ವರದಿ: ವಿಠ್ಠಲ ಕೆಳೂತ್

ಮಸ್ಕಿ: ತಾಲೂಕಿನ ದಿಗ್ಗನಾಯಕನಭಾವಿ ಹತ್ತಿರದ ಹಿರೇ ಹಳ್ಳದಲ್ಲಿ ನಿರ್ಮಿಸುತ್ತಿರುವ ಚೆಕ್ ಡ್ಯಾಂ ಕಾಮಗಾರಿ ಈ ಕೂಡಲೇ ನಿಲ್ಲಿಸುವಂತೆ ಹೈಕೋರ್ಟ್ ತಡೆ ನೀಡಿದೆ.


ಕೃಷ್ಣ ಭಾಗ್ಯ ಜಲ‌ ನಿಗಮದಿಂದ 2.50 ಕೋಟಿ ವೆಚ್ಚದಲ್ಲಿ ನಿರ್ಮಿಸುತ್ತಿರುವ ಚೆಕ್‌ ಡ್ಯಾಂ‌ ಕಾಮಗಾರಿ ಅವೈಜ್ಞಾನಿಕವಾಗಿದ್ದು. ಈ ಕೂಡಲೇ ಸ್ಥಗಿತಗೊಳಸಬೇಕೆಂದು ದಿಗ್ಗನಾಯಕನಭಾವಿ ಗ್ರಾಮದ ರೈತ ಅಮರೇಗೌಡ ಗುಲ್ಬರ್ಗದ ಪೀಠದ ಉಚ್ಚ ನ್ಯಾಯಾಲಯಕ್ಕೆ ಮೇಲ್ಮನವಿಯನ್ನು ಸಲ್ಲಿಸಿದ್ದರು.


ಮಾರಲದಿನ್ನಿ ಜಲಾಶಯದ ಹಿರೇ ಹಳ್ಳದ ದಿಗ್ಗನಾಯಕನಭಾವಿ ಹತ್ತಿರ ಚೆಕ್ ಡ್ಯಾಂ ಕಾಮಗಾರಿ ನಿರ್ಮಾಣ ಮಾಡುತ್ತಿದ್ದು, ಈ ಕಾಮಗಾರಿಯಿಂದ ಕೆಳಭಾಗದ ರೈತರಿಗೆ ತೊಂದರೆ ಆಗಲಿದೆ. ರೈತ-ರೈತರ ನಡುವೆ ಸಂಘರ್ಷವಾಗಲಿದೆ. ಹಳ್ಳವನ್ನೆ ನಂಬಿಕೊಂಡು ಕೃಷಿ ಚಟುವಟಿಕೆ ಮಾಡುತ್ತಿರುವ ರೈತರು ಸಂಕಷ್ಟಕ್ಕೆ ಸಿಲುಕುತ್ತಾರೆ.
ತಾಲೂಕಿನ ಬೆಲ್ಲದಮರಡಿ ಹತ್ತಿರದ ಹಳ್ಳದಲ್ಲಿ ಚೆಕ್ ಡ್ಯಾ ನಿರ್ಮಿಸಿದರೆ ಈ ಭಾಗದ ವೆಂಕಟಾಪೂರ, ಬೆನಕನಾಳ, ಬೆಲ್ಲದಮರಡಿ, ದಿಗ್ಗನಾಯಕನಭಾವಿ ಭಾವಿ ಗ್ರಾಮದ ರೈತರಿಗೆ ಅನುಕೂಲವಾಗಲಿದೆ.‌ಈ ಕಾಮಗಾರಿಯನ್ನು ಕೂಡಲೇ ತಡೆ ಹಿಡಿಯುವಂತೆ ಹೈಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ್ದರು.‌
ರೈತನ ಮನವಿಗೆ ಸ್ಪಂದಿಸಿ ಅವೈಜ್ಞಾನಿಕ ಚೆಕ್ ಡ್ಯಾಂ ಕಾಮಗಾರಿ ನಿಲ್ಲಿಸುವಂತೆ ಹೈಕೋರ್ಟ್ ಸೂಚನೆ ನೀಡಿದೆ.
ಕಾಮಗಾರಿ ನಿರ್ವಹಿಸುತ್ತಿರುವ ಅಧಿಕಾರಿಗಳಿಗೆ, ಇಂಜಿನಿಯರ್ ‌ಗಳಿಗೆ ಉಚ್ಚ ನ್ಯಾಯಾಲಯದಿಂದ ತಡೆ ಬಂದಿದೆ ಎಂದು ರೈತ ಅಮರೇಗೌಡ, ಹಜರತ್ ಸಾಬ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ಸಾರಿಗೆ ನೌಕರರ ಹೊಟ್ಟೆಯ ಮೇಲೆ ಬರೆ ಎಳೆಯಲು ಮುಂದಾದ ಸಂಸ್ಥೆ!

ಹುಬ್ಬಳ್ಳಿ : ಕೊರೊನಾ ಮಹಾಮಾರಿಗೆ ಇಡೀ ದೇಶವೇ ನಲುಗುತ್ತಿದೆ. ಪ್ರತಿಯೊಂದು ಕ್ಷೇತ್ರಗಳು ಆರ್ಥಿಕ ಸಂಕಷ್ಟ ಅನುಭವಿಸುತ್ತಿವೆ.…

ಡ್ರಗ್ಸ್ ಕೇಸ್ ಬಗ್ಗೆ ನನಗೆ ಗೊತ್ತಿಲ್ಲ ಎಂದ ಮಾಜಿ ಸಚಿವ ರುದ್ರಪ್ಪ ಲಮಾಣಿ!

ಬೆಂಗಳೂರು : ಡ್ರಗ್ಸ್ ಮಾಫಿಯಾ ಪ್ರಕರಣದಲ್ಲಿ ಬಂಧಿಯಾಗಿರುವ ಪುತ್ರ ದರ್ಶನ್ ಬಗ್ಗೆ ಮಾಜಿ ಸಚಿವ ರುದ್ರಪ್ಪ ಲಮಾಣಿ ತಮ್ಮ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ.

ಪೇಶೆಂಟ್ ನಂ.419 ಸೃಷ್ಟಿಸಿದ ಅವಾಂತರಕ್ಕೆ ಇಡೀ ರಾಜ್ಯವೇ ಮತ್ತೊಮ್ಮೆ ಬೆಚ್ಚಿ ಬಿದ್ದಿದೆ?

ಕ್ವಾರೆಂಟೈನ್ ಮುಗಿಸಿ ಬಂದ 419 ವ್ಯಕ್ತಿಯಿಂದಾಗಿ ಬೆಂಗಳೂರಿನಲ್ಲಿ ಆತಂಕ ಮನೆ ಮಾಡಿದೆ. ರಾಜ್ಯ ಸರ್ಕಾರ ಬಿಡುಗಡೆ ಮಾಡಿದ ಬುಲೆಟಿನ್ ನಲ್ಲಿ ನಿನ್ನೆ ಈ ವ್ಯಕ್ತಿ ಐಸಿಯುನಲ್ಲಿಯೇ ಇದ್ದಾನೆ ಎಂದು ಹೇಳಲಾಗಿತ್ತು.