಟಕದಲ್ಲಿ ಪ್ರತ್ಯೇಕ ಧ್ವಜ ಹಾರಿಸಲು ಪ್ರಯತ್ನ – ಹಲವರ ಬಂಧನ!

ಕಲಬುರಗಿ : ಕಲ್ಯಾಣ ಕರ್ನಾಟಕಕ್ಕೆ ಆಗ್ರಹಿಸಿ ಪ್ರತ್ಯೇಕ ರಾಜ್ಯ ಧ್ವಜಾರೋಹಣಕ್ಕೆ ಯತ್ನಿಸಿದ ಪ್ರತಿಭಟನಕಾರರನ್ನು ಪೊಲೀಸರು ಬಂಧಿಸಿದ್ದಾರೆ.

ರಾಜ್ಯದಲ್ಲಿ ಪೊಲೀಸರ ಬೆನ್ನು ಬಿದ್ದ ಕೊರೊನಾ!

ರಾಜ್ಯದಲ್ಲಿ ಕೊರೊನಾ ಅಟ್ಟಹಾಸ ದಿನದಿಂದ ದಿನಕ್ಕೆ ಮುಂದುವರೆಯುತ್ತಿದೆ. ಪೊಲೀಸರೂ ಇದಕ್ಕೆ ಹೊರತಲ್ಲ.

Актуальное работающее зеркало БК Леон Рабочее зеркало официального сайта букмекерской конторы Леон

Актуальное работающее зеркало БК Леон Рабочее зеркало официального сайта букмекерской конторы Леон…