ಮುಳಗುಂದ : ಇಲ್ಲಿನ ಯಳವತ್ತಿ ರಸ್ತೆಗೆ ಹೊಂದಿಕೊಂಡಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಯ 10 ವಿದ್ಯಾರ್ಥಿಗಳು ಮತ್ತು ಒಬ್ಬ ಸಿಬ್ಬಂದಿಗೆ ಸೋಮವಾರ ಕೋವಿಡ್ ಸೋಂಕು ಧೃಡಪಟ್ಟ ಬಗ್ಗೆ ವರದಿಯಾಗಿದೆ.


ಈ ಕುರಿತು ಗದಗ ಟಿ.ಎಚ್.ಒ ಡಾ.ಪ್ರೀತ್ ಖೋನಾ ಮಾತನಾಡಿ, ವಸತಿ ಶಾಲೆಯ ಕೆಲವರಿಗೆ ನೆಗಡಿ, ಕೆಮ್ಮು, ಜ್ವರದಂತ ಲಕ್ಷಣಗಳು ಕಂಡುಬಂದ ಹಿನ್ನೆಲೆ ಜ.29 ರಂದು 39 ವಿದ್ಯಾರ್ಥಿಗಳಿಗೆ ಕೋವಿಡ್ ರ್ಯಾಡಂ ಪರೀಕ್ಷೆಗೆ ಒಳಪಡಿಸಿ ಗಂಟಲು ಮಾದರಿ ಸಂಗ್ರಹಿಸಲಾಗುತ್ತು. ಈ ಪೈಕಿ 10 ವಿದ್ಯಾರ್ಥಿಳು ಮತ್ತು ಒಬ್ಬ ಸಿಬ್ಬಂದಿಗೆ ಸೋಂಕು ದೃಡಪಟ್ಟಿದೆ. ಆರೋಗ್ಯ ಸಿಬ್ಬಂದಿ ಶಾಲೆಗೆ ಭೇಟಿಕೊಟ್ಟಿದ್ದು ಯಾರೂ ಆತಂಕಪಡುವ ಅಗತ್ಯವಿಲ್ಲ, ಸೌಮ್ಯ ಲಕ್ಷಣಗಳಿದ್ದು ಎಲ್ಲರೂ ಕ್ವಾರಂಟೈನ ವ್ಯವಸ್ಥೆ ಮತ್ತು ಅಗತ್ಯ ಚಿಕಿತ್ಸೆ ನೀಡಲಾಗಿದೆ. 3 ದಿನ ತರಗತಿಗೆ ರಜೆ ಕೊಡುವಂತೆ ಪ್ರಾಚಾರ್ಯರಿಗೆ ತಿಳಿಸಲಾಗಿದೆ. ಎಂದು ಹೇಳಿದರು.

ಸೋಂಕು ಧೃಡಪಟ್ಟ ಹಿನ್ನೆಲೆ ವಸತಿ ಶಾಲೆಗೆ ಸ್ಥಳೀಯ ಪಟ್ಟಣ ಪಂಚಾಯ್ತಿ ಮುಖ್ಯಾಧಿಕಾರ ಎಂ.ಎಸ್.ಬೆಂತೂರ ಭೇಟಿ ನೀಡಿದ್ದರು. ಪೌರಕಾರ್ಮಿಕರಿಂದ ವಿದ್ಯಾರ್ಥಿಗಳ ಕೊಠಡಿಗಳಿಗೆ ಸೋಂಕು ನಾಶಕ ದ್ರಾವಣ ಸಿಂಪಣೆ ಮಾಡಿಸಿದ್ದು ಅಗತ್ಯ ಸ್ವಚ್ಛತೆ ಕ್ರಮ ಕೈಗೊಳ್ಳಲಾಗಿದೆ. ಎಂದು ತಿಳಿಸಿದರು.

Leave a Reply

Your email address will not be published. Required fields are marked *

You May Also Like

ಸುರೇಶ ಬಳಗಾನೂರ್ ಗೆ ರಾಜ್ಯ ಪತ್ರಿಕೋದ್ಯಮ ರತ್ನಪ್ರಶಸ್ತಿ

ಉತ್ತರಪ್ರಭ ಸುದ್ದಿ ಮಸ್ಕಿ: ಕರ್ನಾಟಕ ಪತ್ರಕರ್ತರ ಕ್ಷೇಮಾಭಿವೃದ್ದಿ ಸಂಘದಿಂದ ಪತ್ರಿಕಾ ರಂಗದಲ್ಲಿ ಗಣನೀಯ ಸೇವೆ ಮಾಡಿದ…

ತಮ್ಮ ಅಭ್ಯರ್ಥಿಗಳು ಗೆಲ್ಲಲಿ ಎಂದು ದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ!

ಬೆಂಗಳೂರು : ರಾಜ್ಯದಲ್ಲಿ ಎರಡು ಕ್ಷೇತ್ರಗಳಿಗೆ ಉಪ ಚುನಾವಣೆ ನಡೆದಿದ್ದು, ಮೂರೂ ಪಕ್ಷಗಳ ನಡುವೆ ಪೈಪೋಟಿ ಕಂಡು ಬಂದಿದೆ. ಈ ಹಿನ್ನೆಲೆಯಲ್ಲಿ ತಮ್ಮ ಪಕ್ಷದ ಅಭ್ಯರ್ಥಿಗಳ ಗೆಲುವಿಗಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ದೇವರಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ.

ಕೋವಿಡ್ ಸಂಬಂಧ ದಿನಕ್ಕೊಂದು ನಿರ್ಧಾರ ಅಪಾಯಕಾರಿ: ಸಿದ್ದರಾಮಯ್ಯ

ಬೆಂಗಳೂರು: ಕೋವಿಡ್-19 ನಿಯಂತ್ರಣದ ವಿಷಯದಲ್ಲಿ ಕರ್ನಾಟಕದ ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ಕೈಗೊಳ್ಳುತ್ತಿರುವ ದಿನಕ್ಕೊಂದು ನಿರ್ಧಾರ ಅಪಾಯಕಾರಿಯಾದುದು…

ವಸತಿ ನಿಲಯ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯಿಂದ 2020-21 ನೇ ಸಾಲಿನ ಮೆಟ್ರಿಕ್ ಪೂರ್ವ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಹೊಸ ವಿದ್ಯಾರ್ಥಿಗಳಿಗೆ ವಸತಿ ನಿಲಯ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.