ವರದಿ: ವಿಠ್ಠಲ ಕೆಳೂತ್

ಮಸ್ಕಿ: ತಾಲೂಕಿನ ದಿಗ್ಗನಾಯಕನಭಾವಿ ಹತ್ತಿರದ ಹಿರೇ ಹಳ್ಳದಲ್ಲಿ ನಿರ್ಮಿಸುತ್ತಿರುವ ಚೆಕ್ ಡ್ಯಾಂ ಕಾಮಗಾರಿ ಈ ಕೂಡಲೇ ನಿಲ್ಲಿಸುವಂತೆ ಹೈಕೋರ್ಟ್ ತಡೆ ನೀಡಿದೆ.


ಕೃಷ್ಣ ಭಾಗ್ಯ ಜಲ‌ ನಿಗಮದಿಂದ 2.50 ಕೋಟಿ ವೆಚ್ಚದಲ್ಲಿ ನಿರ್ಮಿಸುತ್ತಿರುವ ಚೆಕ್‌ ಡ್ಯಾಂ‌ ಕಾಮಗಾರಿ ಅವೈಜ್ಞಾನಿಕವಾಗಿದ್ದು. ಈ ಕೂಡಲೇ ಸ್ಥಗಿತಗೊಳಸಬೇಕೆಂದು ದಿಗ್ಗನಾಯಕನಭಾವಿ ಗ್ರಾಮದ ರೈತ ಅಮರೇಗೌಡ ಗುಲ್ಬರ್ಗದ ಪೀಠದ ಉಚ್ಚ ನ್ಯಾಯಾಲಯಕ್ಕೆ ಮೇಲ್ಮನವಿಯನ್ನು ಸಲ್ಲಿಸಿದ್ದರು.


ಮಾರಲದಿನ್ನಿ ಜಲಾಶಯದ ಹಿರೇ ಹಳ್ಳದ ದಿಗ್ಗನಾಯಕನಭಾವಿ ಹತ್ತಿರ ಚೆಕ್ ಡ್ಯಾಂ ಕಾಮಗಾರಿ ನಿರ್ಮಾಣ ಮಾಡುತ್ತಿದ್ದು, ಈ ಕಾಮಗಾರಿಯಿಂದ ಕೆಳಭಾಗದ ರೈತರಿಗೆ ತೊಂದರೆ ಆಗಲಿದೆ. ರೈತ-ರೈತರ ನಡುವೆ ಸಂಘರ್ಷವಾಗಲಿದೆ. ಹಳ್ಳವನ್ನೆ ನಂಬಿಕೊಂಡು ಕೃಷಿ ಚಟುವಟಿಕೆ ಮಾಡುತ್ತಿರುವ ರೈತರು ಸಂಕಷ್ಟಕ್ಕೆ ಸಿಲುಕುತ್ತಾರೆ.
ತಾಲೂಕಿನ ಬೆಲ್ಲದಮರಡಿ ಹತ್ತಿರದ ಹಳ್ಳದಲ್ಲಿ ಚೆಕ್ ಡ್ಯಾ ನಿರ್ಮಿಸಿದರೆ ಈ ಭಾಗದ ವೆಂಕಟಾಪೂರ, ಬೆನಕನಾಳ, ಬೆಲ್ಲದಮರಡಿ, ದಿಗ್ಗನಾಯಕನಭಾವಿ ಭಾವಿ ಗ್ರಾಮದ ರೈತರಿಗೆ ಅನುಕೂಲವಾಗಲಿದೆ.‌ಈ ಕಾಮಗಾರಿಯನ್ನು ಕೂಡಲೇ ತಡೆ ಹಿಡಿಯುವಂತೆ ಹೈಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ್ದರು.‌
ರೈತನ ಮನವಿಗೆ ಸ್ಪಂದಿಸಿ ಅವೈಜ್ಞಾನಿಕ ಚೆಕ್ ಡ್ಯಾಂ ಕಾಮಗಾರಿ ನಿಲ್ಲಿಸುವಂತೆ ಹೈಕೋರ್ಟ್ ಸೂಚನೆ ನೀಡಿದೆ.
ಕಾಮಗಾರಿ ನಿರ್ವಹಿಸುತ್ತಿರುವ ಅಧಿಕಾರಿಗಳಿಗೆ, ಇಂಜಿನಿಯರ್ ‌ಗಳಿಗೆ ಉಚ್ಚ ನ್ಯಾಯಾಲಯದಿಂದ ತಡೆ ಬಂದಿದೆ ಎಂದು ರೈತ ಅಮರೇಗೌಡ, ಹಜರತ್ ಸಾಬ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ನಿಖಿಲ್ ಕುಮಾರಸ್ವಾಮಿ ವಿವಾಹ: ಪಾಸ್ ನೀಡಿದ ವಾಹನಗಳ ವಿವರಣೆ ಕೇಳಿದ ಕೋರ್ಟ್..!

