ವರದಿ: ವಿಠಲ ಕೆಳೂತ್


ಮಸ್ಕಿ: ಸಂವಿಧಾನ ಶಿಲ್ಪಿ ಡಾ. ಬಿ. ಆರ್. ಅಂಬೇಡ್ಕರ ಭಾವಚಿತ್ರಕ್ಕೆ ಅಪಮಾನ ಮಾಡಿ, ಸಂವಿಧಾನಕ್ಕೆ ಅಗೌರವ ತೋರಿದ ರಾಯಚೂರಿನ ಜಿಲ್ಲಾ ಮುಖ್ಯ ನ್ಯಾಯಾದೀಶ ಮಲ್ಲಿಕಾರ್ಜುನ ಗೌಡ ಅವರನ್ನು ಸೇವೆಯಿಂದ ವಜಾ ಮಾಡುವಂತೆ ಒತ್ತಾಯಿಸಿ ಇಲ್ಲಿನ ಬಂಜಾರ ಸಮಾಜದ ಮುಖಂಡರ ವತಿಯಿಂದ ಫೆ.1ರಂದು ಮಸ್ಕಿಯಲ್ಲಿ ಬೃಹತ್ ಪ್ರತಿಭಟನೆ ಮಾಡಲಾಗುವುದು ಎಂದು ಎಐಬಿಎಸ್ ಎಸ್ ತಾಲೂಕ ಅಧ್ಯಕ್ಷ ಅಮರೇಶ ಅಂತರಗಂಗಿ ಹೇಳಿದರು.
ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,
73ನೇ ಗಣರಾಜ್ಯೋತ್ಸವ ದ್ವಜಾರೋಹಣ ಕಾರ್ಯಕ್ರಮದಲ್ಲಿ‌ ಡಾ.‌ಬಿ.ಆರ್ ಅಂಬೇಡ್ಕರ್ ಅವರ ಪೋಟೋ ಇಟ್ಟರೆ ನಾನು ಕಾರ್ಯಕ್ರಮಕ್ಕೆ ಬರುವುದಿಲ್ಲ‌ ಎಂದು ಹೇಳಿ, ತಾವೇ ಸ್ವತಃ ಅಂಬೇಡ್ಕರ್ ಪೋಟೋ ತಗೆದಿಟ್ಟು ಸಂವಿಧಾನಕ್ಕೆ ಅಗೌರವ ತೋರಿದ ರಾಯಚೂರಿನ ಜಿಲ್ಲಾ ನ್ಯಾಯಾದೀಶನ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು.


ಗಣರಾಜ್ಯೋತ್ಸವ ದಿನದಂದು ಡಾ. ಬಿ.ಆರ್ ಅಂಬೇಡ್ಕರ್ ಭಾವಚಿತ್ರವನ್ನು ಕಡ್ಡಾಯವಾಗಿ ಇಡಬೇಕೆಂದು ರಾಜ್ಯ ಸರ್ಕಾರ ಆದೇಶ ಮಾಡಿದೆ. ನ್ಯಾಯಾದೀಶನಾಗಿ ಸೇವೆ ಸಲ್ಲಿಸುತ್ತಿರುವ ಇವರಿಗೆ ಅರಿವು ಇಲ್ಲವೇ ಅಸ್ಪೃಶ್ಯತೆ ಬಗ್ಗೆ ಕೀಳುj ಮನೋಭಾವನೆ ಹೊಂದಿರುವ ಜಿಲ್ಲಾ ನ್ಯಾಯಾದೀಶ ಮಲ್ಲಿಕಾರ್ಜುನಗೌಡನ ಮೇಲೆ‌ ದೇಶ ದ್ರೋಹ ಪ್ರಕರಣವನ್ನು ದಾಖಲೀಸಬೇಕು. ಈ ಕೂಡಲೇ ಸೇವೆಯಿಂದ ವಜಾ ಮಾಡಬೇಕೆಂದು ಒತ್ತಾಯಿಸಿ ಮಸ್ಕಿಯ ಹಳೇ ಬಸ್ ನಿಲ್ದಾಣದ ಹತ್ತಿರದ ಡಾ. ಬಿ.ಆರ್ ಅಂಬೇಡ್ಕರ್ ಪ್ರತಿಮೆ ಮುಂದೆ ಪ್ರತಿಭಟನೆ ಮಾಡಲಾಗುವುದು ಸಮಾಜದ ಮುಖಂಡರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಪ್ರತಿಭಟನೆ ಯಶಸ್ವಿಗೊಳಿಸಬೇಕೆಂದು ಮನವಿ ಮಾಡಿದರು.
ಈ ಸಮಾಜದ ಹಿರಿಯ ಮುಖಂಡ ಭೀಮಶಪ್ಪ ಪೂಜಾರಿ, ಅಮರೇಶ ರಾಠೋಡ್, ಶ್ರೀನಿವಾಸ ಚವ್ಹಾಣ, ಅಮರೇಶ ಪವಾರ, ಮೀಠಪ್ಪ ರಾಠೋಡ್ ಸೇರಿದಂತೆ ಇನ್ನಿತರಿದ್ದರು.

