ನಿಡಗುಂದಿ: ಕಲ್ಯಾಣ ಕ್ರಾಂತಿ ಯಲ್ಲಿ ಮಾಚಿದೇವರು ಶರಣ ಧರ್ಮ ಸಂರಕ್ಷಣೆ- ವಚನ ಸಾಹಿತ್ಯದ ರಕ್ಷಣೆಯ ಜವಾಬ್ಧಾರಿ ವಹಿಸಿದ್ದರಿಂದ ತಾಡೋಲೆಯಲ್ಲಿದ್ದ ವಚನಗಳ ಇಂದಿಗೂ‌ ಉಳಿದಿವೆ ಎಂದು ಮಡಿವಾಳರ ಸಂಘದ ನಿಡಗುಂದಿ ತಾಲ್ಲೂಕು ಘಟಕದ ಅಧ್ಯಕ್ಷ ಅಮರ ಮಡಿವಾಳರ ಹೇಳಿದರು.
ತಾಲ್ಲೂಕು ಆಡಳಿತ ತಹಶೀಲ್ದಾರ್ ‌ಕಚೇರಿಯಲ್ಲಿ ಹಮ್ಮಿಕೊಂಡಿದ ಶರಣ ಮಡಿವಾಳ ಮಾಚಿದೇವ ಜಯಂತಿಯಲ್ಲಿ ಅವರು ಮಾತನಾಡಿದರು.


ಅನುಭವ ಮಂಟಪ ಕಟ್ಟುವಲ್ಲಿ ಮಡಿವಾಳ ಮಾಚಿದೇವರ ಕಾಯಕ ಅತಿ ಮಹತ್ವದ್ದು. ದೇಶದ ನಾನಾ ಭಾಗಗಳಿಂದ ಕಲ್ಯಾಣಕ್ಕೆ ಬರುವವರಿಗೆ ಪರೀಕ್ಷಿಸಿ , ‘ಮಡಿ’ ಹಾಸಿ ಸ್ವಾಗತಿಸುವ ಕೆಲಸ ಅವರದಾಗಿತ್ತು. ಮಾಚಿದೇವರ ಪರೀಕ್ಷೆಗೊಳಪಡದ ಹೊರತು ಕಲ್ಯಾಣಪುರ ಪ್ರವೇಶದ ಪ್ರಮಾಣ ಪತ್ರ ಹೊರಗಿನಿಂದ ಬರುವವರಿಗೆ ಸಿಗುತ್ತಿರಲಿಲ್ಲವೆಂಬುದು ಮಾಚಯ್ಯನ ಘನತೆಗೆ ಸಾಕ್ಷಿಯಾಗಿದೆ ಎಂದರು.
ಉಪತಹಶೀಲ್ದಾರ್ ಕೆ.ವೈ. ಹೊಸಮನಿ, ಹನಮಂತ ಮಡಿವಾಳರ ,ಸಂತೋಷ ಮಡಿವಾಳರ,ವೀರೇಶ ಮಡಿವಾಳರ, ರವಿ
ಮಡಿವಾಳರ , ಎಸ್.ಎಚ್. ರಾಠೋಡ, ಎಸ್.ಡಿ. ಮಾಶ್ಯಾಳ, ಆರ್.ಎಸ್. ಇಸ್ಲಾಂಪುರ, ಹೇಮಂತ ನಾಗನೂರ , ರಾಜಶೇಖರ ಮಿಣಜಗಿ ಇದ್ದರು.


ಪಟ್ಟಣ ಪಂಚಾಯ್ತಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ‌‌ ಮುಖ್ಯಾಧಿಕಾರಿ ರಮೇಶ ಮಾಡಬಾಳ, ಸಿದ್ದು ಗೌಡರ, ಪ್ರಶಾಂತ ಪಾಟೀಲ, ರುದ್ರೇಶ ಮುಗಳೊಳ್ಳಿ, ಲಕ್ಷ್ಮಿ ಶೆಟ್ಟಿ, ಗಾಯತ್ರಿ ವಾಲಿಕಾರ ಇತರರು ಇದ್ದರು.

Leave a Reply

Your email address will not be published. Required fields are marked *

You May Also Like

ಪದವಿವೊಂದೇ ಸಾಲದು ಎಲ್ಲ ಜ್ಞಾನವೂ ಬೇಕು-ಡಾ.ಸಿ.ಎಂ.ಜೋಶಿ

ಉತ್ತರಪ್ರಭ ಸುದ್ದಿನಿಡಗುಂದಿ: ಅಧ್ಯಯನ ಕೇವಲ ಪದವಿ ಸಂಪಾದನೆಗೆ ಮಾತ್ರ ಸೀಮಿತವಾಗದೇ ಅದು ಸಮಗ್ರ ಜ್ಞಾನ ಪಡೆಯುವಂತಾಗಬೇಕು.…

ಶಿಕ್ಷಣ ಸಚಿವರ ಫೇಸ್ ಬುಕ್ ಲೈವ್: ಎಸ್.ಎಸ್.ಎಲ್.ಸಿ ಪರೀಕ್ಷೆ ಗೊಂದಲ ನಿವಾರಣೆ

ಲಾಕ್ ಡೌನ್ ಹಿನ್ನೆಲೆ ಎಸ್.ಎಸ್.ಎಲ್.ಸಿ ಪರೀಕ್ಷೆಯನ್ನು ಮುಂದೂಡಲಾಗಿತ್ತು. ಈ ಬಗ್ಗೆ ಹತ್ತು ಹಲವು ಚರ್ಚೆಗಳು ನಡೆದಿದ್ದವು. ಇದಕ್ಕೆ ಸ್ವತ: ಶಿಕ್ಷಣ ಸಚಿವರೇ ಫೇಸ್ ಬುಕ್ ಲೈವ್ ಬರುವ ಮೂಲಕ ಎಸ್.ಎಸ್.ಎಲ್.ಸಿ ಪರೀಕ್ಷೆ ಬಗ್ಗೆ ಇದ್ದ ಗೊಂದಲ ನಿವಾರಿಸಿದ್ದಾರೆ.

ಸದ್ದು ಮಾಡುತ್ತಿದೆ ಶೀತಲ್ ಶೆಟ್ಟಿ ನಿರ್ದೇಶನದ ಚಿತ್ರ!

ಬೆಂಗಳೂರು : ವಿಂಡೋ ಸೀಟ್ ಗಾಗಿ ಶೀತಲ್ ಶೆಟ್ಟಿ ನಿರ್ದೇಶಕರ ಕ್ಯಾಪ್ ಹಾಕಿದ್ದು, ಸದ್ಯ ಅಧಿಕೃತ ಪ್ರಕಟಣೆ ಹೊರ ಬಂದಿದೆ.

ರಾಜ್ಯಪಾಲ ಆಗಮನ- ಆಲಮಟ್ಟಿ ಫೂಲ್ ಟೈಟ್ : ಎತ್ತ ನೋಡಿದರೂ ಪೋಲೀಸ್ ಸರ್ಪಗಾವಲು-ಬಿಗಿ ಭದ್ರತೆ

ಉತ್ತರಪ್ರಭಆಲಮಟ್ಟಿ: ರಾಜ್ಯಪಾಲ ಥಾವರ್ ಚೆಂದ ಗೆಹ್ಲೂಟ್ ಮಂಗಳವಾರ ಮುಸ್ಸಂಜೆ ಆಗಮನದ ಹಿನ್ನಲೆಯಲ್ಲಿ ಕೃಷ್ಣಾ ತೀರದ ಹಸಿರು…