ದೇಶಾದ್ಯಂತ ಲಾಕ್ ಡೌನ್ ಮದ್ಯೆಯೂ ನಟ ಹಾಗೂ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರಸ್ವಾಮಿ ಅವರ ವಿವಾಹ ಇತ್ತಿಚೆಗಷ್ಟೆ ನಡೆದಿತ್ತು. ವಿವಾಹ ಸಂದರ್ಭದಲ್ಲಿ ಎಷ್ಟು ವಾಹನಗಳಿಗೆ ಪಾಸ್ ನೀಡಲಾಗಿತ್ತು ಎನ್ನುವ ಬಗ್ಗೆ ಮಾಹಿತಿ ನೀಡುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ.

ಆಸ್ಪತ್ರೆಯಲ್ಲಿನ ಬಹುತೇಕ ಸಿಬ್ಬಂದಿಗೆ ಕೊರೊನಾ!

ಮುಂಬಯಿ: ಇಲ್ಲಿಯ ಮಹಾನಗರ ಪಾಲಿಕೆಯ ಆಸ್ಪತ್ರೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದೆ. ಇಲ್ಲಿಯ ಸಾಯನ್‌ ತಿಲಕ್‌ ಆಸ್ಪತ್ರೆಯ 92 ಜನ ವೈದ್ಯರು ಹಾಗೂ ಏಳು ಜನ ತರಬೇತಿ ಪಡೆಯುತ್ತಿದ್ದ ವೈದ್ಯರಿಗೆ ಸೋಂಕು ತಗುಲಿದೆ.

ಹೋಮಿಯೋಪತಿಯಲ್ಲೂ ಕೊರೊನಾ ಔಷಧಿ ತಯಾರಿಸಿ: ಸಚಿವ ಡಾ.ಕೆ.ಸುಧಾಕರ್

ನಮ್ಮಲ್ಲಿ ಸಂಶೋಧನೆಗಳು ಕಡಿಮೆಯಾಗಿವೆ. ಎಲ್ಲವನ್ನೂ ಬೇರೆ ದೇಶಗಳಿಂದ ತರಿಸಿಕೊಳ್ಳುವಂತಾಗಿದೆ. ಕೊರೊನಾ ನಿಯಂತ್ರಣಕ್ಕೆ ತರಲು ಆರ್ಸೆನಿಕ್ ಆಲ್ಬಂ ಎಂಬ ಹೋಮಿಯೋಪತಿ ಔಷಧಿ ಬಳಕೆಯಲ್ಲಿದೆ. ಆದರೆ ಕೊರೊನಾ ನಿವಾರಣೆಗೆ ಬೇರೆ ಸಂಸ್ಥೆಗಳು ಔಷಧಿ ತಯಾರಿಸುತ್ತಿರುವಂತೆ ಹೋಮಿಯೋಪತಿಯಲ್ಲೂ ಔಷಧಿ ಕಂಡು ಹಿಡಿಯಬೇಕು ಎಂದು ಸಚಿವ ಸುಧಾಕರ್‌ ತಿಳಿಸಿದ್ದಾರೆ.

ಈ ಬಾರಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಬಸವರಾಜ ಕುರಿಕಾರ ಗೆಲುವು ಖಚಿತ: ಮಾಜಿ ಶಾಸಕ ಜಿ.ಎಸ್.ಪಾಟೀಲ

ಉತ್ತರಪ್ರಭ ನರೆಗಲ್: ವಿಧಾನ ಪರಿಷತ್‍ನ ಪಶ್ಚಿಮ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬಸವರಾಜ ಗುರಿಕಾರ ಪರವಾಗಿ…