Leave a Reply

Your email address will not be published. Required fields are marked *

You May Also Like

ಬೆಂಗಳೂರಿನಲ್ಲಿ ದಂಪತಿಯ ಬರ್ಬರ ಹತ್ಯೆ

ನಗರದಲ್ಲಿ ದಂಪತಿಯ ಹತ್ಯೆ ನಡೆದಿದ್ದು, ಮಗನಿಂದಲೇ ನಡೆದಿದೆ ಎನ್ನಲಾಗಿದೆ. ಕೋಣನಕುಂಟೆ ಬಳಿಯ ಆರ್ ಬಿಐ ಲೇಔಟ್ ನಲ್ಲಿ ಈ ಘಟನೆ ನಡೆದಿದೆ. ಗೋವಿಂದಪ್ಪ(65), ಶಾಂತಮ್ಮ(55) ಕೊಲೆಯಾದ ದುರ್ದೈವಿಗಳು. ಇವರನ್ನು ಟೆಕ್ಕಿಯಾಗಿರುವ ಮಗ ನವೀನ್ ಕೊಲೆಗೈದಿರಬಹುದು ಎಂಬ ಶಂಕಿಸಲಾಗಿದೆ.

ಮಗುವಿಗಾಗಿ ಆಹಾರ ಅರಸಿದ ತಾಯಿ..! ಇದು ಮಂಗಗಳ ಮಂಕಿಬಾತ್!

ದೇಶದೊಳಗ ಲಾಕ್ ಡೌನ್ ಶುರುವಾಗಿ 42 ದಿನದ ಹೊತ್ತಾಯಿತು. ಇಂಥಾದ್ರಾಗ, ಬಾಯಿದ್ದ ಮನುಷಾರಾ ಅನ್ನಕ್ಕಾಗಿ ಬಾಯಿ ಬಿಡುವಂಗಾಗೈತಿ. ಪಾಪ ಆ ತಾಯಿ ಹೃದಯ ತನ್ನ ಮಗಿವಿನ ಅನ್ನಕ್ಕಾಗಿ ಎಷ್ಟು ಪರದಾಡ್ತು ಅಂತಿರಿ. ಈ ದೃಷ್ಯ ಎಂಥವರ ಕರಳು ಹಿಂಡುತ್ತೆ..!

ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ಪಾಠ ಮಾಡುತ್ತಿದ್ದಾರೆ ದತ್ತ ಮೇಷ್ಟ್ರು..!

ಮಾಜಿ ಶಾಸಕ ವೈ.ಎಸ್.ವಿ. ದತ್ತ ಅವರು ಈಗ ಮೇಷ್ಟ್ರ ಆಗಿದ್ದಾರೆ. ಸದ್ಯ ಅವರು ಎಸ್ಸೆಸ್ಸೆಲ್ಸಿ ಮಕ್ಕಳಿಗೆ ಫೇಸ್ ಬುಕ್ ಲೈವ್ ನಲ್ಲಿ ಪಾಠ ಮಾಡುತ್ತಿದ್ದಾರೆ.

ಗದಗನಲ್ಲಿ ಗುಣಮುಖನಾಗಿ ಮನೆಗೆ ಮರಳಿದ ಸೋಂಕಿತ

ಗದಗ:ಕೊರೋನಾ ಸೋಂಕಿತ 62 ವರ್ಷದ ವ್ಯಕ್ತಿ ಇಂದು ಗುಣಮುಖರಾಗಿ ಮನೆಗೆ ಮರಳಿದ್ದಾರೆ. ನಗರದ ಜಿಮ್ಸ್ ಆಸ್ಪತ್ರೆಯಿಂದ…